AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಸಾರ್ಟ್​ನಲ್ಲಿ ಶಾಮನೂರು ಶಿವಶಂಕರಪ್ಪ ಭೇಟಿಯಾಗಿದ್ಯಾಕೆ? ಕಾರಣ ಕೊಟ್ಟ ಬೊಮ್ಮಾಯಿ

ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹಾಗೂ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ರಹಸ್ಯ ಸಭೆ ರಾಜ್ಯ ರಾಜಕಾರನದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಇನ್ನು ಈ ಬಗ್ಗೆ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ.

ರೆಸಾರ್ಟ್​ನಲ್ಲಿ ಶಾಮನೂರು ಶಿವಶಂಕರಪ್ಪ ಭೇಟಿಯಾಗಿದ್ಯಾಕೆ? ಕಾರಣ ಕೊಟ್ಟ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ
Follow us
ರಮೇಶ್ ಬಿ. ಜವಳಗೇರಾ
|

Updated on: Jun 14, 2023 | 12:54 PM

ಬೆಂಗಳೂರು: ಬಿಜೆಪಿ (BJP) ಹಿರಿಯ ನಾಯಕರು ಕಾಂಗ್ರೆಸ್ (Congress) ಜೊತೆಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂಬ ಅರ್ಥದಲ್ಲಿ ಪ್ರತಾಪ ಸಿಂಹ ಹಾಗೂ ಸಿಟಿ ರವಿ ಹೇಳಿಕೆ ನೀಡಿರುವುದು ಕಮಲ ಪಾಳಯದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿ ಮಾಡಿದೆ. ಇದರ ನಡುವೆ ಕಾಂಗ್ರೆಸ್ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹಾಗೂ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ರಹಸ್ಯ ಮಾತುಕತೆ ನಡೆಸಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ಉಭಯ ನಾಯಕರ ಫೋಟೋ ವೈರಲ್​ ಆಗುತ್ತಿದ್ದಂತೆಯೇ ಎಚ್ಚೆತ್ತ ಬೊಮ್ಮಾಯಿ, ಶಮನೂರು ಭೇಟಿಯಾಗಿರುವ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿ: ಹೊಂದಾಣಿಕೆ ರಾಜಕಾರಣದ ಗದ್ದಲದ ಮಧ್ಯೆ ಕಾಂಗ್ರೆಸ್ ಹಿರಿಯ ನಾಯಕ, ಬೊಮ್ಮಾಯಿ ರಹಸ್ಯ ಸಭೆ

ಬೆಂಗಳೂರಿನಲ್ಲಿ ಇಂದು(ಜೂನ್ 14) ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿರುವ ಬೊಮ್ಮಾಯಿ, ಶಾಮನೂರು ಶಿವಶಂಕರಪ್ಪ ಹಿರಿಯರು, ದೂರದ ಸಂಬಂಧಿಯೂ ಹೌದು. ಈ ಹಿಂದೆಯೂ ಹಲವು ಬಾರಿ ನಮ್ಮ ಮನೆಯಲ್ಲಿ ಭೇಟಿಯಾಗಿದ್ದೇವೆ. ಶಾಸಕ ಶಾಮನೂರು ಭೇಟಿಗೆ ರಾಜಕಾರಣ ಬೆರೆಸುವುದು ಸೂಕ್ತವಲ್ಲ. ಶಿಗ್ಗಾಂವಿಯಿಂದ ಬರುವಾಗ ಹೋಟೆಲ್​ಗೆ ನಾನು ಊಟಕ್ಕೆ ಹೋಗಿದ್ದೆ. ಶಾಮನೂರು ಮೊಮ್ಮಕ್ಕಳ ಹೊಸ ಸಂಬಂಧ ಬಗ್ಗೆ ಚರ್ಚಿಸಲು ಸೇರಿದ್ದರು. ಆಗ 10 ನಿಮಿಷಗಳ ಕಾಲ ಉಭಯ ಕುಶಲೋಪರಿ ಮಾತುಕತೆ ಆಗಿದೆ ಎಂದು ಸ್ಪಷ್ಟಪಡಿಸಿದರು.

ಶಾಮನೂರು ಜತೆ ಯಾವುದೇ ರಾಜಕೀಯ ವಿಷಯ ಪ್ರಸ್ತಾಪ ಆಗಿಲ್ಲ. ಹಲವಾರು ಬಾರಿ ನಾವು ಅವರು ನಮ್ಮ ಮನೆಯಲ್ಲಿ ಭೇಟಿ ಆಗಿದ್ದೇವೆ. ಸ್ನೇಹ ಸಂಬಂಧ ಬೇರೆ, ರಾಜಕೀಯ ಸಂಬಂಧವೇ ಬೇರೆ. ನನ್ನ ರಾಜಕೀಯ ನಿಲುವಿನಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಕಾಂಗ್ರೆಸ್​ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಹಾಗೂ ಮಾಜಿ ಸಿಎಂ ಬೊಮ್ಮಾಯಿ ಅವರು ನಿನ್ನೆ(ಜೂನ್ 13) ದಾವಣಗೆರೆ ಹೊರವಲಯದ ಖಾಸಗಿ ರೆಸಾರ್ಟ್​ನಲ್ಲಿ ಭೇಟಿ ಮಾಡಿದ್ದು, 25 ನಿಮಿಷಗಳ ಕಾಲ ರಹಸ್ಯ ಮಾತುಕತೆ ಮಾಡಿದ್ದರು. ನಿನ್ನೆ ಸಂಜೆ ಶಾಮನೂರು ಶಿವಶಂಕರಪ್ಪ ಅವರನ್ನ ಬೊಮ್ಮಾಯಿ ಅವರು ದಾವಣಗೆರೆ ನಗರದ ಹೊರವಲಯದ ಪುಣೆ ಬೆಂಗಳೂರು ಹೆದ್ದಾರಿಗೆ ಹೊಂದಿಕೊಂಡಿರುವ ಅಪೂರ್ವ ರೆಸಾರ್ಟ್​ಗೆ ಕರೆಸಿಕೊಂಡು ಗುಪ್ತ್​-ಗುಪ್ತ್​ ಚರ್ಚೆ ನಡೆಸಿದ್ದರು. ಉಭಯ ನಾಯಕರ ಭೇಟಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿದೆ.

Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Devotional: ಅಕ್ಷತೆ ಇಲ್ಲದ ಮನೆಯಲ್ಲಿ ಐಶ್ವರ್ಯ ಇರೋದಿಲ್ಲ ಯಾಕೆ?
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ