AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಂಜನೇಯ ಅವಿವೇಕಿ, ಸಿದ್ದರಾಮಯ್ಯನವರನ್ನೇ ಪೂಜಿಸಲಿ: ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ

‘ಇಂತಹ ಅವಿವೇಕಿಗಳು, ಸ್ವಜನಪಕ್ಷಪಾತಿಗಳು, ಹಿಂದೂ ವಿರೋಧಿಗಳು ಈ ಹಿಂದೆ ರಾಜ್ಯದ ಸಚಿವಾರಿಗಿದ್ದರು ಎಂಬುದು ರಾಜ್ಯದ ದೌರ್ಭಾಗ್ಯ. ಆಂಜನೇಯ ಮನೆಯಲ್ಲಿ ಸಿದ್ದರಾಮಯ್ಯ ಅವರಿಗೆ ಪೂಜಾ ಕೈಂಕರ್ಯ ನೆರವೇರಿಸಲಿ’ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.

ಆಂಜನೇಯ ಅವಿವೇಕಿ, ಸಿದ್ದರಾಮಯ್ಯನವರನ್ನೇ ಪೂಜಿಸಲಿ: ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ
ಬಸನಗೌಡ ಪಾಟೀಲ್ ಯತ್ನಾಳ್
TV9 Web
| Edited By: |

Updated on:Jan 03, 2024 | 8:31 AM

Share

ಬೆಂಗಳೂರು, ಜನವರಿ 2: ಕಾಂಗ್ರೆಸ್ ನಾಯಕ, ಮಾಜಿ ಸಚಿವ ಹೆಚ್ ಆಂಜನೇಯ (H Anjaneya) ಅವಿವೇಕಿ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಟೀಕಿಸಿದ್ದಾರೆ. ಭಗವಾನ್ ರಾಮನನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಹೋಲಿಸಿ ಮಾತನಾಡಿದ್ದಕ್ಕೆ ಆಂಜನೇಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಯತ್ನಾಳ್, ಆಂಜನೇಯ ಮನೆಯಲ್ಲಿ ಸಿದ್ದರಾಮಯ್ಯ ಅವರಿಗೆ ಪೂಜಾ ಕೈಂಕರ್ಯ ನೆರವೇರಿಸಲಿ ಎಂದು ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶ ಪ್ರಕಟಿಸಿದ್ದಾರೆ.

‘ಇಂತಹ ಅವಿವೇಕಿಗಳು, ಸ್ವಜನಪಕ್ಷಪಾತಿಗಳು, ಹಿಂದೂ ವಿರೋಧಿಗಳು ಈ ಹಿಂದೆ ರಾಜ್ಯದ ಸಚಿವರಾಗಿದ್ದರು ಎಂಬುದು ರಾಜ್ಯದ ದೌರ್ಭಾಗ್ಯ! ಆಂಜನೇಯಪ್ಪನವರ ಪೂಜ್ಯ ದೇವರಾದ ಸಿದ್ದರಾಮಯ್ಯನವರಿಗೆ ಅವರ ಮನೆಯಲ್ಲಿ ಸಕಲ ರೀತಿಯಲ್ಲಿ ಪೂಜಾ ಕೈಂ-ಕಾರ್ಯಗಳು ನಡೆಯಲಿ. ಹಿಂದೂಗಳ ಆರಾಧ್ಯ ದೈವ ಶ್ರೀ ರಾಮ ದೇವರ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿ ಘನತೆಯಿಂದ, ಗೌರವದಿಂದ ವರ್ತಿಸಲಿ’ ಎಂದು ಎಕ್ಸ್ ಸಂದೇಶದಲ್ಲಿ ಯತ್ನಾಳ್ ಉಲ್ಲೇಖಿಸಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯನವರೇ ರಾಮ, ಇನ್ನು ಅಯೋಧ್ಯೆಯ ರಾಮನನ್ನೇಕೆ ಹೋಗಿ ಪೂಜಿಸಬೇಕು: ಹೆಚ್.ಆಂಜನೇಯ ಪ್ರಶ್ನೆ

ಸೋಮವಾರ ಚಿತ್ರದುರ್ಗದಲ್ಲಿ ಮಾತನಾಡಿದ್ದ ಆಂಜನೇಯ, ಸಿಎಂ ಸಿದ್ದರಾಮಯ್ಯ ಅವರೇ ಒಬ್ಬ ರಾಮ, ಇನ್ನು ಅವರು ಆ ರಾಮನನ್ನು (ಅಯೋಧ್ಯೆಯ ರಾಮನ ಉದ್ದೇಶಿಸಿ) ಹೋಗಿ ಯಾಕೆ ಪೂಜಿಸಬೇಕು ಎಂದು ಪ್ರಶ್ನಿಸಿದ್ದರು. ಅಯೋಧ್ಯೆಯ ರಾಮ ಮಂದಿರ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿಲ್ಲ ಎಂಬ ಕುರಿತಾದ ಚರ್ಚೆಗೆ ಚಿತ್ರದುರ್ಗದಲ್ಲಿ ಪ್ರತಿಕ್ರಿಯಿಸಿದ ಅವರು, ರಾಮಮಂದಿರ ಉದ್ಘಾಟನೆಗೆ ಕರೆಯದಿದ್ದದ್ದೇ ಒಳ್ಳೆಯದಾಯಿತು ಎಂದು ಹೇಳಿದ್ದರು. ಇದಕ್ಕೆ ಯತ್ನಾಳ್ ತಿರುಗೇಟು ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:54 am, Tue, 2 January 24

ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು