AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಲ್ಲೆಲ್ಲಿ ಕಾಂಗ್ರೆಸ್ ಸರ್ಕಾರ ಇದೆಯೋ ಅಲ್ಲೆಲ್ಲ ಬೆಳಗಾವಿಯಂಥ ಘಟನೆ: ಸಚಿವ ಪ್ರಲ್ಹಾದ್ ಜೋಶಿ ಟೀಕೆ

ಬೆಳಗಾವಿ ಘಟನೆಯನ್ನು ವಿಧಾನಸಭೆ ಅಧಿವೇಶನದಲ್ಲಿ ಸೂಕ್ತ ರೀತಿಯಲ್ಲಿ ಪ್ರಸ್ತಾಪಿಸದ್ದಕ್ಕೆ ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರ ಮೇಲೆ ಗರಂ ಆಗಿತ್ತು. ನಂತರ ಘಟನೆ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಐವರು ಸದಸ್ಯರ ಸತ್ಯಶೋದನಾ ಸಮಿತಿ ರಚನೆ ಮಾಡಿದ್ದರು.

ಎಲ್ಲೆಲ್ಲಿ ಕಾಂಗ್ರೆಸ್ ಸರ್ಕಾರ ಇದೆಯೋ ಅಲ್ಲೆಲ್ಲ ಬೆಳಗಾವಿಯಂಥ ಘಟನೆ: ಸಚಿವ ಪ್ರಲ್ಹಾದ್ ಜೋಶಿ ಟೀಕೆ
ಪ್ರಲ್ಹಾದ್ ಜೋಶಿ
ಶಿವಕುಮಾರ್ ಪತ್ತಾರ್
| Edited By: |

Updated on: Dec 16, 2023 | 12:36 PM

Share

ಹುಬ್ಬಳ್ಳಿ, ಡಿಸೆಂಬರ್ 16: ಬೆಳಗಾವಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ಮಾಡಿದ ಘಟನೆ ಇಡೀ ನಾಗರಿಕ ಸಮಾಜ ತಲೆತಗ್ಗಿಸುವಂಥದ್ದು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಹೇಳಿದರು. ಹುಬ್ಬಳ್ಳಿ ನಗರದಲ್ಲಿ ಮಾತನಾಡಿದ ಅವರು, ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ (Congress Government) ಇದ್ದಾಗ ಇದೇ ಪರಿಸ್ಥಿತಿ ಇತ್ತು. ಎಲ್ಲೆಲ್ಲಿ ಕಾಂಗ್ರೆಸ್ ಸರ್ಕಾರ ಇದೆಯೋ ಅಲ್ಲೆಲ್ಲಾ ಇಂತಹ ಘಟನೆಗಳು ನಡೆಯುತ್ತವೆ. ಅಪರಾಧಿ ಜಗತ್ತು ಮತ್ತು ಕಾಂಗ್ರೆಸ್​​ಗೂ ಅವಿನಾಭಾವ ಸಂಬಂಧ ಇದೆ ಎಂದು ಟೀಕಿಸಿದರು.

ಬೆಳಗಾವಿಯ ವಂಟಮೂರಿಯಲ್ಲಿ ನಡೆದ ಘಟನೆಯನ್ನು ನಮ್ಮ ಪಕ್ಷ ಗಂಭೀರವಾಗಿ ಪರಿಗಣಿಸಿದೆ ಎಂದು ಸಚಿವರು ಹೇಳಿದರು.

ಬೆಳಗಾವಿ ಘಟನೆಯನ್ನು ವಿಧಾನಸಭೆ ಅಧಿವೇಶನದಲ್ಲಿ ಸೂಕ್ತ ರೀತಿಯಲ್ಲಿ ಪ್ರಸ್ತಾಪಿಸದ್ದಕ್ಕೆ ಬಿಜೆಪಿ ಹೈಕಮಾಂಡ್ ರಾಜ್ಯ ನಾಯಕರ ಮೇಲೆ ಗರಂ ಆಗಿತ್ತು. ನಂತರ ಘಟನೆ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಐವರು ಸದಸ್ಯರ ಸತ್ಯಶೋದನಾ ಸಮಿತಿ ರಚನೆ ಮಾಡಿದ್ದರು. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಕರ್ನಾಟಕ ಬಿಜೆಪಿ ನಾಯಕರು ಬೆಳಗಾವಿ ಘಟನೆ ಖಂಡಿಸಿ ರಾಜ್ಯದ ಹಲವೆಡೆ ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.

ಸಂಸತ್​ನಲ್ಲಿ ನಡೆದ ಘಟನೆ ಹಿಂದೆ ವ್ಯವಸ್ಥಿತ ಪಿತೂರಿ: ಜೋಶಿ

ಸಂಸತ್​​​ನಲ್ಲಿ ನಡೆದ ಘಟನೆ ಕಿಡಿಗೇಡಿಗಳು ಮಾಡಿದ ಘಟನೆ ಅಲ್ಲ. ಅದರ ಹಿಂದೆ ವ್ಯವಸ್ಥಿತ ಪಿತೂರಿ ಇದೆ. ಪ್ರಜಾಪ್ರಭುತ್ವಕ್ಕೆ ಧಕ್ಕೆ ತರಲು ಪಕ್ಕಾ ಪ್ಲ್ಯಾನ್ ಮಾಡಿದ್ದಾರೆ. ಇಂಥ ವಿಚಾರಗಳಲ್ಲಿ ರಾಜಕಾರಣ ಮಾಡಬಾರದು ಎಂದು ಜೋಶಿ ಹೇಳಿದರು.

ಕಳೆದ ಎರಡು ದಿನಗಳಿಂದ ಸದನ ನಡೆಯಲು ಅವಕಾಶ ಕೊಡಲಿಲ್ಲ. ಈ ಹಿಂದೆ ಪಿಸ್ತೂಲ್ ಹಿಡಿದುಕೊಂಡು ಒಬ್ಬರು ಒಳ ಪ್ರವೇಶಿಸಿದ ಘಟನೆಯೂ ನಡೆದಿತ್ತು. ಡ್ರ್ಯಾಗನ್ ತಗೆದುಕೊಂಡು ಎಂಟ್ರಿ ಆಗಿದ್ದರು. ಆವಾಗಲೆಲ್ಲ ಯಾರು ಪಾಸ್ ಕೊಟ್ಟಿದ್ದರು ಎಂಬುದನ್ನೇ ಬಹಿರಂಗಪಡಿಸಿರಲಿಲ್ಲ. ನಾವು ಇದನ್ನು ಅತ್ಯಂತ ಸಂವೇದನೆ ಶೀಲವಾಗಿ ತಗೆದುಕೊಂಡಿದ್ದೇವೆ. ಸ್ವೀಕರ್ ಉನ್ನತ ತನಿಖೆಗೆ ಆದೇಶ ಮಾಡಿದ್ದಾರೆ. ದೆಹಲಿ ಪೊಲೀಸರು ಹೈಲೇವಲ್ ತನಿಖೆ ಮಾಡ್ತಿದ್ದಾರೆ‌. ಮುಂದೆ ಈ ರೀತಿ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ. ಕಾಂಗ್ರೆಸ್ ಇದನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿರುವುದು ಬಹಳ ದುಃಖ ಉಂಟುಮಾಡಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮೈಸೂರಿನವರು ಎನ್ನುವ ಕಾರಣಕ್ಕೆ ಪ್ರತಾಪ್ ಸಿಂಹ ಪಾಸ್ ಕೊಟ್ರಾ? ಸಚಿವ ಪ್ರಲ್ಹಾದ್​ ಜೋಶಿ ಹೇಳಿದ್ದಿಷ್ಟು

ಕಳೆದ 10 ವರ್ಷದಿಂದ ದೇಶದಲ್ಲಿ ಭಯೋತ್ಪಾದಕ ದಾಳಿ ನಿಂತುಹೋಗಿದೆ. ಮೋದಿ ಸರ್ಕಾರ ಝೀರೋ ಟಾಲರೆನ್ಸ್ ಟೆರರಿಸ್ಟ್ ಪಾಲಿಸಿ ಹೊಂದಿದೆ. ಸಂಸತ್ ಘಟನೆ ಬಗ್ಗೆ ಸ್ಪೀಕರ್ ಕಟ್ಟುನಿಟ್ಟಿನ ತನಿಖೆಗೆ ಆದೇಶಿಸಿದ್ದಾರೆ. ವಿಪಕ್ಷಗಳು ಇವತ್ತಿನವರೆಗೂ ಸದನ ನಡೆಯೋಕೆ ಅವಕಾಶ ಕೊಟ್ಟಿಲ್ಲ. ಬಹಳ ಮಹತ್ತರ ಮಸೂದೆಗಳನ್ನು ಮಂಡಿಸಿ ಅನುಮೋದನೆ ಪಡೆಯಬೇಕಿದೆ. ಬ್ರಿಟಿಷ್ ಕಾನೂನು ತಗೆದು ಹೊಸ ಕಾನೂನು ತರಬೇಕಿದೆ ಎಂದು ಜೋಶಿ ಹೇಳಿದ್ದಾರೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ
ನ್ಯಾಯ ಬೇಕು ಎಂದು 9 ಮಹಡಿಗಳ ಬಿಲ್ಡಿಂಗ್ ಏರಿ ಯುವಕನ ಹೈಡ್ರಾಮಾ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ವ್ಯಾನ್ ಪುಡಿಪುಡಿ, ಮೈ ಜುಂ ಎನಿಸುವ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಜೋಧ್​ಪುರದ ಪಾರ್ಕ್​​ನಲ್ಲಿ ಜೇನು ನೊಣಗಳ ದಾಳಿ
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
ಲೆನ್ಸ್‌ಕಾರ್ಟ್ ಉದ್ಯೋಗಿಗಳಿಗೆ ತಿಲಕವಿಟ್ಟ ಬಿಜೆಪಿ ನಾಯಕಿ ನಾಜಿಯಾ ಇಲಾಹಿ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ