AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೆಡಿಎಸ್ ಪಕ್ಷದ ಚಿಹ್ನೆ, ಲೆಟರ್​ಹೆಡ್‌ ಬಳಸದಂತೆ ಸಿಎಂ ಇಬ್ರಾಹಿಂಗೆ ಕೋರ್ಟ್ ಆದೇಶ

ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡ ಹಿನ್ನೆಲೆ ಜೆಡಿಎಸ್ ಪಕ್ಷದ ವಿರುದ್ಧ ಅಸಮಾಧಾನಗೊಂಡಿದ್ದ ಸಿಎಂ ಇಬ್ರಾಹಿಂ ಅವರು ವರಿಷ್ಠರ ವಿರುದ್ಧವೇ ಹೇಳಿಕೆಗಳನ್ನು ನೀಡುತ್ತಿದ್ದರು. ಹೀಗಾಗಿ ಸಿಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. ಇದೀಗ, ಜೆಡಿಎಸ್ ಚಿಹ್ನೆ, ಲೆಟರ್​ಹೆಡ್ ಬಳಸದಂತೆ ಇಬ್ರಾಹಿಂಗೆ ನ್ಯಾಯಾಲಯ ನಿರ್ಬಂಧ ವಿಧಿಸಿದೆ.

ಜೆಡಿಎಸ್ ಪಕ್ಷದ ಚಿಹ್ನೆ, ಲೆಟರ್​ಹೆಡ್‌ ಬಳಸದಂತೆ ಸಿಎಂ ಇಬ್ರಾಹಿಂಗೆ ಕೋರ್ಟ್ ಆದೇಶ
ಜೆಡಿಎಸ್ ಪಕ್ಷದ ಚಿಹ್ನೆ, ಲೆಟರ್​ಹೆಡ್‌ ಬಳಸದಂತೆ ಸಿಎಂ ಇಬ್ರಾಹಿಂಗೆ ಕೋರ್ಟ್ ಆದೇಶ
ಸುನಿಲ್​ ಎಮ್​ ಹೆಚ್​
| Edited By: Rakesh Nayak Manchi|

Updated on:Jan 20, 2024 | 10:34 PM

Share

ಬೆಂಗಳೂರು, ಜ.20: ಜೆಡಿಎಸ್ (JDS) ಚಿಹ್ನೆ, ಲೆಟರ್​ಹೆಡ್ ಬಳಸದಂತೆ ಸಿ.ಎಂ. ಇಬ್ರಾಹಿಂಗೆ (C.M.Ibrahim) ನಗರದ ಸಿಟಿ ಸಿವಿಲ್ ನ್ಯಾಯಾಲಯ ನಿರ್ಬಂಧ ವಿಧಿಸಿ ಆದೇಶಿಸಿದೆ. ಜೆಡಿಎಸ್​ನಿಂದ ಉಚ್ಚಾಟನೆಯಾದರೂ ಪಕ್ಷದ ಚಿಹ್ನೆ ಬಳಸುತ್ತಿದ್ದರು. ಇದಕ್ಕೆ ನಿರ್ಬಂಧ ವಿಧಿಸುವಂತೆ ಕೋರಿ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಎ.ಪಿ.ರಂಗನಾಥ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಜೆಡಿಎಸ್ ಪಕ್ಷದ ಚಿಹ್ನೆ, ಲೆಟರ್‌ ಹೆಡ್‌ ಬಳಕೆ ಮಾಡುವಂತಿಲ್ಲ. ಜೆಡಿಎಸ್ ಕುರಿತಾಗಿ ಮಾಧ್ಯಮಗೋಷ್ಠಿ ನಡೆಸುವಂತಿಲ್ಲ. ಪದಾಧಿಕಾರಿಗಳನ್ನೂ ನೇಮಕ ಮಾಡುವಂತಿಲ್ಲ ಎಂದು ಸಿಟಿ ಸಿವಿಲ್ ಕೋರ್ಟ್ ಆದೇಶಿಸಿದೆ. ಇಬ್ರಾಹಿಂ ಅವರಿಗೆ ಮಾತ್ರವಲ್ಲದೆ, ಇಮ್ರಾನ್ ಪಾಷಾ ಮತ್ತಿತರರಿಗೂ ನಿರ್ಬಂಧ ವಿಧಿಸಿದೆ.

ಇದನ್ನೂ ಓದಿ: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಹೆಚ್​ಡಿಕೆ? ರೆಸಾರ್ಟ್​ ರಾಜಕೀಯ ಗುಟ್ಟು ಬಿಚ್ಚಿಟ್ಟ ಜೆಡಿಎಸ್ ನಾಯಕ

ಸಿಎಂ ಇಬ್ರಾಹಿಂ ಅವರು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಲಾಗಿತ್ತು. ಯಾವಾಗ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿತೋ ಅಂದಿನಿಂದ ಪಕ್ಷದ ವಿರುದ್ಧ ಅಸಮಾಧಾನಗೊಂಡಿದ್ದರು. ಪಕ್ಷದ ವರಿಷ್ಠರ ವಿರುದ್ಧ ಇಬ್ರಾಹಿಂ ಹೇಳಿಕೆಗಳನ್ನು, ಸಭೆಗಳನ್ನು ನಡೆಸಲು ಆರಂಭಿಸಿದ್ದರು.

ನಮ್ಮದೇ ಒರಿಜಿನಲ್ ಜೆಡಿಎಸ್. ನಾನೇ ಪಕ್ಷದ ರಾಜ್ಯಾಧ್ಯಕ್ಷ ನಾನ್ಯಾಕೆ ಪಕ್ಷ ಬಿಟ್ಟು ಹೋಗಲಿ ಎಂದು ಸಿ.ಎಂ.ಇಬ್ರಾಹಿಂ ಗುಡುಗಿದ್ದರು. ಇಬ್ರಾಹಿಂ ಮಾತಿಗೆ ದೇವೇಗೌಡ ಹಾಗೂ ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಇತರೆ ಜೆಡಿಎಸ್ ನಾಯಕರು ಸಿಡಿಮಿಡಿಗೊಂಡಿದ್ದರು. ಅಲ್ಲದೇ ಕೆಲ ಜೆಡಿಎಸ್ ನಾಯಕರು ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವಂತೆ ಪಟ್ಟು ಹಿಡಿದಿದ್ದರು. ನಂತರ ನಡೆದ ಜೆಡಿಎಸ್ ಕೋರ್​ ಕಮಿಟಿ ಸಭೆಯಲ್ಲಿ ಒಮ್ಮತದ ನಿರ್ಣಯ ಕೈಗೊಂಡು ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:57 pm, Sat, 20 January 24

Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ