AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವರಾಗಿದ್ದಾಗ ಮುನಿರತ್ನ ಹನಿಟ್ರ್ಯಾಪ್ ಮಾಡಿಸುತ್ತಿದ್ದರು, ಅದಕ್ಕಾಗಿಯೇ ಸ್ಟುಡಿಯೋ ಇಟ್ಟುಕೊಂಡಿದ್ದಾರೆ: ಬೆಂಬಲಿಗ ವೇಲು ಗಂಭೀರ ಆರೋಪ

ಮುನಿರತ್ನ ವಿರುದ್ಧ ಅವರ ಬೆಂಬಲಿಗರೇ ಇದೀಗ ತಿರುಗಿಬಿದ್ದಿದ್ದಾರೆ. ಸಚಿವರಾಗಿದ್ದಾಗ ಮುನಿರತ್ನ ಹನಿಟ್ರ್ಯಾಪ್ ಮಾಡಿಸುತ್ತಿದ್ದರು, ಅದಕ್ಕಾಗಿಯೇ ಸ್ಟುಡಿಯೋ ಇಟ್ಟುಕೊಂಡಿದ್ದಾರೆ ಅಂತೆಲ್ಲ ಮಾಜಿ ಕಾರ್ಪೋರೇಟರ್​ ಗಂಭೀರ ಆರೋಪ ಮಾಡಿದ್ದಾರೆ.

ಸಚಿವರಾಗಿದ್ದಾಗ ಮುನಿರತ್ನ ಹನಿಟ್ರ್ಯಾಪ್ ಮಾಡಿಸುತ್ತಿದ್ದರು, ಅದಕ್ಕಾಗಿಯೇ ಸ್ಟುಡಿಯೋ ಇಟ್ಟುಕೊಂಡಿದ್ದಾರೆ: ಬೆಂಬಲಿಗ ವೇಲು ಗಂಭೀರ ಆರೋಪ
ಆರ್​ಆರ್ ನಗರ ಕ್ಷೇತ್ರದ ಶಾಸಕ ಮುನಿರತ್ನ
ಪ್ರಸನ್ನ ಗಾಂವ್ಕರ್​
| Edited By: |

Updated on:Jul 24, 2023 | 7:33 AM

Share

ಬೆಂಗಳೂರು, (ಜುಲೈ 24): ಸಚಿವರಾಗಿದ್ದಾಗ ಮುನಿರತ್ನ (munirathna) ಹನಿಟ್ರ್ಯಾಪ್(honeytrap) ಮಾಡಿಸುತ್ತಿದ್ದರು. ಹನಿಟ್ರ್ಯಾಪ್ ಮಾಡಲೆಂದೇ ಸ್ಟುಡಿಯೋ ಇಟ್ಟುಕೊಂಡಿದ್ದಾರೆ ಎಂದು ಅವರ ಬೆಂಬಲಿಗ, ಬಿಬಿಎಂಪಿ ಮಾಜಿ ಕಾರ್ಪೊರೇಟರ್ ವೇಲು ನಾಯ್ಕರ್ ಗಂಭೀರ ಆರೋಪ ಮಾಡಿದ್ದಾರೆ. ಶಾಸಕ ಮುನಿರತ್ನ ಬೆಂಬಲಿಗರಾಗಿದ್ದ ವೇಲು ನಾಯ್ಕರ್ ನಿನ್ನೆ (ಜುಲೈ 23) ಬಿಜೆಪಿ ತೊರೆದು ಕಾಂಗ್ರೆಸ್​ ಸೇರ್ಪಡೆಯಾದರು. ಈ ವೇಳೆ ಮಾತನಾಡಿದ ವೇಲು ನಾಯ್ಕರ್, ಕರೆಯಿಸುವುದು ಹನಿಟ್ರ್ಯಾಪ್ ಮಾಡುವುದು ಹೆದರಿಸುವುದು. ಜೆ.ಪಿ.ಪಾರ್ಕ್‌, ಡಾಲರ್ಸ್‌ ಕಾಲೋನಿಯಲ್ಲಿ ಇದಕ್ಕಾಗಿ ಸ್ಟುಡಿಯೋ ಇದೆ. ಅವರು ಸಿನಿಮಾ ನಿರ್ಮಾಪಕರಲ್ಲವೇ. ಹೀಗಾಗಿ ಹನಿಟ್ರ್ಯಾಪ್ ಮಾಡಿಸಿ ಹೆದರಿಸುತ್ತಾರೆ ಎಂದರು.

ಇದನ್ನೂ ಓದಿ: BBMP Election: ವಾರ್ಡ್ ಪುನರ್ವಿಂಗಡಣೆ ಅನಿವಾರ್ಯ, ಬಿಬಿಎಂಪಿ ಚುನಾವಣೆ ಮುಂದೂಡಿಕೆ ಖಚಿತ

ಮುನಿರತ್ನಗೆ ಚುನಾವಣೆ ಎದುರಿಸುವುದು ಹೇಗೆ ಎಂದು ಕೇಳಿದೆವು. ನಿಮ್ಮದು ಈಸ್ಟ್‌ಮನ್ ಕಲರ್ ಪಿಕ್ಚರ್‌ ಇದೆ ತೋರಿಸಲಾ? ಇಲ್ಲ ಕೆಲಸ ಮಾಡುತ್ತೀರಾ ಅಂತಾ ಮುನಿರತ್ನ ಹೆದರಿಸುತ್ತಿದ್ದರು. ಮುನಿರತ್ನ ನಿರ್ಮಾಪಕನಾಗಿ ಮಾಡಿದ ಮೊದಲ ಚಿತ್ರ ಆಂಟಿ ಪ್ರೀತ್ಸೆ. ಹೀಗಾಗಿ ಮುನಿರತ್ನ ಸಚಿವರಾದ ಮೇಲೂ ಬರೀ ಆಂಟಿಗಳೇ ಇರುತ್ತಿದ್ದರು. ವಿಕಾಸಸೌಧ, ವಿಧಾನಸೌಧ ಚೇಂಬರ್‌ನಲ್ಲೆಲ್ಲಾ ಬರೀ ಆಂಟಿಗಳೇ ಇರುತ್ತಿದ್ದರು ಎಂದು ಆರೋಪಿಸಿದರು.

ಕರ್ನಾಟಕ ವಿಧಾನಸಭೆ ಚುನಾವಣೆ ಮುಗಿದ ಬೆನ್ನಲ್ಲೇ ಇದೀಗ ಸ್ಥಳೀಯ ಸಂಸ್ಥೆಗಳ ಚುನಾವಣೆ ಎದುರಾಗುತ್ತಿದ್ದು, ಇದಕ್ಕಾಗಿ ಆಡಳಿತರೂಢ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿದೆ. ಅದರಲ್ಲೂ ಮುಖ್ಯವಾಗಿ ಬಿಬಿಎಂಪಿ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಡಿಕೆ ಶಿವಕುಮಾರ್ ಸದ್ದಿಲ್ಲದೇ ಆಪರೇಷನ್ ಹಸ್ತ ಮಾಡಿದ್ದಾರೆ. ಹೌದು…ಬೆಂಗಳೂರಿನ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರ ಬೆಂಬಲಿಗರನ್ನು ಕಾಂಗ್ರೆಸ್​ಗೆ ಸೆಳೆಯುವಲ್ಲಿ ಡಿಕೆ ಶಿವಕುಮಾರ್ ಹಾಗೂ ಡಿಕೆ ಸುರೇಶ್ ಯಶಸ್ವಿಯಾಗಿದ್ದಾರೆ.

ಶಾಸಕ ಮುನಿರತ್ನ ಪರಮಾಪ್ತರ ಗುಂಪಿನಲ್ಲಿ ಗುರುತಿಸಿಕೊಂಡಿದ್ದ ಮಾಜಿ ಬಿಬಿಎಂಪಿ ಸದಸ್ಯರುಗಳಾದ ವೇಲು ನಾಯ್ಕರ್​, ಮೋಹನ್​ ಕುಮಾರ್​ ಹಾಗೂ ಶ್ರೀನಿವಾಸ ಮೂರ್ತಿ ಬಿಜೆಪಿ ತೊರೆದು ಜುಲೈ 23ರಂದು ಕಾಂಗ್ರೆಸ್​ ಸೇರ್ಪಡೆಯಾಗಿದ್ದಾರೆ. ಇದರೊಂದಿಗೆ ಡಿಕೆ ಬ್ರದರ್ಸ್, ಮುನಿರತ್ನಗೆ ಮತ್ತೊಂದು ಶಾಕ್ ಕೊಟ್ಟಿದ್ದಾರೆ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 7:28 am, Mon, 24 July 23

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ