AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ರಾಜ್ಯಸಭೆಯ ಮಾಜಿ ಸದಸ್ಯ ಉಬೇದುಲ್ಲಾ ಖಾನ್ ಆಜ್ಮಿ ಜೆಡಿಎಸ್ ಸೇರ್ಪಡೆ

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹಾಗೂ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ನೇತೃತ್ವದಲ್ಲಿ ಇಂದು(ಮಾ.14) ರಾಜ್ಯಸಭೆಯ ಮಾಜಿ ಸದಸ್ಯ ಉಬೇದುಲ್ಲಾ ಖಾನ್ ಆಜ್ಮಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಬೆಂಗಳೂರು: ರಾಜ್ಯಸಭೆಯ ಮಾಜಿ ಸದಸ್ಯ ಉಬೇದುಲ್ಲಾ ಖಾನ್ ಆಜ್ಮಿ ಜೆಡಿಎಸ್ ಸೇರ್ಪಡೆ
ರಾಜ್ಯಸಭೆಯ ಮಾಜಿ ಸದಸ್ಯ ಉಬೇದುಲ್ಲಾ ಖಾನ್ ಆಜ್ಮಿ ಜೆಡಿಎಸ್ ಸೇರ್ಪಡೆ
ಕಿರಣ್ ಹನುಮಂತ್​ ಮಾದಾರ್
|

Updated on: Mar 14, 2023 | 12:20 PM

Share

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇದ್ದು. ಪಕ್ಷ ಸೇರ್ಪಡೆ ಕಾರ್ಯ ಜೋರಾಗಿದೆ. ಅದರಂತೆ ಇದೀಗ ಮಾಜಿ ಪ್ರಧಾನಿ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ(H. D. Deve Gowda) ಹಾಗೂ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ(C. M. Ibrahim) ನೇತೃತ್ವದಲ್ಲಿ ಇಂದು(ಮಾ.14) ಪದ್ಮನಾಭನಗರದ ದೇವೇಗೌಡರ ನಿವಾಸದಲ್ಲಿ ರಾಜ್ಯಸಭೆಯ ಮಾಜಿ ಸದಸ್ಯ ಉಬೇದುಲ್ಲಾ ಖಾನ್ ಆಜ್ಮಿ(Ubaidulla Khan Azmi) ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಇನ್ನು ಉಬೇದುಲ್ಲಾ ಖಾನ್ ಆಜ್ಮಿ ಜೆಡಿಎಸ್ ಸೇರ್ಪಡೆ ವಿಚಾರವಾಗಿ ಮಾತನಾಡಿದ ಜೆಡಿಎಸ್​ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ಮುಸ್ಲಿಂ ಸಮುದಾಯದಲ್ಲಿ ತಮ್ಮದೇ ಆದ ಹೆಸರು ಮಾಡಿರುವವರು, ಸರ್ವ ಧರ್ಮ ಸಮನ್ವಯ ಮಾಡುವಲ್ಲಿ ಇವರು ಎತ್ತಿದ ಕೈ. ವಿಪಿ ಸಿಂಗ್, ಜಯಪ್ರಕಾಶ್ ನಾರಾಯಣ್ ಅವರ ಒಡನಾಡಿಯಾಗಿದ್ದವರು. ಇಂತಹ ಪ್ರಣಾಳಿಕೆಯನ್ನು ಹಿಂದೆ ಯಾವ ಸರ್ಕಾರ ಕೂಡ ಜನರ ಮುಂದೆ ಇಟ್ಟಿಲ್ಲ. ಕುಮಾರಸ್ವಾಮಿ ಅವರು ಜನರ ಮುಂದೆ ಇಂತಹ ಪ್ರಣಾಳಿಕೆ ಇಟ್ಟಿದ್ದಾರೆ. ಇದನ್ನು ಮೆಚ್ಚಿ ಅವರು ಬಂದಿದ್ದಾರೆ. ಮುಂದಿನ ತಿಂಗಳಿನಿಂದ ಅವರನ್ನು ರಾಜ್ಯ ಪ್ರವಾಸ ಮಾಡಿಸುತ್ತೇವೆ. ಅವರಷ್ಟೆ ಅಲ್ಲ ಅವರ ಟೀಂ ಕೂಡ ಬರಲಿದೆ. ಜೊತೆಗೆ ಅವರ ಸೇರ್ಪಡೆಯಿಂದ ನಮಗೆ ಒಂದು ಶಕ್ತಿ ಬಂದಿದೆ ಎಂದರು.

ಇದನ್ನೂ ಓದಿ:ಜೆಡಿಎಸ್​ ಭದ್ರಕೋಟೆಯಲ್ಲಿ ಮೋದಿ ಮೋಡಿ, ರೋಡ್‌ಶೋನಲ್ಲಿ ಪ್ರಧಾನಿ ಮೇಲೆ ಕೇಸರಿ ಹೂ ಮಳೆ, ಫೋಟೋಗಳಲ್ಲಿ ನೋಡಿ

ಇನ್ನು ಇದೇ ಸಂದರ್ಭದಲ್ಲಿ ರಾಮನಗರದಲ್ಲಿ ಡಿಕೆ ಸುರೇಶ್ ಸ್ಪರ್ಧೆ ವಿಚಾರವಾಗಿ ಮಾತನಾಡಿದ ಅವರು ನಿಖಿಲ್ ಅವರು ರಾಮನಗರಕ್ಕೆ ಹೊಸಬರಲ್ಲ. ಅಲ್ಲಿಯೇ ಮನೆ ಇದೆ. ಅದೇ ಕ್ಷೇತ್ರದಲ್ಲಿ ತಿರುಗಾಡುತ್ತಾ ಇದ್ದಾರೆ. ಕಾಂಗ್ರೆಸ್​ನಿಂದ ಯಾರೇ ನಿಂತರೂ ಸ್ವಾಗತ. ಯಾವುದೇ ಹೆದರಿಕೆ, ಆತಂಕ ಇಲ್ಲ ಎಂದರು. ಜೊತೆಗೆ ಎಕ್ಸಪ್ರೆಸ್ ಹೈ ವೇ ಟೋಲ್ ಕಲೆಕ್ಷನ್ ಕುರಿತು ‘ಹಣ ಕಲೆಕ್ಷನ್ ಮಾಡ್ತೀವಿ ಅಂತಿದ್ದಾರೆ. ರಸ್ತೆ ಪೂರ್ತಿಯಾಗಿಲ್ಲ, ಅಂತಹದರಲ್ಲಿ ದುಡ್ಡು ಕಲೆಕ್ಟ್ ಮಾಡುತ್ತಿದ್ದಾರೆ. ವೈಜ್ಞಾನಿಕವಾಗಿ ರಸ್ತೆ ಮಾಡಿದ್ದೀರಾ, ಯಾರ ಅರ್ಜೆಂಟ್​ಗೆ ಹಣ ಕಲೆಕ್ಟ್ ಮಾಡ್ತಾ ಇದ್ದೀರಿ. ತಜ್ಞರ ಸಮಿತಿ ರಚನೆ ಮಾಡಿ, ಸರಿಪಡಿಸಿ ಆಮೇಲೆ ಹಣ ಕಲೆಕ್ಟ್ ಮಾಡಿ ಎಂದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು