AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾರ್ವಜನಿಕರ ತೆರಿಗೆ ಹಣದಿಂದ ಹೈವೇ ನಿರ್ಮಾಣ, ಮೋದಿ ಅವರಪ್ಪನ ಮನೆಯ ಹಣ ಅಲ್ಲ: ಹೆಚ್​.ವಿಶ್ವನಾಥ್

ಉದ್ಘಾಟನೆಗೊಂಡು ಸಾರ್ವಜನಿಕರು ಓಡಾಡಲು ಆರಂಭಿಸಿದ್ದರೂ ಬೆಂಗಳೂರು-ಮೈಸೂರು ಹೆದ್ದಾರಿ ಬಗೆಗಿನ ಚರ್ಚೆ ಮುಕ್ತಾಯಗೊಂಡಿಲ್ಲ. ರಾಜ್ಯದ ಪ್ರಬಲ ಮೂರು ಪಕ್ಷಗಳೂ ಕ್ರೆಡಿಡ್ ಕ್ಲೈಂ ಮಾಡಿಕೊಂಡಿದೆ. ಈ ನಡುವೆ ಹೆದ್ದಾರಿ ನಿರ್ಮಾಣದ ಬಗ್ಗೆ ಪ್ರಧಾನಿ ಮೋದಿ ವಿರುದ್ಧವೇ ಸ್ವಪಕ್ಷದ ಎಂಎಲ್​ಸಿ ಹೆಚ್.ವಿಶ್ವನಾಥ್ ಅವರು ವಾಗ್ದಾಳಿ ನಡೆಸಿದ್ದಾರೆ.

ಸಾರ್ವಜನಿಕರ ತೆರಿಗೆ ಹಣದಿಂದ ಹೈವೇ ನಿರ್ಮಾಣ, ಮೋದಿ ಅವರಪ್ಪನ ಮನೆಯ ಹಣ ಅಲ್ಲ: ಹೆಚ್​.ವಿಶ್ವನಾಥ್
ಹೆಚ್.ವಿಶ್ವನಾಥ್ ಮತ್ತು ನರೇಂದ್ರ ಮೋದಿ
Rakesh Nayak Manchi
|

Updated on: Mar 14, 2023 | 3:49 PM

Share

ಮೈಸೂರು: ಬೆಂಗಳೂರು-ಮೈಸೂರು ಹೆದ್ದಾರಿ (Bengaluru-Mysuru Expressway) ಉದ್ಘಾಟನೆಗೊಂಡು ಸಾರ್ವಜನಿಕರು ಓಡಾಡಲು ಆರಂಭಿಸಿದ್ದರೂ ಇದರ ನಿರ್ಮಾಣದ ಮೇಲಿನ ಚರ್ಚೆ ಮಾತ್ರ ಇನ್ನೂ ನಿಂತಿಲ್ಲ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳೆಲ್ಲವೂ ಹೈವೇ ನಿರ್ಮಾಣದಲ್ಲಿ ತಮ್ಮದೂ ಪಾಲಿದೆ ಎಂದು ಕ್ರೆಡಿಟ್ ಕ್ಲೈಂ ಮಾಡಿಕೊಂಡಿದೆ. ಈ ನಡುವೆ ಹೆದ್ದಾರಿ ನಿರ್ಮಾಣದ ಬಗ್ಗೆ ಪ್ರಧಾನಿ ಮೋದಿ ವಿರುದ್ಧವೇ ಸ್ವಪಕ್ಷದ ಎಂಎಲ್​ಸಿ ಹೆಚ್.ವಿಶ್ವನಾಥ್ (H.Vishwanath) ಅವರು ವಾಗ್ದಾಳಿ ನಡೆಸಿರುವುದು ಪಕ್ಷಕ್ಕೆ ಇರಿಸು ಮುರಿಸು ಉಂಟಾಗಿದೆ. ಹೈವೇಯನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ಅಥವಾ ಸಂಸದ ಪ್ರತಾಪ್ ಸಿಂಹ (Pratap Simha) ಅವರಾಗಲಿ ಅವರ ಅಪ್ಪನ ಮನೆಯಿಂದ ಹಣ ತಂದು ಮಾಡಿಲ್ಲ, ಸಾರ್ವಜನಿಕರ ಹಣದಿಂದ ನಿರ್ಮಾಣ ಮಾಡಿರುವುದು ಎಂದು ವಾಗ್ದಾಳಿ ನಡೆಸಿದರು.

ಬೆಂಗಳೂರು-ಮೈಸೂರು ಹೆದ್ದಾರಿಯನ್ನು ಮಾ.13 ರಂದು ಉದ್ಘಾಟನೆಗೊಂಡು ಇಂದಿನಿಂದ ಟೋಲ್​ ಸಂಗ್ರಹ ಪ್ರಾರಂಭವಾಗಿದೆ. ಇದಕ್ಕೆ ಭಾರೀ ವಿರೋಧವೂ ವ್ಯಕ್ತವಾಗುತ್ತಿದೆ. ಟೋಲ್ ಸಂಗ್ರಹ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದಾರೆ. ಟೋಲ್ ಸಂಗ್ರಹದ ಬಗ್ಗೆ ಮೈಸೂರಿನಲ್ಲಿ ಮಾತನಾಡಿದ ವಿಶ್ವನಾಥ್, ಮೋದಿಯವರು ಅವರಪ್ಪನ ಮನೆಯಿಂದ ಹಣ ತಂದು ಹೈವೇ ನಿರ್ಮಿಸಿಲ್ಲ. ಪ್ರತಾಪ್ ಸಿಂಹ ಅಪ್ಪನ ಮನೆಯಿಂದ ಹಣ ತಂದು ಹೈವೇ ಮಾಡಿಲ್ಲ. ಸಾರ್ವಜನಿಕರ ತೆರಿಗೆ ಹಣದಿಂದ ಹೈವೇ ನಿರ್ಮಾಣ ಮಾಡಲಾಗಿದೆ. ಆದರೂ ಹೈವೇಗೆ ದುಬಾರಿ ಟೋಲ್ ನಿಗದಿಪಡಿಸಿರುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಅರ್ಧ ಶೇವ್ ಮಾಡಿದ್ದಾರೆ, ಮತ್ತರ್ಧ ಶೇವ್ ಮಾಡಿಲ್ಲ: ಹೆಚ್ ವಿಶ್ವನಾಥ್

ಬೆಂಗಳೂರು-ಮೈಸೂರು ಎಕ್ಸ್​ಪ್ರೆಸ್​ ಹೈವೇಯನ್ನು ಸಂಪೂರ್ಣ ಉದ್ಘಾಟನೆ ಮಾಡಿಲ್ಲ. ಕೇವಲ ಅರ್ಧ ಪೂರ್ಣಗೊಂಡಿರುವ ಹೈವೇ ಉದ್ಘಾಟನೆ ಮಾಡಿದ್ದಾರೆ. ಅರ್ಧ ಶೇವ್ ಮಾಡಿದ್ದಾರೆ, ಮತ್ತರ್ಧ ಶೇವ್ ಮಾಡಿಲ್ಲ ಎಂದು ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ. ಅಲ್ಲದೆ, ಹೈವೇಯಲ್ಲಿ ಸಂಚರಿಸಲು ದುಬಾರಿ ಟೋಲ್​ ಹಾಕುತ್ತಿದ್ದಾರೆ. ಇದನ್ನು ವಿರೋಧಿಸಿ ಮಾರ್ಚ್ 17ರಂದು ಹೈವೇಯಲ್ಲಿ ಒಂದು ಗಂಟೆ ಶಾಂತಿಯುತ ಪ್ರತಿಭಟನೆ ಮಾಡುತ್ತೇನೆ. ನನ್ನೊಂದಿಗೆ ಯಾರು ಬರದಿದ್ದರೂ ಏಕಾಂಗಿಯಾಗಿ ಪ್ರತಿಭಟನೆ ಮಾಡುತ್ತೇನೆ ಎಂದರು.

ಇದನ್ನೂ ಓದಿ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸಂಗ್ರಹಿಸಲಾಗುತ್ತಿರುವ ಟೋಲ್ ಶುಲ್ಕ ಎಷ್ಟು ಗೊತ್ತಾ? ಕೇಳಿಸಿಕೊಂಡರೆ ಗಾಬರಿಯಾಗುತ್ತೀರಿ!

ಏನಪ್ಪಾ ಪ್ರತಾಪ್ ಸಿಂಹ.. ಎಷ್ಟು ಕೋಟಿಯ ಮನೆ ಕಟ್ಟುತ್ತಿದ್ದೀಯಾ?

ಸ್ವಪಕ್ಷೀಯ ಸಂಸದ ಪ್ರತಾಪ್ ಸಿಂಹ ವಿರುದ್ಧವೇ ಕಿಡಿಕಾರಿದ ಹೆಚ್.ವಿಶ್ವನಾಥ್, ಏನಪ್ಪಾ.. ಎಷ್ಟು ಕೋಟಿ ಹಣ ಖರ್ಚು ಮಾಡಿ ಮನೆ ಕಟ್ಟುತ್ತಿದ್ದೀಯಾ? ಬೆಂಗಳೂರು-ಮೈಸೂರು ಹೈವೇ ನಿರ್ಮಾಣದಲ್ಲಿ ಎಷ್ಟು ಕೋಟಿ ಬಂತು? ಬೆಕ್ಕು ಕಣ್ಮುಚ್ಚಿಕೊಂಡು ಹಾಲು ಕುಡಿದರೆ ಯಾರಿಗೂ ಗೊತ್ತಾಗುದಿಲ್ಲವಾ? ನಾನು ರಾಜಕಾರಣಕ್ಕೆ ಬಂದು 50 ವರ್ಷ ಆಯ್ತು. ನನ್ನ ಮನೆ ಹೇಗಿದೆ? ನೀನು ನಿನ್ನೆ ಬಂದವನು, ನಿನ್ನ ಮನೆ ಹೇಗಿದೆ? ಎಷ್ಟು ಕೋಟಿ ಖರ್ಚು ಮಾಡಿ ಮನೆ ಕಟ್ಟುತ್ತಿದ್ದೀಯಾ ಬಹಿರಂಗಪಡಿಸು ಎಂದು ಸವಾಲು ಹಾಕಿದರು.

ಎಕ್ಸ್​ಪ್ರೆಸ್​ ಹೈವೇ ಕಾಮಗಾರಿಯಲ್ಲಿ ಪ್ರತಾಪ್ ಸಿಂಹ ಲಾಭವಾಗಿಲ್ಲವೇ?

ಎಕ್ಸ್​ಪ್ರೆಸ್​ ಹೈವೇ ಕಾಮಗಾರಿಯಲ್ಲಿ ಪ್ರತಾಪ್ ಸಿಂಹ ಲಾಭವಾಗಿಲ್ಲವೇ ಎಂದು ಹೆಚ್.ವಿಶ್ವನಾಥ್​ ಪ್ರಶ್ನಿಸಿದ್ದಾರೆ. ಹೈವೇ ನಿರ್ಮಾಣಕ್ಕೆ ಜಲ್ಲಿಕಲ್ಲು, ಮರಳು ಸರಬರಾಜು ಮಾಡಿದವರು ನಿಮ್ಮ ಸ್ನೇಹಿತರಲ್ಲವೇ? ಬೆಕ್ಕು ಕಣ್ಣುಮುಚ್ಚಿಕೊಂಡು ಹಾಲು ಕುಡಿದರೆ ಗೊತ್ತಾಗಲ್ವಾ ಪ್ರತಾಪ್​ ಸಿಂಹ. ಪ್ರತಾಪ್ ಸಿಂಹಗೆ ನಾಚಿಕೆ ಮಾನ ಮರ್ಯಾದೆ ಯಾವುದೂ ಇಲ್ಲ. ಉರಿಗೌಡ, ನಂಜೇಗೌಡ ಹೆಸರು ಹೇಳಿಕೊಂಡು ರಾಜಕೀಯ ಮಾಡುತ್ತಿದ್ದಾರೆ. ಎಲ್ಲದರಲ್ಲೂ ರಾಜಕೀಯ ಮಾಡುವ ಇಂಥವರಿಗೆ ಏನನ್ನಬೇಕು? ಇವರನ್ನು ಅಧಿಕಾರಕ್ಕೆ ತಂದಿದ್ದಕ್ಕೆ ನಾನು ಪ್ರಾಯಶ್ಚಿತ್ತ ಮಾಡಿಕೊಳ್ಳಬೇಕಿದೆ ಎಂದು ಹೇಳಿದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ರಸ್ತೆ ಗುಂಡಿ ತಪ್ಪಿಸಲು ಹೋಗಿ ಗಂಭೀರ ಗಾಯಗೊಂಡ ಯವಕ
ರಸ್ತೆ ಗುಂಡಿ ತಪ್ಪಿಸಲು ಹೋಗಿ ಗಂಭೀರ ಗಾಯಗೊಂಡ ಯವಕ