AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Belagavi session: ಬಿಜೆಪಿ ಕಾಂಗ್ರೆಸ್​ಗೆ ರೆಬೆಲ್ ಸ್ಟಾರ್​ಗಳ ತಲೆನೋವು: ಸ್ವಪಕ್ಷದ ವಿರುದ್ಧವೇ ಈ ನಾಯಕರ ಆಕ್ರೋಶ!

ಬೆಳಗಾವಿ ಅಧಿವೇಶನ 2023: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ಎರಡನೇ ದಿನ ಕೂಡ ಹಲವು ವಿದ್ಯಮಾನಗಳಿಗೆ ಸಾಕ್ಷಿಯಾಯಿತು. ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳಿಗೆ ಅವುಗಳದ್ದೇ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ಬಿಕೆ ಹರಿಪ್ರಸಾದ್ ಹಾಗೂ ಬಸವರಾಜ ರಾಯರೆಡ್ಡಿ ತಲೆನೋವಾಗಿ ಪರಿಣಮಿಸಿದರು.

Belagavi session: ಬಿಜೆಪಿ ಕಾಂಗ್ರೆಸ್​ಗೆ ರೆಬೆಲ್ ಸ್ಟಾರ್​ಗಳ ತಲೆನೋವು: ಸ್ವಪಕ್ಷದ ವಿರುದ್ಧವೇ ಈ ನಾಯಕರ ಆಕ್ರೋಶ!
ರಾಯರೆಡ್ಡಿ, ಹರಿಪ್ರಸಾದ್ ಹಾಗೂ ಯತ್ನಾಳ್
TV9 Web
| Edited By: |

Updated on: Dec 05, 2023 | 7:21 PM

Share

ಬೆಳಗಾವಿ, ಡಿಸೆಂಬರ್ 5: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನ (Winter Session) ಕೆಲವು ವಿಶೇಷ ಘಟನೆಗಳಿಗೆ ನಾಂದಿ ಹಾಡುತ್ತಿದೆ. ಈಗಾಗಲೇ ಬಿಜೆಪಿ (BJP) ನಾಯಕರ ವಿರುದ್ಧ ರೆಬೆಲ್ ಆಗಿರೋ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಂದು ಕಡೆಯಾದರೆ, ಕಲಾಪ ಆರಂಭದ ದಿನವಾದ ನಿನ್ನೆಯಿಂದ ಕಾಂಗ್ರೆಸ್ (Congress) ಶಾಸಕ ಬಸವರಾಜ ರಾಯರೆಡ್ಡಿ ಸರ್ಕಾರದ ವಿರುದ್ಧವೇ ವಿಪಕ್ಷ ಸದಸ್ಯನ ಪಾತ್ರ ವಹಿಸಿದ್ದಾರೆ. ಇತ್ತ ವಿಧಾನಪರಿಷತ್​ನಲ್ಲಿ ಸ್ವಪಕ್ಷದ ವಿರುದ್ಧವೇ ಬಿಕೆ ಹರಿಪ್ರಸಾದ್ ಹೊಸ ಬಾಂಬ್ ಸಿಡಿಸಿದ್ದಾರೆ.

ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ ವಿಪಕ್ಷಗಳು ಸರ್ಕಾರದ ವಿರುದ್ಧ ಹಲವು ಅಸ್ತ್ರಗಳನ್ನು ಹೂಡಲು ಭರ್ಜರಿ ಸಿದ್ಧತೆ ಮಾಡಿಕೊಡಿದ್ದರೆ, ಇತ್ತ ಸರ್ಕಾರ ಕೂಡಾ ಕೌಂಟರ್ ಕೊಡಲು ಸಚಿವರನ್ನು ಸಜ್ಜುಗೊಳಿಸಿದೆ. ವಿಪಕ್ಷಗಳಿಂದ ಬರುವ ಯಾವುದೇ ಆರೋಪಗಳ ಬಾಣವನ್ನು ಎದುರಿಸಲು ಕಾಂಗ್ರೆಸ್ ನಾಯಕರು ಸಿದ್ಧತೆ ಮಾಡಿಕೊಂಡಿದ್ದಾರೆ. ಆದ್ರೆ ನಿನ್ನೆಯಿಂದ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ವಿಪಕ್ಷ ಸದಸ್ಯರೇನೋ ಎನ್ನುವಂತೆ ವರ್ತಿಸ್ತಿದ್ದಾರೆ. ನಿನ್ನೆಯಷ್ಟೇ ಆರ್. ಅಶೋಕ್​ರನ್ನು ಸದನಕ್ಕೆ ಪರಿಚಯಿಸಬೇಕು ಅಂತಾ ಪಟ್ಟು ಹಿಡಿದಿದ್ದ ರಾಯರೆಡ್ಡಿ, ಇಂದು ಕೂಡಾ ಸಿಡಿಮಿಡಿಗೊಂಡಿದ್ದಾರೆ.

ಸಭಾತ್ಯಾಗ ಮಾಡಿದ ರಾಯರೆಡ್ಡಿ

ಸದನದ ನಿಯಮಾವಳಿ ಬಗ್ಗೆ ಬಸವರಾಜ ರಾಯರೆಡ್ಡಿ ಮಾತನಾಡಲು ಮುಂದಾಗ್ತಿದ್ದಂತೆ, ಮಧ್ಯಪ್ರವೇಶಿಸಿದ ಸ್ಪೀಕರ್ ಯುಟಿ ಖಾದರ್, ನೀವು ಬಂದಿದ್ದೇ 12 ಗಂಟೆಗೆ ಕುಳಿತುಕೊಳ್ಳಿ ಎಂದ್ರು. ಇದ್ರಿಂದ ಅಸಮಾಧಾನಗೊಂಡ ರಾಯರೆಡ್ಡಿ ಸ್ಪೀಕರ್​ಗೆ ಸದಸ್ಯರ ಮಾತು ಕೇಳುವ ತಾಳ್ಮೆ ಇರಬೇಕು ಅಂತಾ ಸ್ಪೀಕರ್ ಜೊತೆ ವಾಗ್ವಾದ ನಡೆಸಿದ್ರು. ಮಾತಾಡಲು ಅವಕಾಶ ಸಿಗದಿದ್ದರೆ ಹೊರನಡೆಯುತ್ತೇನೆ ಅಂತಾ ಹೇಳಿ ಸಭಾತ್ಯಾಗ ಮಾಡಿದ್ದಾರೆ.

ಸ್ನೇಹಿತರೇ ಬೆನ್ನಿಗೆ ಚೂರಿ ಹಾಕಿದ್ದಾರೆ: ಹರಿಪ್ರಸಾದ್

ಮತ್ತೊಂದೆಡೆ ವಿಧಾನಪರಿಷತ್ ಸದಸ್ಯ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ಬಿಕೆ ಹರಿಪ್ರಸಾದ್, ವಿಪಕ್ಷ ನಾಯಕರ ಪರ ಬ್ಯಾಟ್ ಬೀಸಿದ್ದಾರೆ. ರಾಜಕಾರಣದಲ್ಲಿ ನನಗೆ ಯಾವತ್ತೂ ವಿಪಕ್ಷದಿಂದ ತೊಂದರೆ ಆಗಿಲ್ಲ. ಇಡಿ, ಐಟಿ ಮೂಲಕ ಯಾವತ್ತೂ ವಿಪಕ್ಷಗಳು ತೊಂದರೆ ನೀಡಿಲ್ಲ. ಜೊತೆಯಲ್ಲಿರುವ ಸ್ನೇಹಿತರೇ ಬೆನ್ನಿಗೆ ಚೂರಿ ಹಾಕಿದಾಗ ನೋವಾಗಿದೆ ಎಂದು ಅಳಲು ತೋಡಿಕೊಂಡಿದ್ದಾರೆ.

ಇದನ್ನೂ ಓದಿ: ರಾಜಕಾರಣದಲ್ಲಿ ನನಗೆ ಯಾವತ್ತೂ ವಿಪಕ್ಷದಿಂದ ತೊಂದರೆ ಆಗಿಲ್ಲ: ಬಿಕೆ ಹರಿಪ್ರಸಾದ್

ಯತ್ನಾಳ್ ಸಿಡಿಮಿಡಿ

ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಮತ್ತೆ ಸಿಡಿಮಿಡಿಗೊಂಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಂಬಂಧಿಕರ ಮನೆ ಮೇಲೆ ಲೋಕಾಯುಕ್ತ ದಾಳಿ ಸಂಬಂಧ ಯತ್ನಾಳ್ ಪ್ರತಿಕ್ರಿಯೆ ನೀಡಿದ್ದಾರೆ. ಭ್ರಷ್ಟಾಚಾರವನ್ನು ಯಾವ ಪಕ್ಷದವರೂ ಮಾಡಿದ್ರೂ, ಅವರ ಅವರ ವಿರುದ್ಧ ಕ್ರಮ ಆಗ್ಬೇಕು. ಭ್ರಷ್ಟಾಚಾರ ಮಾಡಿದವರನ್ನೇ ನಾಯಕರನ್ನಾಗಿ ಮಾಡಿದರೆ ಹೇಗೆ ಅಂತಾ ಪ್ರಶ್ನಿಸಿದರು.

ಕಾಂಗ್ರೆಸ್, ಬಿಜೆಪಿಯ ಈ ಮೂವರು ನಾಯಕರು ಕಲಾಪದ ವೇಳೆಯೂ ಪಕ್ಷದ ನಾಯಕರಿಗೆ ತಲೆನೋವಾಗಿಬಿಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ