AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೂತನ ರಾಜ್ಯಾಧ್ಯಕ್ಷರನ್ನ ಬರಮಾಡಿಕೊಳ್ಳಲು ಶೃಂಗಾರಗೊಂಡ ಬಿಜೆಪಿ ಕಚೇರಿ, ಜಗನಾಥ್ ಭವನದಲ್ಲಿ ಹಬ್ಬದ ಸಂಭ್ರಮ

ಕರ್ನಾಟಕದ ಬಿಜೆಪಿಯಲ್ಲೀಗ ಯುವ ಹವಾ. ಬಿಜೆಪಿ ರಾಜ್ಯ ಅಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ ಅವರನ್ನು ನೇಮಿಸಲಾಗಿದೆ. ಅವರು ಅಧಿಕಾರ ವಹಿಸಿಕೊಳ್ಳುವ ಕ್ಷಣ. ಬುಧವಾರ ಬೆಂಗಳೂರಿನ ಬಿಜೆಪಿ ಕಚೇರಿಯಲ್ಲಿ ನಡೆಯುವ ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಭರ್ಜರಿ ಸಿದ್ದತೆಯನ್ನೇ ಮಾಡಿಕೊಳ್ಳಲಾಗಿದೆ. ಬೆಳಗ್ಗೆ 6.30ರಿಂದಲೇ ಹೋಮ-ಹವನ ಶುರುವಾಗಿವೆ. ಹಾಗಾದ್ರೆ, ಇನ್ನು ನೂತನ ರಾಜ್ಯಾಧ್ಯಕ್ಷರನ್ನು ಬರಮಾಡಿಕೊಳ್ಳಲು ಬಿಜೆಪಿ ಕಚೇರಿ ಹೇಗೆಲ್ಲ ಸಿದ್ಧತೆಗೊಂಡಿದೆ ಎನ್ನುವುದನ್ನು ವಿಡಿಯೋಗಳನ್ನು ನೋಡಿ.

ನೂತನ ರಾಜ್ಯಾಧ್ಯಕ್ಷರನ್ನ ಬರಮಾಡಿಕೊಳ್ಳಲು ಶೃಂಗಾರಗೊಂಡ ಬಿಜೆಪಿ ಕಚೇರಿ, ಜಗನಾಥ್ ಭವನದಲ್ಲಿ ಹಬ್ಬದ ಸಂಭ್ರಮ
ಬಿಜೆಪಿ ಕಚೇರಿ
ರಮೇಶ್ ಬಿ. ಜವಳಗೇರಾ
|

Updated on: Nov 15, 2023 | 8:47 AM

Share

ಬೆಂಗಳೂರು, (ನವೆಂಬರ್ 03): ಕರ್ನಾಟಕ ಬಿಜೆಪಿ ಘಟಕದ ನೂತನ ರಾಜ್ಯಾಧ್ಯಕ್ಷರಾಗಿ ಬಿ.ವೈ.ವಿಜಯೇಂದ್ರ (BY Vijayendra) ಅವರು ಬುಧವಾರ (ನವೆಂಬರ್‌ 15) ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಬಿ.ವೈ.ವಿಜಯೇಂದ್ರ ಅವರು ಪದಗ್ರಹಣ (Karnataka BJP President) ಮಾಡಲಿದ್ದು, ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ (BJP Office) ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಇನ್ನು ವಿಜಯೇಂದ್ರ ಅವರ ಪದಗ್ರಹಣ ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಬೆಳಗ್ಗೆ 6.30ರಿಂದಲೇ ಹೋಮ-ಹವನ ಶುರುವಾಗಿವೆ. ಕರ್ನಾಟಕದ ಬಿಜೆಪಿ ಕಚೇರಿಯಲ್ಲಿ ಈಗ ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಪಕ್ಷಕ್ಕೆ ಹೊಸ ಸಾರಥಿಯಾಗಿ ವಿಜಯೇಂದ್ರ ಅವರು ನೇಮಕಗೊಂಡು ಬುಧವಾರ ನಿರ್ಗಮಿತ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲು ಅವರಿಂದ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇದಕ್ಕಾಗಿ ಬಿಜೆಪಿ ಕಚೇರಿಯನ್ನು ತೋರಣದಿಂದ ಅಲಂಕರಿಸಲಾಗಿದೆ. ಹಾಗೇ ಜಗನಾಥ್ ಭವನದ ಮುಂದೆ ರಂಗೋಲಿ ಬಿಡಿಸಲಾಗಿದೆ. ಆರು ತಿಂಗಳ ಹಿಂದೆ ವಿಧಾನಸಭೆ ಚುನಾವಣೆಯಲ್ಲಿ ಸೋತು ಸುಣ್ಣವಾಗಿದ್ದ ಬಿಜೆಪಿ ಕಚೇರಿಯಲ್ಲಿ ಸಂಭ್ರಮವೇ ಮಾಯವಾಗಿತ್ತು. ಈಗ ವಿಜಯೇಂದ್ರ ಅವರು ಬಿಜೆಪಿ ಅಧ್ಯಕ್ಷರಾಗಿ ನೇಮಕವಾಗುತ್ತಿದ್ದಂತೆ ಸುಣ್ಣ ಬಣ್ಣಗಳ ಜತೆಗೆ ದೀಪಗಳಿಂದಲೂ ಕರ್ನಾಟಕ ಬಿಜೆಪಿ ಕಚೇರಿ ಕಂಗೊಳಿಸುತ್ತಿದೆ.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್