AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನುಮತಿ ಇಲ್ಲದೆ ನಡೆಯುವ ನಮಾಜ್​ ನಿಷೇಧಿಸಿ: ಸಿಎಂಗೆ ಶಾಸಕ ಯತ್ನಾಳ್​ ಪತ್ರ

ಆರೆಸ್ಸೆಸ್​ ಕಾರ್ಯಚಟುವಟಿಕೆಗಳಿಗೆ ರಾಜ್ಯದಲ್ಲಿ ನಿರ್ಬಂಧ ವಿಧಿಸಲು ಹೊರಟಿರುವ ರಾಜ್ಯ ಸರ್ಕಾರಕ್ಕೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಕೌಂಟರ್​ ಕೊಟ್ಟಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಯತ್ನಾಳ್​, ಅನುಮತಿ ಇಲ್ಲದೆ ರಸ್ತೆ, ಸರ್ಕಾರಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ನಡೆಯುವ ನಮಾಜ್​ ನಿಷೇಧಿಸುವಂತೆ ಆಗ್ರಹಿಸಿದ್ದಾರೆ.

ಅನುಮತಿ ಇಲ್ಲದೆ ನಡೆಯುವ ನಮಾಜ್​ ನಿಷೇಧಿಸಿ: ಸಿಎಂಗೆ ಶಾಸಕ ಯತ್ನಾಳ್​ ಪತ್ರ
ಸಿಎಂಗೆ ಶಾಸಕ ಯತ್ನಾಳ್​ ಪತ್ರ
ಕಿರಣ್​ ಹನಿಯಡ್ಕ
| Edited By: |

Updated on:Oct 17, 2025 | 3:02 PM

Share

ಬೆಂಗಳೂರು, ಅಕ್ಟೋಬರ್​ 17: ಸರ್ಕಾರಿ ಸ್ಥಳಗಳು, ಶೈಕ್ಷಣಿಕ ಸಂಸ್ಥೆಗಳು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಧಾರ್ಮಿಕ ಅಥವಾ ರಾಜಕೀಯ ಕಾರ್ಯಕ್ರಮಕ್ಕೆ ಕಡ್ಡಾಯ ಅನುಮತಿ ಪಡೆಯಬೇಕು ಎಂದು ಇತ್ತೀಚೆಗಷ್ಟೇ ರಾಜ್ಯ ಸರ್ಕಾರ ಹೇಳಿತ್ತು. ಅಲ್ಲದೆ ಈ ಸಂಬಂಧ ರೆಗ್ಯುಲೇಷನ್ ಆಫ್ ಯೂಸ್ ಆಫ್ ಗವರ್ನಮೆಂಟ್ ಪ್ರಿಮಿಸಿಸ್ ಆ್ಯಂಡ್​ ಪ್ರಾಪರ್ಟೀಸ್ ಬಿಲ್ – 2025ರ ಡ್ರಾಫ್ಟ್ ಸಿದ್ಧವಾಗಿರುವ ಬಗ್ಗೆಯೂ ವರದಿಯಾಗಿದ್ದವು. ಈ ಬೆನ್ನಲ್ಲೇ ವಿಜಯಪುರ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಸಿಎಂ ಸಿದ್ದರಾಮಯ್ಯ (Siddaramaiah) ಅವರಿಗೆ ಪತ್ರ ಬರೆದಿದ್ದು, ಸರಕಾರಿ ಅನುಮತಿಯಿಲ್ಲದೆ ಸಾರ್ವಜನಿಕ ರಸ್ತೆ ಹಾಗೂ ಸರ್ಕಾರಿ ಆವರಣಗಳಲ್ಲಿ ನಡೆಯುವ ನಮಾಜ್​ಗೂ ಬ್ರೇಕ್​ ಹಾಕುವಂತೆ ಆಗ್ರಹಿಸಿದ್ದಾರೆ.

ಯತ್ನಾಳ್​ ಬರೆದ ಪತ್ರದಲ್ಲಿ ಏನಿದೆ?

ಅನುಮತಿಯಿಲ್ಲದೆ ರಸ್ತೆ ಹಾಗೂ ಸರ್ಕಾರಿ ಆವರಣಗಳಲ್ಲಿ ನಮಾಜ್ ಸಲ್ಲಿಸುತ್ತಿರುವ ದೃಶ್ಯಗಳು ಕಾಣಸಿಗುತ್ತಿವೆ.  ಇಂತಹ ಚಟುವಟಿಕೆಗಳಿಂದ ವಾಹನ ಸಂಚಾರ ಹಾಗೂ ಪಾದಚಾರಿಗಳಿಗೆ ಅಡಚಣೆ ಉಂಟಾಗುತ್ತಿದೆ. ಇದು ಭಾರತೀಯ ಸಂವಿಧಾನದ ಕಲಂ 19 ಮತ್ತು 21ರ ಅಡಿಯಲ್ಲಿ ಖಾತರಿಯಾದ ಮುಕ್ತ ಸಂಚಾರ ಹಾಗೂ ಭದ್ರತೆ ಎಂಬ ಮೂಲಭೂತ ಹಕ್ಕುಗಳು ಉಲ್ಲಂಘನೆಯಾಗಿದೆ. ಹೀಗಾಗಿ ಸರ್ಕಾರದ ಕಚೇರಿಗಳು ಅಥವಾ ಸರ್ಕಾರಿ ಅನುದಾನಿತ ಸಂಸ್ಥೆಗಳಲ್ಲಿ ನಮಾಜ್‌ಗೆ ವಿಶೇಷ ಅನುಮತಿ ನೀಡಬಾರದು. ಇತರ ಸಂಸ್ಥೆಗಳ ಕಾರ್ಯಚಟುವಟಿಕೆ ನಿರ್ಬಂಧಿಸಿ ಇಂತಹ ಧಾರ್ಮಿಕ ಚಟುವಟಿಕೆಗಳಿಗೆ ಅವಕಾಶ ನೀಡುವುದು ಆಡಳಿತದ ಮೇಲಿನ ನಂಬಿಕೆಗೆ ಚ್ಯುತಿ ತರಬಹುದಾದ ಕಾರಣ ಈ ಬಗ್ಗೆ ಜಿಲ್ಲಾಧಿಕಾರಿಗಳು ಮತ್ತು ಪೊಲೀಸ್​ ವರಿಷ್ಠಾಧಿಕಾರಿಗಳಿಗೆ ಸರ್ಕಾರ ಆದೇಶಿಸಬೇಕು. ಅನುಮತಿಯಿಲ್ಲದೆ ರಸ್ತೆಗಳು, ಪಾದಚಾರಿ ಮಾರ್ಗಗಳು ಅಥವಾ ಸರ್ಕಾರಿ ಆವರಣಗಳಲ್ಲಿ ನಮಾಜ್ ಸಲ್ಲಿಸಲು ಅವಕಾಶ ನೀಡದಂತೆ ಸೂಚಿಸಬೇಕು ಎಂದು ಯತ್ನಾಳ್​ ಆಗ್ರಹಿಸಿದ್ದಾರೆ.

ಇದನ್ನೂ ಓದಿ: RSSಗೆ ಅಂಕುಶಕ್ಕೆ ಹೊಸ ವಿಧೇಯಕದ ಡ್ರಾಫ್ಟ್​ ರೆಡಿ: ನಿಯಮ ಮೀರಿದ್ರೆ ಏನೆಲ್ಲ ಶಿಕ್ಷೆ?

ಕರ್ನಾಟಕ ಪೊಲೀಸ್ ಕಾಯ್ದೆ ಮತ್ತು ಸಂಬಂಧಿತ ಸಂಚಾರ ನಿಯಮಾವಳಿಗಳ ಅಡಿಯಲ್ಲಿ ಸಾರ್ವಜನಿಕ ಸ್ಥಳಗಳನ್ನು ಧಾರ್ಮಿಕ ಉದ್ದೇಶಗಳಿಗೆ ಅನಧಿಕೃತವಾಗಿ ಬಳಸುವುದನ್ನು ತಡೆಗಟ್ಟಲು ಸ್ಪಷ್ಟವಾದ SOPಯನ್ನು ಸರ್ಕಾರ ರೂಪಿಸಬೇಕು. ಆ ಮೂಲಕ ಧರ್ಮನಿರಪೇಕ್ಷತೆ, ಕಾನೂನಿನ ಸಮಾನತೆ ಮತ್ತು ಸಾರ್ವಜನಿಕ ಶಿಸ್ತಿನ ಬಗ್ಗೆ ತನ್ನ ಬದ್ಧತೆಯನ್ನು ದೃಢಪಡಿಸಬೇಕು ಎಂದು ಶಾಸಕ ಯತ್ನಾಳ್​ ಆಗ್ರಹಿಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 3:00 pm, Fri, 17 October 25

ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?