AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಕಾಲೇಜಿನಲ್ಲಿದ್ದಾಗ ವಿಧಾನಸೌಧ ನೋಡಬೇಕು ಅಂತಾ ಅನ್ನಿಸಿತ್ತು: ಸದನದಲ್ಲಿ ಕಾಲೇಜ್ ಲೈಫ್ ಮೆಲುಕು ಹಾಕಿದ ಆರಗ ಜ್ಞಾನೇಂದ್ರ

ಇಂದು ವಿಧಾನಸಭೆ ಕಲಾಪದ ಕೊನೆಯ ದಿನವಾಗಿದ್ದು, ಸದನದಲ್ಲಿ ಮಾತನಾಡುತ್ತಾ ಗೃಹಸಚಿವ ಆರಗ ಜ್ಞಾನೇಂದ್ರ ಅವರು ವಿಧಾನಸೌಧಕ್ಕೆ ಪ್ರವೇಶಿಸುವ ಬಗ್ಗೆ ತಮ್ಮ ಕಾಲೇಜು ಜೀವನದಲ್ಲಿ ಚಿಂತಿಸಿದ್ದ ಬಗ್ಗೆ ಮಾಹಿತಿ ಹಂಚಿಕೊಂಡರು.

ನಾನು ಕಾಲೇಜಿನಲ್ಲಿದ್ದಾಗ ವಿಧಾನಸೌಧ ನೋಡಬೇಕು ಅಂತಾ ಅನ್ನಿಸಿತ್ತು: ಸದನದಲ್ಲಿ ಕಾಲೇಜ್ ಲೈಫ್ ಮೆಲುಕು ಹಾಕಿದ ಆರಗ ಜ್ಞಾನೇಂದ್ರ
ಗೃಹ ಸಚಿವ ಆರಗ ಜ್ಞಾನೇಂದ್ರ
Follow us
Rakesh Nayak Manchi
|

Updated on:Feb 24, 2023 | 3:22 PM

ವಿಧಾನಸಭೆ: ನಾನು ಕಾಲೇಜಿನಲ್ಲಿದ್ದಾಗ ವಿಧಾನಸೌಧ (Vidhana Soudha) ನೋಡಬೇಕು ಅಂತಾ ಅನ್ನಿಸಿತ್ತು. ನಮ್ಮನ್ನು ಒಂದು ದಿನ ಸದನಕ್ಕೆ ಕರೆದುಕೊಂಡು ಹೋಗಿದ್ದರು. ಈ ವೇಳೆ ನಾನು ನಮ್ಮ ಶಾಸಕರ ಕುರ್ಚಿ ಯಾವುದು ಅಂತ ಕೇಳಿದೆ. ಅದರಂತೆ ತೋರಿಸಿದಾಗ ನಾನು ಕುರ್ಚಿಗೆ ನಮಸ್ಕಾರ ಹಾಕಿದ್ದೆ. ಈಗ ನನ್ನ ಕ್ಷೇತ್ರದ ಜನರ ಆಶೀರ್ವಾದದಿಂದ ನಾನು ಇಲ್ಲಿಗೆ ಬಂದಿದ್ದೇನೆ. ಈ ಸದನವನ್ನು ನಾನು ಎಂದಿಗೂ ಮರೆಯುವುದಿಲ್ಲ ಎಂದು ಗೃಹ ಇಲಾಖೆ ಸಚಿವ ಆರಗ ಜ್ಞಾನೇಂದ್ರ (Araga Jnanendra) ಹೇಳಿದರು. ವಿಧಾನಸಭೆಯ (Karnataka Legislative Assembly) ಕಲಾಪದ ಕೊನೆಯ ದಿನವಾದ ಇಂದು ಮಾತನಾಡಿದ ಅವರು, ಈ ಅವಧಿಯಲ್ಲಿ ಏನೂ ಆಗುವುದಿಲ್ಲ ಅಂತಾ ನಾನು ಅಂದುಕೊಂಡಿದ್ದೆ. ಆದರೆ ನನಗೆ ಮಂತ್ರಿ ಸ್ಥಾನ ಕೊಟ್ಟಿದ್ದಾರೆ. ಅತ್ಯಂತ ಯಶಸ್ವಿಯಾಗಿ ನಾನು ಗೃಹ ಖಾತೆಯನ್ನು ನಿಭಾಯಿಸಿದ್ದೇನೆ ಎಂದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನನ್ನನ್ನು ವೈಯಕ್ತಿಕವಾಗಿ ಪ್ರೀತಿ ಮಾಡಿದರು. ಆದರೆ ಖಾತೆಯನ್ನು ಟೀಕೆ ಮಾಡಿದರು. ನೀನು ಒಳ್ಳೆಯವನು, ಆದರೆ ಈ ಖಾತೆಗೆ ನೀನು ಅಸಮರ್ಥ ಎಂದಿದ್ದರು. ವಿರೋಧ ಪಕ್ಷದವರು ಟೀಕೆ ಮಾಡುತ್ತಾರೆ, ಏನು ಮಾಡಲು ಆಗುವುದಿಲ್ಲ. ಕಾನೂನು ಸಚಿವರು ಒಂದು ರೀತಿ ಆಪದ್ಬಾಂಧವ. ಸಮಸ್ಯೆ ಎದುರಾದಾಗ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಬಗೆಹರಿಸಿದ್ದಾರೆ ಎಂದರು.

ಇದನ್ನೂ ಓದಿ: ವರ್ಷದಿಂದ ವರ್ಷಕ್ಕೆ ರಾಜ್ಯದಲ್ಲಿ ಹೆಚ್ಚುತ್ತಿರುವ ಪೋಕ್ಸೋ ಪ್ರಕರಣಗಳು: ಗೋವಿಂದರಾಜು ಪ್ರಶ್ನೆಗೆ ಆರಗ ಜ್ಞಾನೇಂದ್ರ ಉತ್ತರ

ಚಿಕ್ಕಮಗಳೂರು ಉಸ್ತುವಾರಿಯಾದಾಗ ಕೊಪ್ಪ ಸ್ಥಿತಿ ವೀಕ್ಷಣೆಗೆ ಹೋಗಿದ್ದೆ. ಹೆಚ್ಚಿನ ವಾಹನಗಳು ಬಂದಿದ್ದವು, ನನಗೆ ಒಮ್ಮೆ ಗಾಬರಿಯಾಯ್ತು. ಯಾಕೆ ಇಷ್ಟೊಂದು ವಾಹನಗಳು ಬಂದಿವೆ ಅಂತಾ ನಾನು ಕೇಳಿದ್ದೆ. ಆಗ ಇಂದಿನಿಂದ ನೀವು ಗೃಹಮಂತ್ರಿ ಅಂತಾ ಎಸ್​ಪಿಯವರು ಹೇಳಿದ್ದರು. ಗೃಹ ಇಲಾಖೆ ಖಾತೆ ಬೇಕಿತ್ತಾ ಅಂತಾ ನನಗೆ ಅನೇಕರು ಕೇಳಿದರು. ಆದರೆ ಅತ್ಯಂತ ಯಶಸ್ವಿಯಾಗಿ ನಾನು ಈ ಖಾತೆ ನಿಭಾಯಿಸಿದ್ದೇನೆ ಎಂದರು.

ಇದು ನನ್ನ ಕೊನೆಯ ಅಧಿವೇಶನ. ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವ ಮಾತೇ ಇಲ್ಲ. ರಾಜ್ಯದಲ್ಲಿ ಮತ್ತೆ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಪ್ರಯತ್ನ ಮಾಡುತ್ತೇನೆ ಎಂದು ಸದನದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿದಾಯ ಭಾಷಣ ಮಾಡಿದರು. ಈ ಬಗ್ಗೆ ಮಾತನಾಡಿದ ಗೃಹಸಚಿವರು, ಯಡಿಯೂರಪ್ಪ ಅವರು ಚುನಾವಣೆಗೆ ನಿಲ್ಲುವುದಿಲ್ಲ ಅಂತ ಹೇಳಿದ್ದಾರೆ. ಇದು ನಮ್ಮ ಆತಂಕವಾಗಿದೆ. ಅವರೆಲ್ಲಾ ಗೆದ್ದು ಮತ್ತೆ ಬರಬೇಕು ಎಂದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:50 pm, Fri, 24 February 23

‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್