AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂವಿಧಾನದ ಅನುಗುಣವಾಗಿ SC-ST ಸಮುದಾಯಕ್ಕೆ ಮೀಸಲಾತಿ ಕೊಟ್ಟಿದ್ದೇವೆ: ಸುರ್ಜೆವಾಲಗೆ ಬೊಮ್ಮಾಯಿ ತಿರುಗೇಟು

ಎಸ್ ಸಿ, ಎಸ್ ಟಿ ಸಮುದಾಯಕ್ಕೆ ಮೀಸಲಾತಿಗೆ ಸಂಬಂಧಿಸಿದಂತೆ ಕರ್ನಾಟಕ ಕಾಂಗ್ರೆಸ್​ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ ಆರೋಪಕ್ಕೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಸಂವಿಧಾನದ ಅನುಗುಣವಾಗಿ SC-ST ಸಮುದಾಯಕ್ಕೆ ಮೀಸಲಾತಿ ಕೊಟ್ಟಿದ್ದೇವೆ: ಸುರ್ಜೆವಾಲಗೆ ಬೊಮ್ಮಾಯಿ ತಿರುಗೇಟು
Basavaraj Bommai And Ranadeep singh surjewala
ರಮೇಶ್ ಬಿ. ಜವಳಗೇರಾ
|

Updated on:Apr 03, 2023 | 11:24 AM

Share

ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಿ ಸಮುದಾಯದ ಮೀಸಲಾತಿ(SC, ST Reservation) ಹೆಚ್ಚಳಕ್ಕೆ ಸಂಬಂಧಿಸಿದಂತೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ(Ranadeep singh surjewala) ಆರೋಪಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ(Basavaraj Bommai) ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಬೊಮ್ಮಾಯಿ, ನಾವೂ ಕೊಟ್ಟಿರುವ ಮೀಸಲಾತಿ ಕಾನೂನು ಬಾಹಿರ, ಸಂವಿಧಾನ ವಿರೋಧಿ ಎಂದು ಕಾಂಗ್ರೆಸ್ ವಕ್ತಾರರು ಮತ್ತು ಸುರ್ಜೆವಾಲ ಟ್ವೀಟ್ ಮಾಡಿ ಕೆಲ ಕೆಳಮಟ್ಟದ ಶಬ್ದಗಳನ್ನ ಬಳಸಿದ್ದಾರೆ. ಕಾಂಗ್ರೆಸ್ ಗೆ ಅಂಬೇಡ್ಕರ್‌ ಮೇಲೆ ಪ್ರೀತಿ ಇಲ್ಲ. ಅಂಬೇಡ್ಕರ್‌ ಬರೆದಿರುವ ಸಂವಿಧಾನದ ಮೇಲೆ ನಂಬಿಕೆ ಇಲ್ಲ. ಜನಸಂಖ್ಯೆ ಆಧಾರಿತವಾಗಿ ಕೊಡಬೇಕು ಎಂದು ಸಂವಿಧಾನವಿದಲ್ಲಿದೆ. ನಾವೂ ಅದರ ಅನುಗುಣವಾಗಿ ಎಸ್ ಸಿ, ಎಸ್ ಟಿ ಸಮುದಾಯಕ್ಕೆ ಮೀಸಲಾತಿ ಕೊಟ್ಟಿದ್ದೇವೆ. ಶೆಡ್ಯೂಲ್ 9 ಗೆ ಸೇರಿಸಲು ಶಿಫಾರಸ್ಸು ಮಾಡಿದ್ದೇವೆ. ಅವರ ಕಾಲದಲ್ಲಿ ಮಾಡಿಲ್ಲ, ಅವರನ್ನ ಬರೀ ವೋಟ್ ಬ್ಯಾಂಕ್ ಗಾಗಿ ಬಳಸಿಕೊಂಡಿದ್ದರು ಕಾಂಗ್ರೆಸ್​ ವಿರುದ್ಧ ಹರಿಹಾಯ್ದರು.

ಇದನ್ನೂ ಓದಿ: Karnataka Assembly Election 2023 Live: ಸಿದ್ದರಾಮಯ್ಯ ಮತ್ತೆ ಸಿಎಂ ಆಗಲೆಂದು ಶಬರಿಮಲೆ ಅಯ್ಯಪ್ಪ ಸ್ವಾಮಿಗೆ ಹರಕೆ

ನಾವು ಎಸ್​ಸಿ, ಎಸ್​ಟಿ ಸಮುದಾಯದ ಮೀಸಲಾತಿ ಹೆಚ್ಚಳ ಮಾಡಿದ್ದೇವೆ. ಅಲ್ಲದೇ 9ನೇ ಶೆಡ್ಯೂಲ್​ನಲ್ಲಿ ಸೇರಿಸಲು ಶಿಫಾರಸು ಸಹ ಮಾಡಿದ್ದೇವೆ. ಈ ಮೂಲಕ ಆ ಸಮುದಾಯಗಳ ಬೇಡಿಕೆ ಈಡೇರಿಸಿದ್ದೇವೆ. ನಾವು ಸಾಮಾಜಿಕ ನ್ಯಾಯ ಕೊಟ್ಟಿದ್ದಕ್ಕೆ ಕಾಂಗ್ರೆಸ್​ ಟೀಕೆ ಮಾಡುತ್ತಿದೆ. ಕಾಂಗ್ರೆಸ್ ದಲಿತ, ಲಿಂಗಾಯುತ, ಒಕ್ಕಲಿಗರ ವಿರೋಧಿಯಾಗಿದೆ. ನಾವು ಎಲ್ಲರಿಗೂ ನ್ಯಾಯ ಕೊಡಿಸುವ ಕೆಲಸ ಮಾಡುತ್ತಿದ್ದೇವೆ. ನಾವು ಘೋಷಿಸಿರುವ ಮೀಸಲಾತಿ ರದ್ದು ಮಾಡುವುದಾಗಿ ಹೇಳಿದ್ದಾರೆ. ಕಾಂಗ್ರೆಸ್​ಗೆ ಮೀಸಲಾತಿ ಹಿಂಪಡೆಯುವ ಶಕ್ತಿ, ಅವಕಾಶನೂ ಇಲ್ಲ. ಮೀಸಲಾತಿ ಹೆಚ್ಚಳ ಮಾಡಿದ್ದಕ್ಕೆ ಕಾಂಗ್ರೆಸ್ಸಿಗರು ತಳಮಳಗೊಂಡಿದ್ದಾರೆ ಟಾಂಗ್ ಕೊಟ್ಟರು.

ನಾಗಮೋಹನ್ ದಾಸ್ ವರದಿ ಬಂದು 4 ವರ್ಷ ಆಯ್ತು ಎಂದು ಸುಳ್ಳು ಹೇಳುತ್ತಿದ್ದಾರೆ. ಯಡಿಯೂರಪ್ಪನವರ ಅವಧಿಯಲ್ಲಿ ರೀಪೋರ್ಟ್ ಬಂದ ಕೂಡಲೇ 6 ತಿಂಗಳಿಗೆ ಸಚಿವ ಸಂಪುಟ ಸಭೆ ನಡೆಸಿದ್ದರು. ಕ್ಯಾಬಿನೇಟ್ ನಲ್ಲಿ ಅವರ ಪರ ನಿರ್ಣಯ ಮಾಡಿದ್ದೆವು. ಅವರ ಪರ ಆ್ಯಕ್ಟ ಮಾಡಿ ನಮ್ಮ ಸರ್ಕಾರ ಆದೇಶ ತಂದು ಶೆಡ್ಯೂಲ್ 9ಗೆ ಸೇರಿಸಿದ್ದೇವೆ. ನಾವೂ ಸಾಮಾಜಿಕ ನ್ಯಾಯ ಕೊಡುವುದನ್ನು ಟೀಕೆ ಮಾಡುತ್ತಿದೆ. ಕಾಂಗ್ರೆಸ್ ದಲಿತ, ಹಿಂದುಳಿದ ವರ್ಗದ, ಲಿಂಗಾಯುತ, ಒಕ್ಕಲಿಗರ ವಿರೋಧಿಯಾಗಿದೆ ಎಂದು ಕಿಡಿಕಾರಿದರು.

ಬಂಜಾರ ಸಮುದಾಯ ವನ್ನು ನಾವು ಕರೆದು ಮಾತನಾಡಿದ್ದೇವೆ. ಬಂಜಾರ, ಭೋವಿ, ಕೊರಮ, ಕೊರಚ, ಈ ನಾಲ್ಕನ್ನು ಎಸ್ಸಿಯಿಂದ ತೆಗೆಯುವ ಪ್ರಶ್ನೆಯೇ ಇಲ್ಲ. ಅವರಿಗೆ ಮೀಸಲಾತಿ ಪ್ರಮಾಣ ಕೂಡ ಹೆಚ್ಚಾಗಿದೆ. ಇದರ ಬಗ್ಗೆ ಬೇರೆ ಬೇರೆಯವರು ಅಪ ಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ನೇತಾರರು ಎಲ್ಲೆಲ್ಲಿ ಸ್ಪರ್ಧೆ ಮಾಡುತ್ತಾರೆ ಅಲ್ಲಿ ಇದನ್ನು ರಾಜಕೀಯ ವಾಗಿ ಬಳಸಿಕೊಳ್ಳಲು ಪ್ಲಾನ್ ಮಾಡಿದ್ದಾರೆ. ಆದರೆ ಇದನ್ನು ನಾವು ರಾಜಕೀಯ ವಾಗಿ ಫೈಟ್ ಮಾಡಲು ಸಿದ್ದರಿದ್ದೇವೆ ಎಂದರು.

ಡಬಲ್ ಇಂಜಿನ್ ಸರ್ಕಾರದಿಂದ ಡಬಲ್ ದ್ರೋಹ. ಬೊಮ್ಮಾಯಿ ಸರ್ಕಾರವು 90 ದಿನಗಳಲ್ಲಿ 3 ಬಾರಿ ಮೀಸಲಾತಿಯನ್ನು ಬದಲಾಯಿಸುವ ಮೂಲಕ ಸಂವಿಧಾನವನ್ನು ಅಣಕಿಸುತ್ತಿದೆ ಎಂದು ಸುರ್ಜೆವಾಲ ಟ್ವೀಟ್ ಮಾಡಿದ್ದರು.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಕರ್ನಾಟಕ ರಾಜ್ಯ ರಾಜಕಾರಣದ ಕ್ಷಣ ಕ್ಷಣದ ಮಾಹಿತಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 11:24 am, Mon, 3 April 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ