ಡಿಕೆ ಶಿವಕುಮಾರ್ ಸಿಎಂ ಆಗಲು ಪಕ್ಷಾಂತರದ ಹೊಸ ಗೇಮ್: ಹೊಸ ಬಾಂಬ್ ಸಿಡಿಸಿದ ಯತ್ನಾಳ್

ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಹಸ್ತ ಸದ್ದು ಜೋರಾಗಿದ್ದು, ಬಿಜೆಪಿಯ ಕೆಲ ಶಾಸಕರು ವಾಪಸ್​ ಕಾಂಗ್ರೆಸ್​ ವಾಪಸ್​ ಆಗಲಿದ್ದಾರೆ ಎನ್ನುವ ಚರ್ಚೆಗಳು ನಡೆದಿವೆ. ಇದರ ಮಧ್ಯೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಪ್ರತಿಕ್ರಿಯಿಸಿ, ಸಿಎಂ ಸ್ಥಾನ ಗಿಟ್ಟಿಸಿಕೊಳ್ಳುಲು ಡಿಕೆ ಶಿವಕುಮಾರ್ ಈ ಆಪರೇಷನ್ ಪ್ಲಾನ್ ಮಾಡಿದ್ದಾರೆ. ಎಂದು ಹೇಳುವ ರಾಜ್ಯ ರಾಜಕಾರಣದಲ್ಲಿ ಹೊಸ ಅಲೆಯೊಂದನ್ನು ಸೃಷ್ಟಿಸಿದ್ದಾರೆ.

ಡಿಕೆ ಶಿವಕುಮಾರ್ ಸಿಎಂ ಆಗಲು ಪಕ್ಷಾಂತರದ ಹೊಸ ಗೇಮ್: ಹೊಸ ಬಾಂಬ್ ಸಿಡಿಸಿದ ಯತ್ನಾಳ್
ಬಸನಗೌಡ ಪಾಟೀಲ್ ಯತ್ನಾಳ್
Edited By:

Updated on: Aug 18, 2023 | 2:36 PM

ವಿಜಯಪುರ,(ಆಗಸ್ಟ್ 18): ಸಿದ್ಧರಾಮಯ್ಯನವರನ್ನು (Siddaramaiah) ಮುಖ್ಯಮಂತ್ರಿ ಪಟ್ಟದಿಂದ ಕೆಳಗಿಳಿಸಿ ಡಿ.ಕೆ.ಶಿವಕುಮಾರ್ ( DK Shivakumar) ರಾಜ್ಯದ ಸೂಪರ್ ಸಿಎಂ ಆಗಲಿದ್ದಾರೆ. ದೆಹಲಿಯಲ್ಲಿ ಡಿಕೆ ಶಿವಕುಮಾರ್ ಯಾರ್ಯಾರ ಮನೆಗೆ ತೆರಳಿ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ ಎನ್ನುವುದರ ಕುರಿತು ಸಂಪೂರ್ಣ ಮಾಹಿತಿಯಿದೆ. ಸಿದ್ದರಾಮಯ್ಯರವರನ್ನು ಇಳಿಸುವುದಕ್ಕೆ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಸೂಕ್ತ ಸಮಯದಲ್ಲಿ ಎಲ್ಲಾ ಮಾಹಿತಿಯನ್ನು ಬಿಡುಗಡೆ ಮಾಡುತ್ತೇನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಹೊಸ ಬಾಂಬ್ ಸಿಡಿಸಿದ್ದಾರೆ.

ವಿಜಯಪುರದಲ್ಲಿ ಇಂದು (ಆಗಸ್ಟ್ 18) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮುಖ್ಯಮಂತ್ರಿಗಳಿಗೆ ಮಾತ್ರ ಎಲ್ಲಾ ಇಲಾಖೆಗಳ ಸಭೆಯನ್ನು ಕರೆಯಲು ಅವಕಾಶವಿರುತ್ತದೆ, ಉಪ ಮುಖ್ಯಮಂತ್ರಿಗೆ ಆ ಅಧಿಕಾರವಿರುವುದಿಲ್ಲ. ಸಿಎಂ ಹುದ್ದೆಯಲ್ಲಿ ಸಿದ್ದರಾಮಯ್ಯ ಸುಮ್ಮನೆ ಕುಳಿತಿದ್ದಾರಷ್ಟೇ ಅವರದ್ದೇನು ನಡೆಯುವುದಿಲ್ಲ ಎಂದಿದ್ದಾರೆ. ಆದ್ರೆ ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯರವರಿಗೇ ಹೆಚ್ಚಿನ ಶಾಸಕರ ಬೆಂಬಲವಿದೆ. ಆದ್ರೆ, ಡಿಕೆ ಶಿವಕುಮಾರ್​​ಗೆ ಶಾಸಕ ಬೆಂಬಲವಿರುವುದು ಕೇವಲ 15 ಮಾತ್ರ. ಪಕ್ಷದಲ್ಲಿ ಸಿದ್ದರಾಮಯ್ಯರವರ ವರ್ಚಸ್ಸನ್ನು ಕಡಿಮೆ ಮಾಡುವ ಉದ್ದೇಶದಿಂದ ಪಕ್ಷಾಂತರದ ಹೊಸ ಗೇಮ್ ಆಡುತ್ತಿದ್ದಾರೆ, ಇದು ಸಿಎಂ ಪಟ್ಟವೇರಲು ಡಿಕೆ ಶಿವಕುಮಾರ್​ ಪ್ಲಾನ್ ಎಂದು ಪಕ್ಷಾಂತರಕ್ಕೆ ಹೊಸ ತಿರುವನ್ನು ನೀಡಿದ್ದಾರೆ.

ಇದನ್ನೂ ಓದಿ: ಆಪರೇಷನ್ ಹಸ್ತ: ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಗುಟ್ಟು ಬಿಟ್ಟುಕೊಟ್ಟ ಡಿಕೆ ಶಿವಕುಮಾರ್

ಸಿದ್ದರಾಮಯ್ಯ ವಿರುದ್ದ ಇರುವ ಶಾಸಕರನ್ನ ಪಕ್ಷಕ್ಕೆ ವಾಪಸ್ ಕರೆಸಿ ತಮ್ಮ ಶಾಸಕಾಂಗ ಬೆಂಬಲವನ್ನ 30 ರಿಂದ 40 ಹೆಚ್ಚಿಸುವ ಗುರಿ ಹೊಂದಿದ್ದಾರೆ. ಈ ಬೆಳವಣಿಗೆಯ ಕುರಿತು ಸಿದ್ದರಾಮಯ್ಯರವರಿಗೆ ನೋವಿದೆ. ಆದರೆ ಯಾವುದೇ ಕಾರಣಕ್ಕೂ ಅವರು ಸಿಎಂ ಹುದ್ದೆಯನ್ನು ಬಿಟ್ಟುಕೊಡುವುದಿಲ್ಲ. 5 ವರ್ಷದ ಸರ್ಕಾರವಾಗಲಿ 5 ತಿಂಗಳ ಸರ್ಕಾರವಾಗಲಿ ಸಿದ್ದರಾಮಯ್ಯರವರೇ ಕೊನೆಯ ಮುಖ್ಯಮಂತ್ರಿಯಾಗಿರುತ್ತಾರೆ. ಭವಿಷ್ಯದಲ್ಲಿ ಡಿಕೆ ಶಿವಕುಮಾರ್ ರವರಿಗೆ ರಾಜ್ಯದ ಮುಖ್ಯಮಂತ್ರಿಯಾಗುವ ಭಾಗ್ಯವಿಲ್ಲ ಎಂದು ಭವಿಷ್ಯ ನುಡಿದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Ashok Yadalli

ನನ್ನ ಹೆಸರು ಅಶೋಕ ಯಡಳ್ಳಿ, ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಕಳೆದ 2012 ರಿಂದ ವಿಜಯಪುರ ಜಿಲ್ಲಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೂ ಮುನ್ನ ಹೈದರಾಬಾದಿನ ರಾಮೋಜಿ ರಾವ್ ಪೀಲ್ಮ್ ಸಿಟಿಯಲ್ಲಿದ್ದ ಈಟಿವಿ ಕನ್ನಡ ಮನರಂಜನೆ ಹಾಗೂ ಸುದ್ದಿ ವಾಹಿನಿಯಲ್ಲಿ ಸೇವೆ ಸಲ್ಲಿಸುತ್ತಿದ್ದೆ. ಇದು ನನ್ನ ಕೆಲಸದ ಬಗ್ಗೆ ಹೇಳಿರೋ ಮಾಹಿತಿಯಾಗಿದ್ದು ವೈಯುಕ್ತಿಕ ಮಾಹಿತಿ ಬಗ್ಗೆ ಹೇಳದಾದರೆ. ನಾನು ಮೂಲತಃ ಧಾರವಾಡ ಜಿಲ್ಲೆಯವ. ಧಾರವಾಡ ತಾಲೂಕಿನ ಅಮ್ಮಿನಬಾವಿ ಗ್ರಾಮ ನಮ್ಮೂರು. ತಂದೆ ತಾಯಿ ಸಹೋದರ ಸಹೋದರಿಯರ ತುಂಬು ಕುಟುಂಬ. ಮೂಲತಃ ಕೃಷಿ ಕುಟುಂಬವಾಗಿದ್ದು, ಹಿರಿಯರಿಂದ ಬಂದ ಜಮೀನುಗಳಿವೆ. ಪ್ರಾಥಮಿಕ ಶಿಕ್ಷಣ ನಮ್ಮೂರಲ್ಲೇ ಬಳಿಕ ಹೈಸ್ಕೂಲ್ ನಿಂದ ಹಿಡಿದು ಪಿಜಿವರೆಗೂ ಧಾರವಾಡ. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋಧ್ಯಮ ಮತ್ತು ಸಮೂಹ ಸಂವಹನ ವಿಭಾಗದಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಟಿವಿ9 ನಲ್ಲಿ ಹಲವಾರು ಉತ್ತಮ ವರದಿಗಳನ್ನು ನೀಡಿದ ಹೆಮ್ಮೆ ತೃಪ್ತಿ ನನಗಿದೆ. ಆಲಮೇಲದ ವಿದ್ಯಾರ್ಥಿನಿಯರ ಮೇಲಿನ ಲೈಂಗಿಕ ದೌರ್ಜನ್ಯ ಬಹಿರಂಗ ಮಾಡಿದ್ದು, ವಿಜಯಪುರ ಬಾಗಲಕೋಟೆಯಲ್ಲಿ ಕೊಳವೆ ಬಾವಿಯಲ್ಲಿ ಬಿದ್ದಿದ್ದ ಮಕ್ಕಳ ಕುರಿತ ವರದಿ. ಹಾವಿನ ಸೇಡಿಗೆ ಒಳಗಾಗಿದ್ದ ಯುವಕನ ಸಮಸ್ಯೆ ಬಗೆ ಹರಿಸಿದ್ದು. ಉಷ್ಣ ವಿದ್ಯುತ್ ಸ್ಥಾವರದ ಗಲಾಟೆ ಹೀಗೆ ಹಲವಾರು ವಿಶೇಷ ಸುದ್ದಿಗಳು, ಚುನಾವಣೆ, ರಾಜಕೀಯ, ಕ್ರೀಡೆ, ಹೀಗೂ ಉಂಟೇ, ವಾರೆಂಟ್, ಮಾರುವೇಷ, ಸಾಧನೆ, ಕೃಷಿ ಹೀಗೆ ಅನೇಕ ವಿಚಾರಗಳ ಕುರಿತ ಸುದ್ದಿಗಳಿಗೆ ನ್ಯಾಯ ಒದಗಿಸಿದ್ದೇನೆಂದು ನಂಬಿದ್ದೇನೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ಉತ್ತಮ ವರದಿಗಳನ್ನು ಮಾಡುವ ಹಂಬಲ - ಆಸಕ್ತಿಯಿದೆ. ಕ್ರೀಡೆ, ಸಾಮಾಜಿಕ, ಕೃಷಿಯಲ್ಲಿ ಹೆಚ್ಚಿನ ಆಸಕ್ತಿಯಿದೆ. ಧನ್ಯವಾದಗಳು.......

Read More
Follow Us