AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ಸ್ವಲ್ಪ ಧಿಮಾಕು ಜಾಸ್ತಿಯೇ ಇದೆ, ಯಾರನ್ನೂ ಕೇರ್ ಮಾಡಲ್ಲ; ಬಸವರಾಜ ರಾಯರೆಡ್ಡಿ ಹೀಗೆನ್ನಲು ಕಾರಣವೇನು?

ಬಿಆರ್ ಪಾಟೀಲ್​​ ಸ್ವಾಭಿಮಾನಕ್ಕೆ ಧಕ್ಕೆಯಾದ್ರೆ ರಾಜೀನಾಮೆ ಎಂದಿದ್ದಾರೆ. ನಾನು ಕೂಡ ಯಾರಿಗೂ ಕಡಿಮೆ ಇಲ್ಲ, ನಾನು ಯಾರಿಗೂ ಕೇರ್ ಮಾಡಲ್ಲ. ಅವರಿಗಿಂತ ನನಗೆ ಸ್ವಲ್ಪ ಧಿಮಾಕು ಜಾಸ್ತಿನೇ ಇದೆ ಎಂದು ರಾಯರೆಡ್ಡಿ ಹೇಳಿದ್ದಾರೆ.

ನನಗೆ ಸ್ವಲ್ಪ ಧಿಮಾಕು ಜಾಸ್ತಿಯೇ ಇದೆ, ಯಾರನ್ನೂ ಕೇರ್ ಮಾಡಲ್ಲ; ಬಸವರಾಜ ರಾಯರೆಡ್ಡಿ ಹೀಗೆನ್ನಲು ಕಾರಣವೇನು?
ಬಸವರಾಜ ರಾಯರೆಡ್ಡಿ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Aug 02, 2023 | 8:19 PM

Share

ಕೊಪ್ಪಳ: ‘ಆಳಂದ ಶಾಸಕ ಬಿಆರ್ ಪಾಟೀಲ್​​ ಅವರು ಸ್ವಾಭಿಮಾನಕ್ಕೆ ಧಕ್ಕೆಯಾದರೆ ರಾಜೀನಾಮೆ ನೀಡುವೆ ಎಂದು ಹೇಳಿದ್ದಾರೆ. ನಾನು ಕೂಡ ಯಾರಿಗೂ ಕಡಿಮೆ ಇಲ್ಲ, ಯಾರನ್ನೂ ಕೇರ್ ಮಾಡಲ್ಲ. ಅವರಿಗಿಂತ ನನಗೆ ಸ್ವಲ್ಪ ಧಿಮಾಕು ಜಾಸ್ತಿನೇ ಇದೆ’ ಎಂದು ಬಸವರಾಜ ರಾಯರೆಡ್ಡಿ (Basvaraj Rayareddi) ಹೇಳಿದ್ದಾರೆ. ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವ ಶಾಸಕರು ನಂತರ ಕ್ಷಮೆ ಕೋರಿದ್ದಾರೆ ಎಂಬ ಗೃಹ ಸಚಿವ ಜಿ. ಪರಮೇಶ್ವರ ಹೇಳಿಕೆ ಬಗ್ಗೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಬೇವೂರು ಗ್ರಾಮದಲ್ಲಿ ಪ್ರತಿಕ್ರಿಯಿಸಿದ ಅವರು, ಈ ವಿಚಾರವಾಗಿ ಪರಮೇಶ್ವರ್​ ಅವರನ್ನು ಪ್ರಶ್ನೆ ಮಾಡಿದ್ದು ಸತ್ಯ ಎಂದು ಹೇಳಿದ್ದಾರೆ.

ಕೆಲ ಶಾಸಕರು ಸಹಿ ಸಂಗ್ರಹಿಸಿದ್ದರು. ಅದಕ್ಕೆ ನಾನು ಸಹಿ ಹಾಕಿದ್ದೆ. ಮುಖ್ಯಮಂತ್ರಿಗಳು ಸಹ ಏನೂ ತಪ್ಪು ತಿಳಿದುಕೊಂಡಿಲ್ಲ. ಶಾಸಕಾಂಗ ಪಕ್ಷದ ಸಭೆ (ಸಿಎಲ್​ಪಿ) ಕರೆಯುವುದಕ್ಕೆ ನಮ್ಮ ಬೈಲಾದಲ್ಲಿ ಅವಕಾಶವಿದೆ. ಹೊಸ ಸಚಿವರ ಮಧ್ಯೆ ನಮಗೆ ಸ್ವಲ್ಪ ಸಮನ್ವಯದ ಕೊರತೆ ಇತ್ತು. ಅದಕ್ಕಾಗಿ ಸಮನ್ವಯ ಸಮಿತಿ ರಚನೆಯಾದರೆ ತಪ್ಪೇನಿಲ್ಲ. ಬಿಆರ್ ಪಾಟೀಲ್​​ ಸ್ವಾಭಿಮಾನಕ್ಕೆ ಧಕ್ಕೆಯಾದ್ರೆ ರಾಜೀನಾಮೆ ಎಂದಿದ್ದಾರೆ. ನಾನು ಕೂಡ ಯಾರಿಗೂ ಕಡಿಮೆ ಇಲ್ಲ, ನಾನು ಯಾರಿಗೂ ಕೇರ್ ಮಾಡಲ್ಲ. ಅವರಿಗಿಂತ ನನಗೆ ಸ್ವಲ್ಪ ಧಿಮಾಕು ಜಾಸ್ತಿನೇ ಇದೆ ಎಂದು ರಾಯರೆಡ್ಡಿ ಹೇಳಿದ್ದಾರೆ.

ಶಾಸಕರು ಹಾಗೂ ಸಚಿವರ ಮಧ್ಯೆ ಯಾವುದೇ ಅಸಮಾಧಾನವಿಲ್ಲ. ಯಾರಿಂದಲೂ ಈ ಸರ್ಕಾರವನ್ನು ಅಸ್ಥಿರ ಮಾಡೋಕೆ ಆಗುವುದಿಲ್ಲ. ಸರ್ಕಾರ ಬೀಳಿಸುವಷ್ಟು ಕೆಳಮಟ್ಟದ ಜನರು ನಾವಲ್ಲ. ಸಿದ್ದರಾಮಯ್ಯ ನೇತೃತ್ವದಲ್ಲಿ ಒಳ್ಳೆಯ ಸರ್ಕಾರ ಕೊಡುತ್ತೇವೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದಲ್ಲಿ ನಿಲ್ಲದ ಭಿನ್ನಮತ; ಪತ್ರ ಬರೆದ ಶಾಸಕರು ಕ್ಷಮೆ ಕೇಳಿದ್ದಾರೆಂಬ ಪರಮೇಶ್ವರ ಹೇಳಿಕೆಗೆ ರಾಯರೆಡ್ಡಿ ಆಕ್ಷೇಪ

ದೆಹಲಿ ಸಭೆಗೆ ನಾನು ಹೋಗುತ್ತಿಲ್ಲ; ಬಸವರಾಜ ರಾಯರೆಡ್ಡಿ

ದೆಹಲಿಯಲ್ಲಿ ಹೈಕಮಾಂಡ್ ಕರೆದಿರುವ ಸಭೆಗೆ ನಾನು ಹೋಗುತ್ತಿಲ್ಲ ಎಂದೂ ರಾಯರೆಡ್ಡಿ ತಿಳಿಸಿದ್ದಾರೆ. ನನಗೆ ಹೈಕಮಾಂಡ್​​ನಿಂದ ಅಧಿಕೃತ ಅಹ್ವಾನ ಬಂದಿಲ್ಲ. ನನ್ನ ಕ್ಷೇತ್ರದಲ್ಲಿ ಪೂರ್ವ ನಿಗದಿತ ಕಾರ್ಯಕ್ರಮಗಳಿವೆ. ನನಗೆ ತಿಳಿದ ಮಾಹಿತಿ ಪ್ರಕಾರ ಲೋಕಸಭೆ ಚುನಾವಣೆ ಬಗ್ಗೆ ಚರ್ಚಿಸಲು ಸಭೆ ಕರೆದ್ದಾರೆ ಎಂದು ಅವರು ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:46 pm, Mon, 31 July 23

Follow Us
Dattatraya Patil
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!