AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳಗಾವಿ ಅಧಿವೇಶನ: ಸೂಕ್ತ ಸಮಯಕ್ಕೆ ಬರುವ ಶಾಸಕರಿಗೆ ಕಾಫಿ ಕಪ್ ಗಿಫ್ಟ್, ಸ್ಪೀಕರ್ ಹೇಳಿದ್ದಿಷ್ಟು

Belagavi Winter Session: ಇಂದಿನಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಅಧಿವೇಶನದ ಸೂಕ್ತ ಸಮಯಕ್ಕೆ ಬರುವ ಶಾಸಕರುಗಳಿಗೆ ಉಡುಗೊರೆ ಕೊಡಲಾಗುತ್ತಿದೆ. ಇನ್ನು ಈ ಬಗ್ಗೆ ಸ್ಪೀಕರ್ ಯುಟಿ ಖಾದರ್ ಮಾತನಾಡಿದ್ದು, ಅದು ಈ ಕೆಳಗಿನಂತಿದೆ,

ಬೆಳಗಾವಿ ಅಧಿವೇಶನ: ಸೂಕ್ತ ಸಮಯಕ್ಕೆ ಬರುವ ಶಾಸಕರಿಗೆ ಕಾಫಿ ಕಪ್ ಗಿಫ್ಟ್, ಸ್ಪೀಕರ್ ಹೇಳಿದ್ದಿಷ್ಟು
ಸ್ಪೀಕರ್ ಯುಟಿ ಖಾದರ್
Anil Kalkere
| Edited By: |

Updated on: Dec 04, 2023 | 9:29 AM

Share

ಬೆಳಗಾವಿ, (ಡಿಸೆಂಬರ್ 04): ಬೆಳಗಾವಿಯ ಸುವರ್ಣ ಸೌಧದಲ್ಲಿ  ಚಳಿಗಾಲದ ಅಧಿವೇಶನ (Belagavi Session)ಇಂದಿನಿಂದ ಆರಂಭವಾಗಲಿದೆ. ಬೆಳಗ್ಗೆ 11ಗಂಟೆಗೆ ಅಧಿವೇಶನ ಆರಂಭಗೊಳ್ಳಲಿದೆ. ಇದಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದ್ದು,ಇತ್ತ ಸುವರ್ಣಸೌಧದ ಹೊರಗೆ, ಪ್ರತಿಭಟನಾ ಸ್ಥಳ ಸೇರಿದಂತೆ ಎಲ್ಲೆಡೆ ಸಿಸಿಟಿವಿ ಕಣ್ಗಾವಲು ಇರಿಸಲಾಗಿದೆ. ಇನ್ನು ಅಧಿವೇಶನಕ್ಕೆ ಸೂಕ್ತ ಸಮಯಕ್ಕೆ ಆಗಮಿಸುವ ಶಾಸಕರುಗಳಿಗೆ ಕಾಫಿ ಕಪ್ ಗಿಫ್ಟ್​  (Gift)ಕೊಡಲಾಗುತ್ತಿದೆ. ಈ ಬಗ್ಗೆ ಸ್ವೀಕರ್ ಯುಟಿ ಖಾದರ್ (UT Khadar) ಮಾಹಿತಿ ನೀಡಿದ್ದಾರೆ.

ಇನ್ನು ಈ ಬಗ್ಗೆ ಟಿವಿ9ಗೆ ಪ್ರತಿಕ್ರಿಯಿಸಿರುವ ಯು ಖಾದರ್, ಕಳೆದ ಅಧಿವೇಶದನಲ್ಲಿ ಮೊದಲ ಬೇಗ ಬಂದವರ ಹೆಸರನ್ನ ಕೂಗಿ ಹೇಳುತ್ತೇವೆ ಎಂದು ಹೇಳಿದ್ವಿ. ಅಂತಿಮವಾಗಿ ಯಾರು ಎಷ್ಟು ದಿನ‌ ಬಂದಿದ್ದಾರೆ ಅವರಿಗೆ ಗಿಫ್ಟ್ ಕೊಡುವುದಾಗಿ ಹೇಳಿದ್ವಿ. ಕಳೆದ ಅಧಿವೇಶನದಲ್ಲಿ‌ ಕೆಲವರು ಒಂದು ದಿನ, ಮತ್ತೆ ಕೆಲವರು ಐದು ದಿನ, ಹಲವರು ಹತ್ತು ದಿನವೂ ಬಂದಿದ್ದಾರೆ. ಇದಕ್ಕೆ ಅನುಗುಣವಾಗಿ ಇವರಿಗೆ ಪ್ರೋತ್ಸಾಹ ನೀಡಲು, ಗುರುತಿಸಿಕೊಳ್ಳಲು ಪ್ರಶಸ್ತಿ ನೀಡುತ್ತಿದ್ದೇವೆ. ತಡವಾಗಿ ಬರುವವರಿಗೆ ಶಿಕ್ಷೆ ವಿಧಿಸುವುದಕ್ಕಿಂತ ಈ ರೀತಿ ಉಡುಗೊರೆ ಕೊಟ್ಟು ಬೇಗ ಬರುವಂತೆ ಪ್ರೇರಣ ಮಾಡುತ್ತೇವೆ ಎಂದರು.

ಇದನ್ನೂ ಓದಿ: ಬೆಳಗಾವಿ ಅಧಿವೇಶನ: ಇಂದಿನಿಂದ ಚಳಿಗಾಲದ ಅಧಿವೇಶನ ಶುರು, ಸರ್ಕಾರಕ್ಕೆ ಚಳಿ ಬಿಡಿಸಲು ಪ್ರತಿಪಕ್ಷ ಸಜ್ಜು

ಜಮೀರ್ ಹೇಳಿಕೆ ಹಾಗೂ ಇತರೆ ಅಂಶಗಳ ಕುರಿತು ಪ್ರತಿಪಕ್ಷಗಳ ಪ್ರತಿಭಟನೆ ಬಗ್ಗೆ ಮಾತನಾಡಿದ ಸ್ಪೀಕರ್, ಚುನಾವಣೆ ಸಂದರ್ಭದಲ್ಲಿ ರಾಜಕೀಯವಾಗಿ ಹೇಳಿದ್ದಕ್ಕೆ ನಾನು ಉತ್ತರ ಕೊಟ್ಟಿದ್ದೇನೆ. ಪ್ರತಿಪಕ್ಷವಾಗಿ ಅವರೂ ಅವರ ಹೇಳಿಕೆಯನ್ನ ಕೊಟ್ಟಿದ್ದಾರೆ. ವಿಧಾನಸಭೆಯ ಒಳಗೆ ಸಿಕ್ಕಿದ 10 ದಿನಗಳ ಅವಧಿಯಲ್ಲಿ ಬೆಳಗಾವಿ, ರಾಜ್ಯದ ಜನರ ಪ್ರಗತಿ ವಿಚಾರವಾಗಿ ಚರ್ಚೆಗಳು ಮಾಡಲಿ. ಜನರಿಗೆ ಬೇಸರವಾಗುವ ವಿಚಾರಗಳ ಬಗ್ಗೆ ಚರ್ಚೆಸುವುದು ಬೇಡ ಎಂದರು.

ಬೇರೆ ಬೇರೆ ಚಾನಲ್ ಗಳಿವೆ, ಮ್ಯೂಸಿಕ್ ಮೋಡ್, ಮನರಂಜನೆ ಚಾನಲ್, ನ್ಯೂಸ್ ಚಾನಲ್ ಗಳಂತ ಇವೆ. ಶಾಂಪಿಂಗ್ ಚಾನಲ್ ಗಳು ಅಂತ ಸ್ವಿಚ್ ಗಳನ್ನ ಬದಲಿಸುತ್ತಾ ಇರುತ್ತೇವೆ. ಈಗ ಎಲೆಕ್ಷನ್ ಮೋಡ್ ಮುಗಿದಿದೆ, ಕಳೆದ 3 ತಿಂಗಳಿಂದ ಎಲ್ಲರೂ ಎಲೆಕ್ಷನ್ ಚಾನಲ್ ಮೋಡ್ ನಲ್ಲಿ ಇದ್ದರು. ರಾಜಕೀಯ ಚಾನಲ್ ಸಹ ಇತ್ತು, ಈಗ ರಾಜಕೀಯ ಮತ್ತು ಎಲೆಕ್ಷನ್ ಚಾನಲ್ ಬಿಟ್ಟು ಅಭಿವೃದ್ಧಿ ಚಾನಲ್ ಗೆ ಎಲ್ಲ ಶಾಸಕರು ಬರಬೇಕು. ಸುವರ್ಣ ಸೌಧದ ಮೆಟ್ಟಿಲುಗಳನ್ನ ಹತ್ತಿ ಬರುವಾಗ ತಮ್ಮ ಚಾನಲ್ ಮೋಡನ್ನ ಬದಲಿಸಿ ಬರುತ್ತಾರೆ ಎಂದು ತಿಳಿಸಿದರು.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?