AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಿಕೆ ಶಿವಕುಮಾರ್ ಸಿಎಂ ಆಗಲು ಪಕ್ಷಾಂತರದ ಹೊಸ ಗೇಮ್: ಹೊಸ ಬಾಂಬ್ ಸಿಡಿಸಿದ ಯತ್ನಾಳ್

ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಹಸ್ತ ಸದ್ದು ಜೋರಾಗಿದ್ದು, ಬಿಜೆಪಿಯ ಕೆಲ ಶಾಸಕರು ವಾಪಸ್​ ಕಾಂಗ್ರೆಸ್​ ವಾಪಸ್​ ಆಗಲಿದ್ದಾರೆ ಎನ್ನುವ ಚರ್ಚೆಗಳು ನಡೆದಿವೆ. ಇದರ ಮಧ್ಯೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಪ್ರತಿಕ್ರಿಯಿಸಿ, ಸಿಎಂ ಸ್ಥಾನ ಗಿಟ್ಟಿಸಿಕೊಳ್ಳುಲು ಡಿಕೆ ಶಿವಕುಮಾರ್ ಈ ಆಪರೇಷನ್ ಪ್ಲಾನ್ ಮಾಡಿದ್ದಾರೆ. ಎಂದು ಹೇಳುವ ರಾಜ್ಯ ರಾಜಕಾರಣದಲ್ಲಿ ಹೊಸ ಅಲೆಯೊಂದನ್ನು ಸೃಷ್ಟಿಸಿದ್ದಾರೆ.

ಡಿಕೆ ಶಿವಕುಮಾರ್ ಸಿಎಂ ಆಗಲು ಪಕ್ಷಾಂತರದ ಹೊಸ ಗೇಮ್: ಹೊಸ ಬಾಂಬ್ ಸಿಡಿಸಿದ ಯತ್ನಾಳ್
ಬಸನಗೌಡ ಪಾಟೀಲ್ ಯತ್ನಾಳ್
ಅಶೋಕ ಯಡಳ್ಳಿ, ವಿಜಯಪುರ
| Edited By: |

Updated on: Aug 18, 2023 | 2:36 PM

Share

ವಿಜಯಪುರ,(ಆಗಸ್ಟ್ 18): ಸಿದ್ಧರಾಮಯ್ಯನವರನ್ನು (Siddaramaiah) ಮುಖ್ಯಮಂತ್ರಿ ಪಟ್ಟದಿಂದ ಕೆಳಗಿಳಿಸಿ ಡಿ.ಕೆ.ಶಿವಕುಮಾರ್ ( DK Shivakumar) ರಾಜ್ಯದ ಸೂಪರ್ ಸಿಎಂ ಆಗಲಿದ್ದಾರೆ. ದೆಹಲಿಯಲ್ಲಿ ಡಿಕೆ ಶಿವಕುಮಾರ್ ಯಾರ್ಯಾರ ಮನೆಗೆ ತೆರಳಿ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎನ್ನುವುದರ ಕುರಿತು ಸಂಪೂರ್ಣ ಮಾಹಿತಿಯಿದೆ. ಸಿದ್ದರಾಮಯ್ಯರವರನ್ನು ಇಳಿಸುವುದಕ್ಕೆ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಸೂಕ್ತ ಸಮಯದಲ್ಲಿ ಎಲ್ಲಾ ಮಾಹಿತಿಯನ್ನು ಬಿಡುಗಡೆ ಮಾಡುತ್ತೇನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಹೊಸ ಬಾಂಬ್ ಸಿಡಿಸಿದ್ದಾರೆ.

ವಿಜಯಪುರದಲ್ಲಿ ಇಂದು (ಆಗಸ್ಟ್ 18) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಗಳಿಗೆ ಮಾತ್ರ ಎಲ್ಲಾ ಇಲಾಖೆಗಳ ಸಭೆಯನ್ನು ಕರೆಯಲು ಅವಕಾಶವಿರುತ್ತದೆ, ಉಪ ಮುಖ್ಯಮಂತ್ರಿಗೆ ಆ ಅಧಿಕಾರವಿರುವುದಿಲ್ಲ. ಸಿಎಂ ಹುದ್ದೆಯಲ್ಲಿ ಸಿದ್ದರಾಮಯ್ಯ ಸುಮ್ಮನೆ ಕುಳಿತಿದ್ದಾರಷ್ಟೇ ಅವರದ್ದೇನು ನಡೆಯುವುದಿಲ್ಲ ಎಂದಿದ್ದಾರೆ. ಆದ್ರೆ ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯರವರಿಗೇ ಹೆಚ್ಚಿನ ಶಾಸಕರ ಬೆಂಬಲವಿದೆ. ಆದ್ರೆ, ಡಿಕೆ ಶಿವಕುಮಾರ್​​ಗೆ ಶಾಸಕ ಬೆಂಬಲವಿರುವುದು ಕೇವಲ 15 ಮಾತ್ರ. ಪಕ್ಷದಲ್ಲಿ ಸಿದ್ದರಾಮಯ್ಯರವರ ವರ್ಚಸ್ಸನ್ನು ಕಡಿಮೆ ಮಾಡುವ ಉದ್ದೇಶದಿಂದ ಪಕ್ಷಾಂತರದ ಹೊಸ ಗೇಮ್ ಆಡುತ್ತಿದ್ದಾರೆ, ಇದು ಸಿಎಂ ಪಟ್ಟವೇರಲು ಡಿಕೆ ಶಿವಕುಮಾರ್​ ಪ್ಲಾನ್ ಎಂದು ಪಕ್ಷಾಂತರಕ್ಕೆ ಹೊಸ ತಿರುವನ್ನು ನೀಡಿದ್ದಾರೆ.

ಇದನ್ನೂ ಓದಿ: ಆಪರೇಷನ್ ಹಸ್ತ: ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಗುಟ್ಟು ಬಿಟ್ಟುಕೊಟ್ಟ ಡಿಕೆ ಶಿವಕುಮಾರ್

ಸಿದ್ದರಾಮಯ್ಯ ವಿರುದ್ದ ಇರುವ ಶಾಸಕರನ್ನ ಪಕ್ಷಕ್ಕೆ ವಾಪಸ್ ಕರೆಸಿ ತಮ್ಮ ಶಾಸಕಾಂಗ ಬೆಂಬಲವನ್ನ 30 ರಿಂದ 40 ಹೆಚ್ಚಿಸುವ ಗುರಿ ಹೊಂದಿದ್ದಾರೆ. ಈ ಬೆಳವಣಿಗೆಯ ಕುರಿತು ಸಿದ್ದರಾಮಯ್ಯರವರಿಗೆ ನೋವಿದೆ. ಆದರೆ ಯಾವುದೇ ಕಾರಣಕ್ಕೂ ಅವರು ಸಿಎಂ ಹುದ್ದೆಯನ್ನು ಬಿಟ್ಟುಕೊಡುವುದಿಲ್ಲ. 5 ವರ್ಷದ ಸರ್ಕಾರವಾಗಲಿ 5 ತಿಂಗಳ ಸರ್ಕಾರವಾಗಲಿ ಸಿದ್ದರಾಮಯ್ಯರವರೇ ಕೊನೆಯ ಮುಖ್ಯಮಂತ್ರಿಯಾಗಿರುತ್ತಾರೆ. ಭವಿಷ್ಯದಲ್ಲಿ ಡಿಕೆ ಶಿವಕುಮಾರ್ ರವರಿಗೆ ರಾಜ್ಯದ ಮುಖ್ಯಮಂತ್ರಿಯಾಗುವ ಭಾಗ್ಯವಿಲ್ಲ ಎಂದು ಭವಿಷ್ಯ ನುಡಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ