AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇವತ್ತಿನ ದಿನದಲ್ಲಿ ರಾಜಕಾರಣದ ಬಗ್ಗೆ ಮಾತನಾಡದಿರುವುದೇ ಒಳ್ಳೇದು; ಬಸವರಾಜ್​ ಹೊರಟ್ಟಿ ಬೇಸರ

ರಾಜಕೀಯ ಕಲುಷಿತವಾಗಿದೆ. ಚುನಾವಣೆಯಲ್ಲಿ ಗೆದ್ದ ಮೇಲೆ ಎಲ್ಲರ ಯೋಗಕ್ಷೇಮ ನೋಡಬೇಕು. ಇದೀಗ ಬೆಳಗಾವಿಯಲ್ಲಿ ಅಧಿವೇಶನ ಮಾಡಲು ನಾನು ಪತ್ರ ಬರೆದಿದ್ದೇನೆ. ನಾಲ್ಕೈದು ಕೋಟಿ ಖರ್ಚು ಮಾಡಿ ಅದನ್ನು ಭೂತ ಬಂಗಲೇ ಮಾಡುವುದು ಸರಿ ಅಲ್ಲ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದರು.

ಇವತ್ತಿನ ದಿನದಲ್ಲಿ ರಾಜಕಾರಣದ ಬಗ್ಗೆ ಮಾತನಾಡದಿರುವುದೇ ಒಳ್ಳೇದು; ಬಸವರಾಜ್​ ಹೊರಟ್ಟಿ ಬೇಸರ
ಬಸವರಾಜ್​ ಹೊರಟ್ಟಿ
ಶಿವಕುಮಾರ್ ಪತ್ತಾರ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 22, 2023 | 2:08 PM

Share

ಹುಬ್ಬಳ್ಳಿ, ಅ.22: ಇವತ್ತಿನ ದಿನದಲ್ಲಿ ರಾಜಕಾರಣದ ಬಗ್ಗೆ ಮಾತನಾಡದಿರುವುದೇ ಒಳ್ಳೇದು ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ(Basavaraj Horatti) ಹೇಳಿದರು. ಹುಬ್ಬಳ್ಳಿ(Hubballi)ಯಲ್ಲಿ ಮಾತನಾಡಿದ ಅವರು ‘ಇವತ್ತಿ‌ನ ದಿನಮಾನದಲ್ಲಿ ರಾಜಕೀಯ ಬಗ್ಗೆ ಕಡಿಮೆ ಮಾತಾಡಿದ್ರೆ ಒಳ್ಳೇದು. ಇವತ್ತು ಕಮಿಟ್​ಮೆಂಟ್ ಅನ್ನೋದೆ ಇಲ್ಲ. ಜನರೂ ಕೂಡ ಯಾರು ಕೆಲಸ ಮಾಡುತ್ತಾರೆ, ಯಾರಿಗೆ ವೋಟ್ ಹಾಕಬೇಕು ಎನ್ನುವ ಯೋಚನೆಯೂ ಇಲ್ಲ. ದಿನೇ ದಿನೇ ಕಮಿಟ್​ಮೆಂಟ್ ಕಡಿಮೆ ಆಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಬರ, ಅತಿವೃಷ್ಟಿ ಇದ್ದಾಗ ರಾಜ್ಯದ ಅಭಿವೃದ್ಧಿ ಬಗ್ಗೆ ಯೋಚನೆ ಮಾಡಬೇಕು. ದಿನೇ ದಿನೆ ಅವರನ್ನ,ಇವರನ್ನ ಬೈಯ್ಯೋದೇ ಆಗಿದೆ. ನಾವು ಕಠಿಣ ಸಂದರ್ಭದಲ್ಲಿ ಇದ್ದೇವೆ, ಆಳುವ ಪಕ್ಷ, ವಿರೋಧ ಪಕ್ಷ ಯಾರೇ ಮಾಡಿದರೂ ಸರಿ ಅಲ್ಲ. ರಾಜಕೀಯ ಕಲುಷಿತವಾಗಿದೆ. ಚುನಾವಣೆಯಲ್ಲಿ ಗೆದ್ದ ಮೇಲೆ ಎಲ್ಲರ ಯೋಗಕ್ಷೇಮ ನೋಡಬೇಕು. ಇದೀಗ ಬೆಳಗಾವಿಯಲ್ಲಿ ಅಧಿವೇಶನ ಮಾಡಲು ನಾನು ಪತ್ರ ಬರೆದಿದ್ದೇನೆ. ನಾಲ್ಕೈದು ಕೋಟಿ ಖರ್ಚು ಮಾಡಿ ಅದನ್ನು ಭೂತ ಬಂಗಲೇ ಮಾಡುವುದು ಸರಿ ಅಲ್ಲ,  ಸುವರ್ಣ ಸೌಧ ಕಟ್ಟಿದ ಮೇಲೆ ಇಲ್ಲಿನ ಜನರ ಸಮಸ್ಯೆ ಆಲಿಸಬೇಕು ಎಂದರು.

ಇದನ್ನೂ ಓದಿ:CM Ibrahim: ರಾಜ್ಯದ ರಾಜಕಾರಣ ಗಂಭೀರ ಸ್ಥಿತಿಯಲ್ಲಿ ಸಾಗುತ್ತಿರುವಾಗ ಅದಕ್ಕೊಂದು ಮನರಂಜನೆಯ ತಿರುವು ನೀಡಿದ್ದು ಸಿ.ಎಂ .ಇಬ್ರಾಹಿಂ..!

 ಸುವರ್ಣಸೌಧದಲ್ಲಿ 10 ದಿನ ಅಧಿವೇಶನ ನಡೆಯಲಿದೆ ಎಂದಿದ್ದ ಸಚಿವ ಸತೀಶ್ ಜಾರಕಿಹೊಳಿ

ಹೌದು, ನಿನ್ನೆಯಷ್ಟೇ​​  ಡಿಸೆಂಬರ್​.4 ರಿಂದ ಡಿ.15 ರವರೆಗೆ ಸುವರ್ಣಸೌಧದಲ್ಲಿ 10 ದಿನ ಅಧಿವೇಶನ ನಡೆಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದರು. ನಗರದಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದ್ದ ಅವರು, ‘ಈಗಾಗಲೇ ಅಧಿವೇಶನಕ್ಕೆ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಈ ಬಾರಿ ಅಧಿವೇಶನ ಅದ್ದೂರಿಯಾಗಿ ಮಾಡೋಣ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ