Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸ್ಥಿತಿ ಕುಂಠಿತವಾಗಿಲ್ಲಾ; ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ

ಈಗ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸೋದಿಲ್ಲ, ಮುಂದುವರಿಸುತ್ತೇವೆ. ನಾವು ಗ್ಯಾರಂಟಿ ಬಂದ್ ಮಾಡಿದ್ರೆ ಜನ ಸುಮ್ಮನಿರುತ್ತಾರಾ?. ಕೊಟ್ಟಿದ್ದನ್ನು ನಿಲ್ಲಿಸಲು ಆಗಲ್ಲ, ತಗೆಯಬಾರದು ಕೂಡ. ಲೋಕಸಭಾ ಚುನಾವಣೆ ಹಾಗೂ ಮುಂದಿನ ಚುನಾವಣೆಗೂ ನಮ್ಮ ಗ್ಯಾರಂಟಿ ಯೋಜನೆಗಳು ಇರುತ್ತವೆ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ ಹೇಳಿದರು.

ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸ್ಥಿತಿ ಕುಂಠಿತವಾಗಿಲ್ಲಾ; ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ
ಬಸವರಾಜ್ ರಾಯರೆಡ್ಡಿ
Follow us
ಸಂಜಯ್ಯಾ ಚಿಕ್ಕಮಠ, ಕೊಪ್ಪಳ
| Updated By: ಕಿರಣ್ ಹನುಮಂತ್​ ಮಾದಾರ್

Updated on: Jan 26, 2024 | 3:18 PM

ಕೊಪ್ಪಳ, ಜ.26: ಗ್ಯಾರಂಟಿ ಯೋಜನೆಗಳಿಂದ ಆರ್ಥಿಕ ಸ್ಥಿತಿ ಕುಂಠಿತವಾಗಿಲ್ಲ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ್ ರಾಯರೆಡ್ಡಿ(Basavaraj Rayareddy) ಹೇಳಿದ್ದಾರೆ. ಕೊಪ್ಪಳ(Koppala) ನಗರದಲ್ಲಿ ಮಾತನಾಡಿದ ಅವರು ‘ಆರು ಕೋಟಿ ತೊಂಬತ್ತು ಲಕ್ಷ ಜನರಿಗೆ ಬರೊಬ್ಬರಿ ಒಂದು ಲಕ್ಷ ಕೋಟಿ ಹಣ ನೀಡುತ್ತಿದ್ದೇವೆ. 7.10 ಲಕ್ಷ ನೌಕರರಿಗೆ ಸರಿಸುಮಾರು 96 ಲಕ್ಷ ಕೋಟಿ ಹಣ ನೀಡಲಾಗುತ್ತದೆ. ಹೀಗಿರುವಾಗ ಜನರಿಗೆ ಗ್ಯಾರಂಟಿ ಯೋಜನೆ ನೀಡುವುದು ತಪ್ಪಲ್ಲ ಎಂದರು.

ನಾವು ಗ್ಯಾರಂಟಿ ಬಂದ್ ಮಾಡಿದ್ರೆ ಜನ ಸುಮ್ಮನಿರುತ್ತಾರಾ?

ಇನ್ನು ಈಗ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸೋದಿಲ್ಲ, ಮುಂದುವರಿಸುತ್ತೇವೆ. ನಾವು ಗ್ಯಾರಂಟಿ ಬಂದ್ ಮಾಡಿದ್ರೆ ಜನ ಸುಮ್ಮನಿರುತ್ತಾರಾ?. ಕೊಟ್ಟಿದ್ದನ್ನು ನಿಲ್ಲಿಸಲು ಆಗಲ್ಲ, ತಗೆಯಬಾರದು ಕೂಡ. ಲೋಕಸಭಾ ಚುನಾವಣೆ ಹಾಗೂ ಮುಂದಿನ ಚುನಾವಣೆಗೂ ನಮ್ಮ ಗ್ಯಾರಂಟಿ ಯೋಜನೆಗಳು ಇರುತ್ತವೆ. ಗ್ಯಾರಂಟಿಯಿಂದ ಹಣದ ಬಾರವಿದೆ. ಆದ್ರೆ, ಅದಕ್ಕೆ ಪರಿಹಾರ ಹುಡುಕಿಕೊಂಡಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ:ಜುಲೈನಲ್ಲಿ ಸಚಿವ ಸಂಪುಟ ಪುನರ್ ರಚನೆ: ಮಂತ್ರಿ ಸ್ಥಾನ ಸಿಗುವ ಬಗ್ಗೆ ಸುಳಿವು ನೀಡಿದ ಬಸವರಾಜ್ ರಾಯರೆಡ್ಡಿ

ಬಿಜೆಪಿಯಲ್ಲಿ ನೈತಿಕತೆ ಮೌಲ್ಯ ಇಲ್ಲವೇ ಇಲ್ಲ

ಜಗದೀಶ್ ಶೆಟ್ಟರ್ ಬಿಜೆಪಿ ಟಿಕೆಟ್ ನೀಡದೆ ಇದ್ದಾಗ ನಮ್ಮ ಪಕ್ಷಕ್ಕೆ ಬರಬಾರದಿತ್ತು, ಬಂದ ಮೇಲೆ ಮರಳಿ ಹೋಗಬಾರದಿತ್ತು. ಕಾಂಗ್ರೆಸ್​ಗೆ ಅವರು ಬಂದಿದ್ದು ಆತುರದ ನಿರ್ಧಾರ, ಈಗ ಹೋಗಿದ್ದು ಕೂಡ ಆತುರದ ನಿರ್ಧಾರವಾಗಿದೆ. ಇನ್ನು ರಾಜಕಾರಣ ಕೆಳಮಟ್ಟದಲಿದೆ. ಎಲ್ಲಾ ಪಕ್ಷದಲ್ಲಿ ಕೂಡ ನೈತಿಕತೆ ಮೌಲ್ಯ ತಗ್ಗಿದೆ. ಆದರೆ, ಬಿಜೆಪಿಯಲ್ಲಿ ಇಲ್ಲವೇ ಇಲ್ಲ. ಇವತ್ತೀನ ನಮ್ಮ ಸಂಖ್ಯಾಬಲದಲ್ಲಿ ನಮ್ಮನ್ನು ಯಾರು ಅಳುಗಾಡಿಸಲು ಆಗಲ್ಲ. ಇನ್ಮೇಲೆ ಕಾಂಗ್ರೆಸ್ ಬಿಟ್ಟು ಯಾರು ಹೋಗಲ್ಲ. ಇದೇ ವೇಳೆ ಕಾಂಗ್ರೆಸ್​ನಲ್ಲಿ ಹೊಂದಾಣಿಕೆ ಕೊರತೆ ವಿಚಾರ ‘ ಕೆಲವರು ನಮಗೆ ನಿಗಮ ಮಂಡಳಿ ಹುದ್ದೆ ವಿಚಾರದಲ್ಲಿ ಕೇಳಿಲ್ಲ ಅಂದಿದ್ದಾರೆ. ಅವರ ಹೇಳಿಕೆೆಯಲ್ಲಿ ತಪ್ಪೇನಿದೆ? ಅವರ ವಿಚಾರ ಅವರು ಹೇಳಿದ್ದಾರೆ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಸ್ಥಳೀಯ ಸಂಸ್ಥೆಗಳ ಚುನಾವಣೆ ಬ್ಯಾಲಟ್ ಪೇಪರ್ ಮೂಲಕ ನಡೆಸುವ ಚಿಂತನೆ: ಆಯುಕ್ತ
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಹೊಸ ಧಾರಾವಾಹಿಯಲ್ಲಿ ಒಟ್ಟಾಗಿ ನಟಿಸುತ್ತಿದ್ದಾರೆ ಚಂದು ಗೌಡ-ಕಾವ್ಯಾ ಮಹಾದೇವ್
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಮಾಜಿ ಶಾಸಕರ ಭೇಟಿ ಆಕಸ್ಮಿಕವೋ ಅಥವಾ ಉದ್ದೇಶಪೂರ್ವಕವೋ ಗೊತ್ತಾಗುತ್ತಿಲ್ಲ!
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಉಚಿತ ಪ್ರಯಾಣದ ಟಿಕೆಟ್ ಕಳಕೊಂಡು ಇಡೀ ಬಸ್​ ತಡಕಾಡಿದ ಅಜ್ಜಿ​​
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಶಿವಕುಮಾರ್ ಡಿಸಿಎಂ ಆಗಿರುವುದರಿಂದ ಭೇಟಿಯಾಗಲೇಬೇಕಾಗುತ್ತದೆ: ಸೋಮಶೇಖರ್
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಸ್ಕೂಟಿಗೆ ಡಿಕ್ಕಿ ಹೊಡೆದು 11 ಕಿ.ಮೀ ಎಳೆದೊಯ್ದ ಕಾರು, ಭಯಾನಕ ವಿಡಿಯೋ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
ಹೇಳಬೇಕಾಗಿದ್ದನ್ನು ಸರಿಯಾಗಿ ಕನ್ವೇ ಮಾಡಲು ಶಿವಕುಮಾರ್​ಗೆ ಅಗಿಲ್ಲ: ಯತೀಂದ್ರ
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!
VIDEO: ಆಂಬ್ಯುಲೆನ್ಸ್​ಗೆ ಕರೆ ಮಾಡಿ, ಆದರೆ ಅದು ನನಗಲ್ಲ..!