AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP Election: ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿಗೆ ಠಕ್ಕರ್ ನೀಡಲು ಕಾಂಗ್ರೆಸ್ ಹೊಸ ತಂತ್ರ; ಏನದು?

ಬಿಜೆಪಿ ವಿಗಂಡಿಸಿದ್ದ 243 ವಾರ್ಡ್​​ಗಳನ್ನ 250 ಕ್ಕೆ ಹೆಚ್ಚಿಸಲು ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ. ವಾರ್ಡ್​​​ಗಳನ್ನು ಹೆಚ್ಚಿಸುವ ಬಗ್ಗೆ ಬೆಂಗಳೂರಿನ ಸಚಿವರು, ಶಾಸಕರು ಹಾಗೂ ಹಿರಿಯ ಮಾಜಿ ಮೇಯರ್​​​ಗಳು ಸಲಹೆ ನೀಡಿದ್ದಾರೆ.

BBMP Election: ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿಗೆ ಠಕ್ಕರ್ ನೀಡಲು ಕಾಂಗ್ರೆಸ್ ಹೊಸ ತಂತ್ರ; ಏನದು?
ಬಿಬಿಎಂಪಿ
ಗಣಪತಿ ಶರ್ಮಾ
|

Updated on:Jun 05, 2023 | 4:18 PM

Share

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಚುನಾವಣೆಯಲ್ಲಿ ಬಿಜೆಪಿಗೆ ಠಕ್ಕರ್ ನೀಡಲು ಹೊಸ ರಣತಂತ್ರ ಹೆಣೆಯಲು ಕಾಂಗ್ರೆಸ್ ಮುಂದಾಗಿದೆ. ಬಿಬಿಎಂಪಿ ವಾರ್ಡ್​ಗಳ ಸಂಖ್ಯೆಯನ್ನು 250 ಕ್ಕೇರಿಸಲು ಕಾಂಗ್ರೆಸ್ ಸರ್ಕಾರ ಮಾಸ್ಟರ್ ಪ್ಲಾನ್ ರೂಪಿಸಿದೆ. ಬಿಜೆಪಿ ಆಡಳಿತದಲ್ಲಿದ್ದಾಗ ಪಾಲಿಕೆಯ ವಾರ್ಡ್​​ಗಳನ್ನು ಅನಕ್ಕೂಲಕ್ಕೆ ತಕ್ಕಂತೆ ವಿಗಂಡಿಸಿ, 198 ವಾರ್ಡ್​​​ಗಳನ್ನು 243 ಕ್ಕೇ ಏರಿಸಿತ್ತು. ಈಗ ಕಾಂಗ್ರೆಸ್ ಅಧಿಕಾರಕ್ಕೆ ಬರ್ತಿದ್ದಂತೆ ಮರು ವಿಗಂಡನೆಗೆ ಯೋಜನೆ ರೂಪಿಸಿದೆ ಎನ್ನಲಾಗಿದೆ.

ಬಿಜೆಪಿ ವಿಗಂಡಿಸಿದ್ದ 243 ವಾರ್ಡ್​​ಗಳನ್ನ 250 ಕ್ಕೆ ಹೆಚ್ಚಿಸಲು ಕಾಂಗ್ರೆಸ್ ಸರ್ಕಾರ ಚಿಂತನೆ ನಡೆಸಿದೆ. ವಾರ್ಡ್​​​ಗಳನ್ನು ಹೆಚ್ಚಿಸುವ ಬಗ್ಗೆ ಬೆಂಗಳೂರಿನ ಸಚಿವರು, ಶಾಸಕರು ಹಾಗೂ ಹಿರಿಯ ಮಾಜಿ ಮೇಯರ್​​​ಗಳು ಸಲಹೆ ನೀಡಿದ್ದಾರೆ. ಸಚಿವ ರಾಮಲಿಂಗಾ ರೆಡ್ಡಿ ನೇತೃತ್ವದ ಸಮಿತಿ ಮುಂದೆ ಕೈ ನಾಯಕರು ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ವಾರ್ಡ್​​​ಗಳ ಸಂಖ್ಯೆ ಹೆಚ್ಚಿಸುವ ಬಗ್ಗೆ ಕಾನೂನು ತಜ್ಞರ ಸಲಹೆ ಪಡೆಯಲು ಸರ್ಕಾರ ಮುಂದಾಗಿದೆ.

ಸರ್ಕಾರ ರಚನೆ ಬೆನ್ನಲ್ಲೆ ಬಿಬಿಎಂಪಿ ಚುನಾವಣೆಗೆ ಕಾಂಗ್ರೆಸ್ ಸಜ್ಜಾಗುತ್ತಿದೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯ ಲಾಭ ಪಡಯುವುದಕ್ಕಾಗಿ ತುರ್ತಾಗಿ ಚುನಾವಣೆ ನಡೆಸಲು ಪಕ್ಷವು ಆತುರ ತೋರುತ್ತಿದೆ. ಡಿ ಲಿಮಿಟೇಷನ್ ನಡೆಸಿ ವೋಟ್ ಬ್ಯಾಂಕ್ ಗಟ್ಟಿಮಾಡಿಕೊಂಡಿದ್ದ ಬಿಜೆಪಿಗೆ ಅದೇ ತಂತ್ರ ಅನುಸರಿಸಿ ತಿರುಗೇಟು ನೀಡುವುದು ಕಾಂಗ್ರೆಸ್ ಪ್ರತಿತಂತ್ರ ಎನ್ನಲಾಗಿದೆ. ಇದರಿಂದ 198 ವಾರ್ಡ್​​ಗಳನ್ನು 243ಕ್ಕೆ ವಿಗಂಡಿಸಿ ಚುನಾವಣೆ ಗೆಲ್ಲುವ ಲೆಕ್ಕ ಹಾಕಿಕೊಂಡಿದ್ದ ಬಿಜೆಪಿ ಆಘಾತ ಎದುರಾಗಲಿದೆ.

ಇದನ್ನೂ ಓದಿ: BBMP Election: 8 ವರ್ಷದಿಂದ ನಡೆಯದ ಬಿಬಿಎಂಪಿ ಚುನಾವಣೆಗೆ ಕಾಂಗ್ರೆಸ್ ಮಾಸ್ಟರ್ ಪ್ಲಾನ್

ಬಿಬಿಎಂಪಿ ಕಾರ್ಪೊರೇಟರ್​ಗಳ ಅಧಿಕಾರಾವಧಿ ಮುಗಿದು ಎರಡು ವರ್ಷಗಳೇ ಕಳೆದಿದ್ದರೂ ಹಿಂದಿನ ಬಿಜೆಪಿ ಸರ್ಕಾರ ಒಂದಲ್ಲ ಒಂದು ನೆಪವೊಡ್ಡಿ ಬಿಬಿಎಂಪಿ ಚುನಾವಣೆಯನ್ನೂ ಮುಂದೂಡುತ್ತಾ ಬಂದಿತ್ತು. ವಾರ್ಡ್​​ ವಿಣಗಡಣೆ ನೆಪ ನೀಡಿ ನಿಗದಿತ ಅವಧಿಯಲ್ಲಿ ಚುನಾವಣೆ ನಡೆಸಿರಲಿಲ್ಲ. ಚುನಾವಣೆ ನಡೆಸಿ ಅಂತ ಹೈಕೋರ್ಟ್ ಅದೇಶ ನೀಡಿದ್ದರೂ, ಮತ್ತೆ ಮೀಸಲಾತಿ ಹೆಸರಲ್ಲಿ 6 ತಿಂಗಳ ಗಡುವು ಕೇಳಿತ್ತು.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 4:17 pm, Mon, 5 June 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ