AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2023ರ ವಿಧಾನಸಭೆ, 2024ರ ಲೋಕಸಭೆ ಚುನಾವಣೆಯಲ್ಲಿ ನಾನು ಮೇನ್ ಲೀಡರ್ ಆಗಿರುತ್ತೇನೆ: ರಮೇಶ್ ಜಾರಕಿಹೊಳಿ ಅಚ್ಚರಿ ಹೇಳಿಕೆ

ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರು ಜೆಡಿಎಸ್ ಸೇರುತ್ತಾರೆ ಎನ್ನುವ ​ಊಹಾಪೋಹಗಳಿಗೆ ತೆರೆ ಬಿದ್ದಿದೆ. ಈ ಬಗ್ಗೆ ರಮೇಶ್ ಜಾರಕಿಹೊಳಿ ಅವರೇ ಮಾಧ್ಯಮಗಳಿಗೆ ಸ್ಪಷ್ಟನೆ ನೀಡಿದ್ದಾರೆ.

2023ರ ವಿಧಾನಸಭೆ, 2024ರ ಲೋಕಸಭೆ ಚುನಾವಣೆಯಲ್ಲಿ ನಾನು ಮೇನ್ ಲೀಡರ್ ಆಗಿರುತ್ತೇನೆ: ರಮೇಶ್ ಜಾರಕಿಹೊಳಿ ಅಚ್ಚರಿ ಹೇಳಿಕೆ
Ramesh Jarkiholi
TV9 Web
| Edited By: |

Updated on: Nov 19, 2022 | 3:24 PM

Share

ಬೆಳಗಾವಿ: ರಾಸಲೀಲೆ ಸಿಡಿ ಬಹಿರಂಗವಾದ ಬೆನ್ನಲ್ಲೇ ಮಂತ್ರಿ ಸ್ಥಾನ ಕಳೆದುಕೊಂಡು ಬಿಜೆಪಿ ಪಕ್ಷದ ಕಾರ್ಯ ಚಟುವಟಿಕೆಗಳಿಂದ ದೂರ ಉಳಿದುಕೊಂಡಿದ್ದ ಶಾಸಕ ರಮೇಶ್​ ಜಾರಕಿಹೊಳಿ(Ramesh Jarkiholi)  ಅವರು ಜೆಡಿಎಸ್​ ಸೇರ್ತಾರೆ ಎನ್ನುವ ಸುದ್ದಿ ರಾಜ್ಯ ರಾಜಕಾರಣದಲ್ಲಿ ಹರಿದಾಡುತ್ತಿದೆ. ಇದೀಗ ಅದಕ್ಕೆ ಸ್ವತಃ ಅವರೇ ಸ್ಪಷ್ಟನೆ ನೀಡಿದ್ದು, ಎಲ್ಲಾ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.

ಜಾರಕಿಹೊಳಿ ಬುಟ್ಟಿಗೆ ಕೈ ಹಾಕಿದ ಎಚ್​ಡಿಕೆ, ಮತ್ತೆ ರಾಜಕೀಯ ಧೃವೀಕರಣಕ್ಕೆ ಸಾಕ್ಷಿಯಾಗತ್ತಾ ರಾಜ್ಯ ರಾಜಕಾರಣ?

ಇಂದು(ನ.19) ಖಾಸಗಿ ಕಾರ್ಯಕ್ರಮದ ನಿಮಿತ್ತ ಬೆಳಗಾವಿ ಗ್ರಾಮೀಣ ‌ಕ್ಷೇತ್ರದಲ್ಲಿರುವ ಬೆಳಗುಂದಿ ಗ್ರಾಮಕ್ಕೆ   ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಯಾವುದೇ ಕಾರಣಕ್ಕೂ ನಾನು ಬಿಜೆಪಿ ಬಿಡಲ್ಲ. ನನ್ನ ಮನಸಿಗೆ ಬೇಜಾರಾಗಿ ಒಂದು ವರ್ಷದಿಂದ ಮಾಧ್ಯಮದಿಂದ ದೂರವಿದ್ದೆ. ಅನಿವಾರ್ಯವಾಗಿ ಇಂದು ಒಂದೇ ಒಂದು ವಿಷಯ ಸ್ಪಷ್ಟಪಡಿಸುವೆ. ಹೆಚ್.ಡಿ.ಕುಮಾರಸ್ವಾಮಿ ಜೊತೆ ನಾನು ಮಾತನಾಡಿದ್ದು ನಿಜ.ನನಗೆ ಸುಳ್ಳು ಹೇಳುವ ಚಟವಿಲ್ಲ. ದಿನನಿತ್ಯ ಕುಮಾರಸ್ವಾಮಿ ನನ್ನ ಜೊತೆ ಫೋನ್‌ನಲ್ಲಿ ಟಚ್​ನಲ್ಲಿದ್ದಾರೆ. ಆದ್ರೆ ನಾನು ಬಿಜೆಪಿ ಬಿಡುವ ಪ್ರಶ್ನೆ ಇಲ್ಲ ಎಂದು ಸ್ಪಷ್ಟಪಡಿಸಿದರು.

2023ಕ್ಕೆ ಬಿಜೆಪಿಯ ಹತ್ತು ಜನ ಪ್ರಮುಖರಲ್ಲಿ ನಾನು ಒಬ್ಬ ಆಗುತ್ತೇನೆ. ಏಕೆಂದರೆ ಬಹಳಷ್ಟು ಜನ ರಿಟೈಡ್ ಆಗುತ್ತಾರೆ, ಹತ್ತು ಮಂದಿ ಬಿಜೆಪಿಯ ಪ್ರಮುಖರಲ್ಲಿ ನಾನೇ ಇರುವಾಗ. ಬೇರೆಯವರನ್ನು ಮಂತ್ರಿ ಮಾಡುವ ಹಾಗೂ ಬೇರೆಯವರಿಗೆ ಟಿಕೆಟ್ ಕೊಡುವ ಶಕ್ತಿ ಕೊಟ್ಟಾಗ ನಾನು ಬಿಜೆಪಿ ಏಕೆ ಬಿಡಲಿ? ಯಾವ ವ್ಯವಸ್ಥಿತ ಸಂಚು ಮಾಡಿ ದಿನನಿತ್ಯ ಮಾಧ್ಯಮಗಳಲ್ಲಿ ಬರುತ್ತೆ ಗೊತ್ತಿಲ್ಲ. ನಾನು ಬಿಜೆಪಿ ಬಿಡಲ್ಲ.. ಬಿಡಲ್ಲ.. ಎಂದು ರಮೇಶ್ ಜಾರಕಿಹೊಳಿ ಪುನರುಚ್ಚರಿಸಿದರು.

ಬಿಜೆಪಿಯಲ್ಲಿ ಉನ್ನತ ಹುದ್ದೆಗೆ ಹೋಗಿ ಸೇವೆ ಮಾಡುತ್ತೇನೆ. 2023ರ ವಿಧಾನಸಭೆ 2024ರ ಲೋಕಸಭೆ ಚುನಾವಣೆಯಲ್ಲಿ ನಾನು ಮೇನ್ ಲೀಡರ್ ಆಗಿರುತ್ತೇನೆ. ನಾನು ಒಬ್ಬ ಪ್ರಮುಖ ನಾಯಕನಾಗಿ ಕೆಲಸ ಮಾಡುತ್ತೇನೆ. ರಾಜ್ಯದಲ್ಲಿ ಮತ್ತು ಜಿಲ್ಲೆಯಲ್ಲಿ ಬಿಜೆಪಿ ಬೆಳೆಸಲು ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು. ಈ ಮೂಲಕ ಜೆಡಿಎಸ್ ಸೇರ್ತಾರೆ ಎನ್ನುವ ಅಂತೆ-ಕಂತೆಗಳಿಗೆ ತೆರೆ ಎಳೆದರು.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ಮೌಲ್ವಿ ಮೇಲೆ ಹಿಂದೂ ಯುವಕರ ಹಲ್ಲೆ: ಮುಸ್ಲಿಮರಿಂದ ಬೃಹತ್ ಪ್ರತಿಭಟನೆ
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಬಣ್ಣ ತೊಳೆಯಲು ಕೆರೆಗೆ ಇಳಿದ ಯುವಕರು ನೀರುಪಾಲು
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು