AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಸ್​ ಯಡಿಯೂರಪ್ಪ, ಬಿವೈ ವಿಜಯೇಂದ್ರ ವಿರುದ್ಧ ಹರಿಹಾಯ್ದ ಬಸವನಗೌಡ ಪಾಟೀಲ್ ಯತ್ನಾಳ್; ಏನಂದ್ರು ಗೊತ್ತಾ?

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅಡ್ಜಸ್ಟ್‌ಮೆಂಟ್ ಮಾಡಿಕೊಂಡುಯಾರ್ಯಾರು ತಮ್ಮ ಮಕ್ಕಳ ಸಲುವಾಗಿ ವೀಕ್ ಕ್ಯಾಂಡೆಟ್ ಹಾಕಿಕೊಂಡರು, ಸೋಮಣ್ಣನ ಯಾರು ಸೋಲಿಸಿದ್ರು ಎಂದು ಎಲ್ಲರಿಗೂ ಗೊತ್ತಿದೆ. ಅದನ್ನು ಮೇಲಿನವರು ತಿಳಿದುಕೊಂಡು ನಿರ್ಣಯ ಮಾಡಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ವಾಗ್ದಾಳಿ ನಡೆಸಿದ್ದಾರೆ.

ಬಿಎಸ್​ ಯಡಿಯೂರಪ್ಪ, ಬಿವೈ ವಿಜಯೇಂದ್ರ ವಿರುದ್ಧ ಹರಿಹಾಯ್ದ ಬಸವನಗೌಡ ಪಾಟೀಲ್ ಯತ್ನಾಳ್; ಏನಂದ್ರು ಗೊತ್ತಾ?
ಬಸವನಗೌಡ ಪಾಟೀಲ್ ಯತ್ನಾಳ್
ಮಂಜುನಾಥ ಕೆಬಿ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Dec 09, 2023 | 5:07 PM

Share

ಹಾಸನ, ಡಿ.09: ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಬಿ.ವೈ ವಿಜಯೇಂದ್ರ ವಿರುದ್ಧ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ (Basavanagowda Patil Yatnal) ಹರಿಹಾಯ್ದಿದ್ದಾರೆ. ಕಲ್ಲಡ್ಕಕ್ಕೆ ತೆರಳುವ ಮಾರ್ಗ ಮಧ್ಯೆ ಹಾಸನ(Hassan)ದಲ್ಲಿ ಮಾತನಾಡಿದ ಅವರು ‘ ಅಧಿವೇಶನ ನಡೆದಿರುವುದು ನೋಡಿದಿರಲ್ಲಾ, ಎಲ್ಲಿ ಜೋಡೆತ್ತು, ಒಂದು ದೆಹಲಿಗೆ ಹೋಗಿದೆ, ಒಂದು ಬೆಂಗಳೂರಿನಲ್ಲಿದೆ. ಜೋಡೆತ್ತುಗಳು ಇಬ್ಬರು ದೆಹಲಿಗೆ ಹೋಗುತ್ತೇವೆ ಎಂದಿದ್ದರು. ಪಾಪ ಒಂದು ಎತ್ತನ್ನು ಬಿಟ್ಟು ಹೋಗಿದ್ದಾರೆ ಎನ್ನುವ ಮೂಲಕ ವಾಗ್ದಾಳಿ ನಡೆಸಿದ್ದಾರೆ.

ಇದೇ ವೇಳೆ ವಿ.ಸೋಮಣ್ಣ ಅಸಮಾಧಾನ ವಿಚಾರ ‘ ಪಕ್ಷ ಯಾರೂ ಬಿಡುವುದಿಲ್ಲ, ನರೇಂದ್ರ ಮೋದಿಯವರು ಈ‌ ದೇಶದ ಪ್ರಧಾನಿ ಆಗಬೇಕೆಂಬುದು ಎಲ್ಲರ ಕಲ್ಪನೆ. ನರೇಂದ್ರಮೋದಿ, ದೇಶ, ಹಿಂದುತ್ವದ ಸಲುವಾಗಿ ಯಾರೂ ಪಕ್ಷ ಬಿಡುವುದಿಲ್ಲ. ಹಿಂದೆ ಅಡ್ಜಸ್ಟ್‌ಮೆಂಟ್ ಮಾಡಿಕೊಂಡಿದ್ದರಲ್ಲ ಆ ಲೀಡರ್ ಹಾಗೇ ಯಾರೂ ಕೆಲಸ‌ ಮಾಡೋದಿಲ್ಲ ಎಂದು ವಿಧಾನಸಭೆ ಚುನಾವಣೆಯಲ್ಲಿ ಹೊಂದಾಣಿಕೆ ರಾಜಕೀಯ ಆಗಿದೆ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ:ಮೌಲ್ವಿ ತನ್ವೀರ್ ಜೊತೆ ವ್ಯಾಪಾರ ಪಾಲುದಾರ ಆರೋಪ: ಸಿದ್ದರಾಮಯ್ಯಗೆ ಸವಾಲು ಹಾಕಿದ ಯತ್ನಾಳ್

28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಗೆದ್ದರೆ ಅದು ಮೋದಿಯವರಿಂದ ಬರುತ್ತದೆ, ಈ ಮಹಾಪುರುಷರಿಂದ ಅಲ್ಲ!

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅಡ್ಜಸ್ಟ್‌ಮೆಂಟ್ ಮಾಡಿಕೊಂಡುಯಾರ್ಯಾರು ತಮ್ಮ ಮಕ್ಕಳ ಸಲುವಾಗಿ ವೀಕ್ ಕ್ಯಾಂಡೆಟ್ ಹಾಕಿಕೊಂಡರು, ಸೋಮಣ್ಣನ ಯಾರು ಸೋಲಿಸಿದ್ರು ಎಂದು ಎಲ್ಲರಿಗೂ ಗೊತ್ತಿದೆ. ಅದನ್ನು ಮೇಲಿನವರು ತಿಳಿದುಕೊಂಡು ನಿರ್ಣಯ ಮಾಡಬೇಕು. 28 ಲೋಕಸಭಾ ಕ್ಷೇತ್ರಗಳಲ್ಲೂ ಬಿಜೆಪಿ ಗೆದ್ದರೆ ಅದು ಮೋದಿಯವರಿಂದ ಬರುತ್ತದೆ ಹೊರತು ಈ ಮಹಾಪುರುಷರಿಂದ ಅಲ್ಲ ಎಂದು ಟಾಂಗ್​ ಕೊಟ್ಟಿದ್ದಾರೆ.

ಇನ್ನು ನನ್ನ ಬಿಟ್ಟರೆ ಕರ್ನಾಟಕದಲ್ಲಿ ಜೀರೋ ಎಂದು ಹೈಕಮಾಂಡ್ ಬಳಿ ಹೇಳಿರುತ್ತಾರೆ. ಇದೊಂದು ಲೋಕಸಭೆ ಮುಗಿಲಿ ಎಂದು ಅವರೂ ಸುಮ್ಮನೆ ಇರಬಹುದು. ಏನು ಮಾಡೋದು ಒಂದಿಬ್ಬರು ಆ ರೀತಿ ವರದಿ‌ ಕೊಡುವವರು ಇದ್ದಾರೆ. ಇಂಟಲಿಜೆನ್ಸ್ ಇದೆ, ಎಲ್ಲಾ ಮಾಹಿತಿ ಇದ್ರು ಸಹಿತ ಒಬ್ಬ ವ್ಯಕ್ತಿ ಬ್ಲಾಕ್‌ಮೇಲ್‌ಗೆ ಅಂಜಿದರೆ ಹೇಗೆ, ಭವಿಷ್ಯ ಲೋಕಸಭೆಗೆ ಏನು ಎಫೆಕ್ಟ್ ಆಗಲ್ಲ. ಇವರನ್ನು ಅಧ್ಯಕ್ಷರು ಮಾಡಲಿಲ್ಲ ಅಂದರು ಬಿಜೆಪಿಯೇ ನಿಶ್ಚಿತವಾಗಿ ಬರುತ್ತದೆ. ಏನೂ ಆಟ ಹೂಡಿದ್ದಾರೆ ನೋಡೋಣ ಎಂದು ಬಿವೈ ವಿಜಯೇಂದ್ರ ವಿರುದ್ದ ಯತ್ನಾಳ್​ ನೇರಾನೇರ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ:ಪಾಕ್, ಮುಸ್ಲಿಂ, ಐಸಿಸ್ ಸೇರಿ ಐದು ಪದಗಳನ್ನು ಮಾತ್ರ ಯತ್ನಾಳ್ ಮಾತಾಡುತ್ತಾರೆ: ಸಂತೋಷ್ ಲಾಡ್

ಇನ್ನು ಸಿಎಂ ಸಿದ್ದರಾಮಯ್ಯ ಜೊತೆ ಸಭೆಯಲ್ಲಿ ಭಾಗಿಯಾಗಿದ್ದ ಮೌಲ್ವಿಗೆ ಐಸಿಸ್ ನಂಟಿದೆ ಎಂಬ ಯತ್ನಾಳ್ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ಹೇಳಿಕೆಯನ್ನು ಯತ್ನಾಳ್ ಮತ್ತೆ ಸಮರ್ಥನೆ ಮಾಡಿಕೊಂಡಿದ್ದಾರೆ. ‘ನಾವು ಎಲ್ಲಾ ದಾಖಲೆಗಳನ್ನು ಕೊಟ್ಟಿದಿವಿ. ಎನ್ ಐ ಎ ಕೂಡ ಎಲ್ಲಾ ಮಾಹಿತಿ ಪಡೆಯುತ್ತಿದ್ದಾರೆ. ಸಿದ್ದರಾಮಯ್ಯ ಅವರು ಏನು ಮಾಡಿದರು ಸರಿ, ನಾನು ಅವರಿಗೆ ಹೇಳ್ತಿನಿ ನಿಜವಾಗಿಯೂ ಅದರಿಂದ ಮುಕ್ತವಾಗಬೇಕಾದರೆ ಎನ್.ಐ.ಎ ಗೆ ಕೊಡಿ. ಅವರು ಒಳ್ಳೆಯವರೊ, ಅವರು ಇರಾಕ್​, ಪಾಕಿಸ್ತಾನಕ್ಕೆ ಯಾಕೆ ಹೋಗಿದ್ದರು. ಉತ್ತರ ಪ್ರದೇಶ, ಮುಂಬೈಗೆ ಯಾಕೆ ಹೋಗ್ತಾರೆ. ಇದೆಲ್ಲದರ ಮಾಹಿತಿ ಇದೆ, ಎನ್.ಐ ಎ ಅವರು ತನಿಖೆ ಮಾಡ್ತಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:57 pm, Sat, 9 December 23

Follow Us
Manjunath KB
Manjunath KB
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ