AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸ್ಥಿತಿ ಕುಂಠಿತವಾಗಿಲ್ಲಾ; ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ

ಈಗ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸೋದಿಲ್ಲ, ಮುಂದುವರಿಸುತ್ತೇವೆ. ನಾವು ಗ್ಯಾರಂಟಿ ಬಂದ್ ಮಾಡಿದ್ರೆ ಜನ ಸುಮ್ಮನಿರುತ್ತಾರಾ?. ಕೊಟ್ಟಿದ್ದನ್ನು ನಿಲ್ಲಿಸಲು ಆಗಲ್ಲ, ತಗೆಯಬಾರದು ಕೂಡ. ಲೋಕಸಭಾ ಚುನಾವಣೆ ಹಾಗೂ ಮುಂದಿನ ಚುನಾವಣೆಗೂ ನಮ್ಮ ಗ್ಯಾರಂಟಿ ಯೋಜನೆಗಳು ಇರುತ್ತವೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಹೇಳಿದರು.

ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸ್ಥಿತಿ ಕುಂಠಿತವಾಗಿಲ್ಲಾ; ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ
ಬಸವರಾಜ್ ರಾಯರೆಡ್ಡಿ
ಸಂಜಯ್ಯಾ ಚಿಕ್ಕಮಠ
| Edited By: |

Updated on: Jan 26, 2024 | 3:18 PM

Share

ಕೊಪ್ಪಳ, ಜ.26: ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸ್ಥಿತಿ ಕುಂಠಿತವಾಗಿಲ್ಲ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ(Basavaraj Rayareddy) ಹೇಳಿದ್ದಾರೆ. ಕೊಪ್ಪಳ(Koppala) ನಗರದಲ್ಲಿ ಮಾತನಾಡಿದ ಅವರು ‘ಆರು ಕೋಟಿ ತೊಂಬತ್ತು ಲಕ್ಷ ಜನರಿಗೆ ಬರೊಬ್ಬರಿ ಒಂದು ಲಕ್ಷ ಕೋಟಿ ಹಣ ನೀಡುತ್ತಿದ್ದೇವೆ. 7.10 ಲಕ್ಷ ನೌಕರರಿಗೆ ಸರಿಸುಮಾರು 96 ಲಕ್ಷ ಕೋಟಿ ಹಣ ನೀಡಲಾಗುತ್ತದೆ. ಹೀಗಿರುವಾಗ ಜನರಿಗೆ ಗ್ಯಾರಂಟಿ ಯೋಜನೆ ನೀಡುವುದು ತಪ್ಪಲ್ಲ ಎಂದರು.

ನಾವು ಗ್ಯಾರಂಟಿ ಬಂದ್ ಮಾಡಿದ್ರೆ ಜನ ಸುಮ್ಮನಿರುತ್ತಾರಾ?

ಇನ್ನು ಈಗ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸೋದಿಲ್ಲ, ಮುಂದುವರಿಸುತ್ತೇವೆ. ನಾವು ಗ್ಯಾರಂಟಿ ಬಂದ್ ಮಾಡಿದ್ರೆ ಜನ ಸುಮ್ಮನಿರುತ್ತಾರಾ?. ಕೊಟ್ಟಿದ್ದನ್ನು ನಿಲ್ಲಿಸಲು ಆಗಲ್ಲ, ತಗೆಯಬಾರದು ಕೂಡ. ಲೋಕಸಭಾ ಚುನಾವಣೆ ಹಾಗೂ ಮುಂದಿನ ಚುನಾವಣೆಗೂ ನಮ್ಮ ಗ್ಯಾರಂಟಿ ಯೋಜನೆಗಳು ಇರುತ್ತವೆ. ಗ್ಯಾರಂಟಿಯಿಂದ ಹಣದ ಬಾರವಿದೆ. ಆದ್ರೆ, ಅದಕ್ಕೆ ಪರಿಹಾರ ಹುಡುಕಿಕೊಂಡಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ:ಜುಲೈನಲ್ಲಿ ಸಚಿವ ಸಂಪುಟ ಪುನರ್ ರಚನೆ: ಮಂತ್ರಿ ಸ್ಥಾನ ಸಿಗುವ ಬಗ್ಗೆ ಸುಳಿವು ನೀಡಿದ ಬಸವರಾಜ್ ರಾಯರೆಡ್ಡಿ

ಬಿಜೆಪಿಯಲ್ಲಿ ನೈತಿಕತೆ ಮೌಲ್ಯ ಇಲ್ಲವೇ ಇಲ್ಲ

ಜಗದೀಶ್ ಶೆಟ್ಟರ್ ಬಿಜೆಪಿ ಟಿಕೆಟ್ ನೀಡದೆ ಇದ್ದಾಗ ನಮ್ಮ ಪಕ್ಷಕ್ಕೆ ಬರಬಾರದಿತ್ತು, ಬಂದ ಮೇಲೆ ಮರಳಿ ಹೋಗಬಾರದಿತ್ತು. ಕಾಂಗ್ರೆಸ್​ಗೆ ಅವರು ಬಂದಿದ್ದು ಆತುರದ ನಿರ್ಧಾರ, ಈಗ ಹೋಗಿದ್ದು ಕೂಡ ಆತುರದ ನಿರ್ಧಾರವಾಗಿದೆ. ಇನ್ನು ರಾಜಕಾರಣ ಕೆಳಮಟ್ಟದಲಿದೆ. ಎಲ್ಲಾ ಪಕ್ಷದಲ್ಲಿ ಕೂಡ ನೈತಿಕತೆ ಮೌಲ್ಯ ತಗ್ಗಿದೆ. ಆದರೆ, ಬಿಜೆಪಿಯಲ್ಲಿ ಇಲ್ಲವೇ ಇಲ್ಲ. ಇವತ್ತೀನ ನಮ್ಮ ಸಂಖ್ಯಾಬಲದಲ್ಲಿ ನಮ್ಮನ್ನು ಯಾರು ಅಳುಗಾಡಿಸಲು ಆಗಲ್ಲ. ಇನ್ಮೇಲೆ ಕಾಂಗ್ರೆಸ್ ಬಿಟ್ಟು ಯಾರು ಹೋಗಲ್ಲ. ಇದೇ ವೇಳೆ ಕಾಂಗ್ರೆಸ್​ನಲ್ಲಿ ಹೊಂದಾಣಿಕೆ ಕೊರತೆ ವಿಚಾರ ‘ ಕೆಲವರು ನಮಗೆ ನಿಗಮ ಮಂಡಳಿ ಹುದ್ದೆ ವಿಚಾರದಲ್ಲಿ ಕೇಳಿಲ್ಲ ಅಂದಿದ್ದಾರೆ. ಅವರ ಹೇಳಿಕೆೆಯಲ್ಲಿ ತಪ್ಪೇನಿದೆ? ಅವರ ವಿಚಾರ ಅವರು ಹೇಳಿದ್ದಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ