AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇವತ್ತಿನ ದಿನದಲ್ಲಿ ರಾಜಕಾರಣದ ಬಗ್ಗೆ ಮಾತನಾಡದಿರುವುದೇ ಒಳ್ಳೇದು; ಬಸವರಾಜ್​ ಹೊರಟ್ಟಿ ಬೇಸರ

ರಾಜಕೀಯ ಕಲುಷಿತವಾಗಿದೆ. ಚುನಾವಣೆಯಲ್ಲಿ ಗೆದ್ದ ಮೇಲೆ ಎಲ್ಲರ ಯೋಗಕ್ಷೇಮ ನೋಡಬೇಕು. ಇದೀಗ ಬೆಳಗಾವಿಯಲ್ಲಿ ಅಧಿವೇಶನ ಮಾಡಲು ನಾನು ಪತ್ರ ಬರೆದಿದ್ದೇನೆ. ನಾಲ್ಕೈದು ಕೋಟಿ ಖರ್ಚು ಮಾಡಿ ಅದನ್ನು ಭೂತ ಬಂಗಲೇ ಮಾಡುವುದು ಸರಿ ಅಲ್ಲ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದರು.

ಇವತ್ತಿನ ದಿನದಲ್ಲಿ ರಾಜಕಾರಣದ ಬಗ್ಗೆ ಮಾತನಾಡದಿರುವುದೇ ಒಳ್ಳೇದು; ಬಸವರಾಜ್​ ಹೊರಟ್ಟಿ ಬೇಸರ
ಬಸವರಾಜ್​ ಹೊರಟ್ಟಿ
ಶಿವಕುಮಾರ್ ಪತ್ತಾರ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 22, 2023 | 2:08 PM

Share

ಹುಬ್ಬಳ್ಳಿ, ಅ.22: ಇವತ್ತಿನ ದಿನದಲ್ಲಿ ರಾಜಕಾರಣದ ಬಗ್ಗೆ ಮಾತನಾಡದಿರುವುದೇ ಒಳ್ಳೇದು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ(Basavaraj Horatti) ಹೇಳಿದರು. ಹುಬ್ಬಳ್ಳಿ(Hubballi)ಯಲ್ಲಿ ಮಾತನಾಡಿದ ಅವರು ‘ಇವತ್ತಿ‌ನ ದಿನಮಾನದಲ್ಲಿ ರಾಜಕೀಯ ಬಗ್ಗೆ ಕಡಿಮೆ ಮಾತಾಡಿದ್ರೆ ಒಳ್ಳೇದು. ಇವತ್ತು ಕಮಿಟ್​ಮೆಂಟ್ ಅನ್ನೋದೆ ಇಲ್ಲ. ಜನರೂ ಕೂಡ ಯಾರು ಕೆಲಸ ಮಾಡುತ್ತಾರೆ, ಯಾರಿಗೆ ವೋಟ್ ಹಾಕಬೇಕು ಎನ್ನುವ ಯೋಚನೆಯೂ ಇಲ್ಲ. ದಿನೇ ದಿನೇ ಕಮಿಟ್​ಮೆಂಟ್ ಕಡಿಮೆ ಆಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಬರ, ಅತಿವೃಷ್ಟಿ ಇದ್ದಾಗ ರಾಜ್ಯದ ಅಭಿವೃದ್ಧಿ ಬಗ್ಗೆ ಯೋಚನೆ ಮಾಡಬೇಕು. ದಿನೇ ದಿನೆ ಅವರನ್ನ,ಇವರನ್ನ ಬೈಯ್ಯೋದೇ ಆಗಿದೆ. ನಾವು ಕಠಿಣ ಸಂದರ್ಭದಲ್ಲಿ ಇದ್ದೇವೆ, ಆಳುವ ಪಕ್ಷ, ವಿರೋಧ ಪಕ್ಷ ಯಾರೇ ಮಾಡಿದರೂ ಸರಿ ಅಲ್ಲ. ರಾಜಕೀಯ ಕಲುಷಿತವಾಗಿದೆ. ಚುನಾವಣೆಯಲ್ಲಿ ಗೆದ್ದ ಮೇಲೆ ಎಲ್ಲರ ಯೋಗಕ್ಷೇಮ ನೋಡಬೇಕು. ಇದೀಗ ಬೆಳಗಾವಿಯಲ್ಲಿ ಅಧಿವೇಶನ ಮಾಡಲು ನಾನು ಪತ್ರ ಬರೆದಿದ್ದೇನೆ. ನಾಲ್ಕೈದು ಕೋಟಿ ಖರ್ಚು ಮಾಡಿ ಅದನ್ನು ಭೂತ ಬಂಗಲೇ ಮಾಡುವುದು ಸರಿ ಅಲ್ಲ,  ಸುವರ್ಣ ಸೌಧ ಕಟ್ಟಿದ ಮೇಲೆ ಇಲ್ಲಿನ ಜನರ ಸಮಸ್ಯೆ ಆಲಿಸಬೇಕು ಎಂದರು.

ಇದನ್ನೂ ಓದಿ:CM Ibrahim: ರಾಜ್ಯದ ರಾಜಕಾರಣ ಗಂಭೀರ ಸ್ಥಿತಿಯಲ್ಲಿ ಸಾಗುತ್ತಿರುವಾಗ ಅದಕ್ಕೊಂದು ಮನರಂಜನೆಯ ತಿರುವು ನೀಡಿದ್ದು ಸಿ.ಎಂ .ಇಬ್ರಾಹಿಂ..!

 ಸುವರ್ಣಸೌಧದಲ್ಲಿ 10 ದಿನ ಅಧಿವೇಶನ ನಡೆಯಲಿದೆ ಎಂದಿದ್ದ ಸಚಿವ ಸತೀಶ್ ಜಾರಕಿಹೊಳಿ

ಹೌದು, ನಿನ್ನೆಯಷ್ಟೇ​​  ಡಿಸೆಂಬರ್​.4 ರಿಂದ ಡಿ.15 ರವರೆಗೆ ಸುವರ್ಣಸೌಧದಲ್ಲಿ 10 ದಿನ ಅಧಿವೇಶನ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದರು. ನಗರದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ್ದ ಅವರು, ‘ಈಗಾಗಲೇ ಅಧಿವೇಶನಕ್ಕೆ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಈ ಬಾರಿ ಅಧಿವೇಶನ ಅದ್ದೂರಿಯಾಗಿ ಮಾಡೋಣ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ