AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್ ಸಿಎಂ ಆಗಲು ಪಕ್ಷಾಂತರದ ಹೊಸ ಗೇಮ್: ಹೊಸ ಬಾಂಬ್ ಸಿಡಿಸಿದ ಯತ್ನಾಳ್

ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಹಸ್ತ ಸದ್ದು ಜೋರಾಗಿದ್ದು, ಬಿಜೆಪಿಯ ಕೆಲ ಶಾಸಕರು ವಾಪಸ್​ ಕಾಂಗ್ರೆಸ್​ ವಾಪಸ್​ ಆಗಲಿದ್ದಾರೆ ಎನ್ನುವ ಚರ್ಚೆಗಳು ನಡೆದಿವೆ. ಇದರ ಮಧ್ಯೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಪ್ರತಿಕ್ರಿಯಿಸಿ, ಸಿಎಂ ಸ್ಥಾನ ಗಿಟ್ಟಿಸಿಕೊಳ್ಳುಲು ಡಿಕೆ ಶಿವಕುಮಾರ್ ಈ ಆಪರೇಷನ್ ಪ್ಲಾನ್ ಮಾಡಿದ್ದಾರೆ. ಎಂದು ಹೇಳುವ ರಾಜ್ಯ ರಾಜಕಾರಣದಲ್ಲಿ ಹೊಸ ಅಲೆಯೊಂದನ್ನು ಸೃಷ್ಟಿಸಿದ್ದಾರೆ.

ಡಿಕೆ ಶಿವಕುಮಾರ್ ಸಿಎಂ ಆಗಲು ಪಕ್ಷಾಂತರದ ಹೊಸ ಗೇಮ್: ಹೊಸ ಬಾಂಬ್ ಸಿಡಿಸಿದ ಯತ್ನಾಳ್
ಬಸನಗೌಡ ಪಾಟೀಲ್ ಯತ್ನಾಳ್
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Aug 18, 2023 | 2:36 PM

Share

ವಿಜಯಪುರ,(ಆಗಸ್ಟ್ 18): ಸಿದ್ಧರಾಮಯ್ಯನವರನ್ನು (Siddaramaiah) ಮುಖ್ಯಮಂತ್ರಿ ಪಟ್ಟದಿಂದ ಕೆಳಗಿಳಿಸಿ ಡಿ.ಕೆ.ಶಿವಕುಮಾರ್ ( DK Shivakumar) ರಾಜ್ಯದ ಸೂಪರ್ ಸಿಎಂ ಆಗಲಿದ್ದಾರೆ. ದೆಹಲಿಯಲ್ಲಿ ಡಿಕೆ ಶಿವಕುಮಾರ್ ಯಾರ್ಯಾರ ಮನೆಗೆ ತೆರಳಿ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎನ್ನುವುದರ ಕುರಿತು ಸಂಪೂರ್ಣ ಮಾಹಿತಿಯಿದೆ. ಸಿದ್ದರಾಮಯ್ಯರವರನ್ನು ಇಳಿಸುವುದಕ್ಕೆ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಸೂಕ್ತ ಸಮಯದಲ್ಲಿ ಎಲ್ಲಾ ಮಾಹಿತಿಯನ್ನು ಬಿಡುಗಡೆ ಮಾಡುತ್ತೇನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಹೊಸ ಬಾಂಬ್ ಸಿಡಿಸಿದ್ದಾರೆ.

ವಿಜಯಪುರದಲ್ಲಿ ಇಂದು (ಆಗಸ್ಟ್ 18) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಗಳಿಗೆ ಮಾತ್ರ ಎಲ್ಲಾ ಇಲಾಖೆಗಳ ಸಭೆಯನ್ನು ಕರೆಯಲು ಅವಕಾಶವಿರುತ್ತದೆ, ಉಪ ಮುಖ್ಯಮಂತ್ರಿಗೆ ಆ ಅಧಿಕಾರವಿರುವುದಿಲ್ಲ. ಸಿಎಂ ಹುದ್ದೆಯಲ್ಲಿ ಸಿದ್ದರಾಮಯ್ಯ ಸುಮ್ಮನೆ ಕುಳಿತಿದ್ದಾರಷ್ಟೇ ಅವರದ್ದೇನು ನಡೆಯುವುದಿಲ್ಲ ಎಂದಿದ್ದಾರೆ. ಆದ್ರೆ ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯರವರಿಗೇ ಹೆಚ್ಚಿನ ಶಾಸಕರ ಬೆಂಬಲವಿದೆ. ಆದ್ರೆ, ಡಿಕೆ ಶಿವಕುಮಾರ್​​ಗೆ ಶಾಸಕ ಬೆಂಬಲವಿರುವುದು ಕೇವಲ 15 ಮಾತ್ರ. ಪಕ್ಷದಲ್ಲಿ ಸಿದ್ದರಾಮಯ್ಯರವರ ವರ್ಚಸ್ಸನ್ನು ಕಡಿಮೆ ಮಾಡುವ ಉದ್ದೇಶದಿಂದ ಪಕ್ಷಾಂತರದ ಹೊಸ ಗೇಮ್ ಆಡುತ್ತಿದ್ದಾರೆ, ಇದು ಸಿಎಂ ಪಟ್ಟವೇರಲು ಡಿಕೆ ಶಿವಕುಮಾರ್​ ಪ್ಲಾನ್ ಎಂದು ಪಕ್ಷಾಂತರಕ್ಕೆ ಹೊಸ ತಿರುವನ್ನು ನೀಡಿದ್ದಾರೆ.

ಇದನ್ನೂ ಓದಿ: ಆಪರೇಷನ್ ಹಸ್ತ: ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಗುಟ್ಟು ಬಿಟ್ಟುಕೊಟ್ಟ ಡಿಕೆ ಶಿವಕುಮಾರ್

ಸಿದ್ದರಾಮಯ್ಯ ವಿರುದ್ದ ಇರುವ ಶಾಸಕರನ್ನ ಪಕ್ಷಕ್ಕೆ ವಾಪಸ್ ಕರೆಸಿ ತಮ್ಮ ಶಾಸಕಾಂಗ ಬೆಂಬಲವನ್ನ 30 ರಿಂದ 40 ಹೆಚ್ಚಿಸುವ ಗುರಿ ಹೊಂದಿದ್ದಾರೆ. ಈ ಬೆಳವಣಿಗೆಯ ಕುರಿತು ಸಿದ್ದರಾಮಯ್ಯರವರಿಗೆ ನೋವಿದೆ. ಆದರೆ ಯಾವುದೇ ಕಾರಣಕ್ಕೂ ಅವರು ಸಿಎಂ ಹುದ್ದೆಯನ್ನು ಬಿಟ್ಟುಕೊಡುವುದಿಲ್ಲ. 5 ವರ್ಷದ ಸರ್ಕಾರವಾಗಲಿ 5 ತಿಂಗಳ ಸರ್ಕಾರವಾಗಲಿ ಸಿದ್ದರಾಮಯ್ಯರವರೇ ಕೊನೆಯ ಮುಖ್ಯಮಂತ್ರಿಯಾಗಿರುತ್ತಾರೆ. ಭವಿಷ್ಯದಲ್ಲಿ ಡಿಕೆ ಶಿವಕುಮಾರ್ ರವರಿಗೆ ರಾಜ್ಯದ ಮುಖ್ಯಮಂತ್ರಿಯಾಗುವ ಭಾಗ್ಯವಿಲ್ಲ ಎಂದು ಭವಿಷ್ಯ ನುಡಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?