AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Politics ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಡ್ತೇವೆ: ಸಂಚಲನ ಮೂಡಿಸಿದ ಜಮೀರ್ ಹೇಳಿಕೆ

ರಾಜ್ಯ ರಾಜಕೀಯದಲ್ಲಿ ಬಾಂಬ್ ಬ್ಲಾಸ್ಟ್ ಆಗಲಿದ್ದು, ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಡ್ತೇವೆ ಎಂದಿರುವ ಶಾಸಕ ಜಮೀರ್ ಅಹಮ್ಮದ್ ಖಾನ್ ಜಾರಕಿಹೊಳಿ ರಾಜಕೀಯದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ್ದಾರೆ.

Karnataka Politics ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಡ್ತೇವೆ: ಸಂಚಲನ ಮೂಡಿಸಿದ ಜಮೀರ್ ಹೇಳಿಕೆ
ಹುಬ್ಬಳ್ಳಿಯಲ್ಲಿ ಜಮೀರ್ ಅಹ್ಮದ್
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Oct 21, 2022 | 5:39 PM

ಧಾರವಾಡ: ಕರ್ನಾಟಕ ವಿಧಾನಸಭೆ ಚುನಾವಣೆ ಇನ್ನೇನು ಆರೇಳು ತಿಂಗಳು ಬಾಕಿ ಇದ್ದು, ಇದಕ್ಕಾಗಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿವೆ. ಇದರ ಮಧ್ಯೆ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಖಾನ್, ಡಿಸೆಂಬರ್‌ನಲ್ಲಿ ರಾಜ್ಯ ರಾಜಕೀಯದಲ್ಲಿ ಬದಲಾವಣೆ ಆಗಲಿದೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.

ಧಾರವಾಡದಲ್ಲಿ ಇಂದು(ಅಕ್ಟೋಬರ್ 21) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಸೆಂಬರ್‌ನಲ್ಲಿ ರಾಜ್ಯ ರಾಜಕೀಯದಲ್ಲಿ ಬಾಂಬ್ ಬ್ಲಾಸ್ಟ್ ಆಗಲಿದ್ದು, ಹೊಸ ವರ್ಷಕ್ಕೆ ನಾವು ಸಿಹಿ ಸುದ್ದಿ ಕೊಡುತ್ತೇವೆ ಎಂದು ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದಾರೆ.

Karnataka Politics: ದೊಡ್ಡಗೌಡ್ರ ಪ್ಲಾನ್ ಸಕ್ಸಸ್: ಭಾರೀ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್-ಬಿಜೆಪಿಗೆ ಜಿಟಿಡಿ ಶಾಕ್!

ಬಿಜೆಪಿಯಲ್ಲಿ ಬಹಳಷ್ಟು ಗೊಂದಲ ಇದೆ. ನವೆಂಬರ್‌ವರೆಗೆ ಕಾಯಿರಿ. ನವೆಂಬರ್ ಕಳೆಯಲಿ, ಡಿಸೆಂಬರ್ ನೋಡಿ ಯಾವ ಯಾವುದು ಯಾವ ತರಹ ಆಗಲಿದೆ. ಎಷ್ಟು ಜನ ಬಿಜೆಪಿ ಬಿಟ್ಟು ಆಚೆ ಬರುತ್ತಾರೆ ಕಾದು ನೋಡಿ. ರಮೇಶ ಜಾರಕಿಹೊಳಿ ಮಾತ್ರವಲ್ಲ ಇನ್ನೂ ಬಹಳ ಜನ ಬೇಸತ್ತಿದ್ದಾರೆ. ಎಷ್ಟು ಜನ ಬರ್ತಾರೆ ಅಂತ ನಾನು ಅಂದಾಜು ಹೇಳುವುದಿಲ್ಲ. ನವೆಂಬರ್‌ನಲ್ಲಿ ಎಲ್ಲ ಹೇಳುತ್ತೇವೆ ಎಂದು ಹೇಳಿದರು.

ರಾಸಲೀಲೆ ಸಿಡಿ ಹಾಗೂ ಕಳೆದ ಕಳೆದ ವಿಧಾನಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲು . ಈ ಎರಡು ಕಾರಣಗಳಿಂದ ರಮೇಶ್ ಜಾರಕಿಹೊಳಿ ಬಿಜೆಪಿ ಹೈಕಮಾಂಡ್ ನಾಯಕ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಅಷ್ಟಾಗಿ ಪಕ್ಷ ಕಾರ್ಯಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿಲ್ಲ.

ಅಲ್ಲದೇ ಎಚ್​ಡಿ ಕುಮಾರಸ್ವಾಮಿ ಜೊತೆಯೂ ಮುಂದಿನ ಚುನಾವಣೆ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಎಲ್ಲಾ ಬೆಳವಣಿಗೆ ಮಧ್ಯೆ  ರಮೇಶ ಜಾರಕಿಹೊಳಿ ಮಾತ್ರವಲ್ಲ ಇನ್ನೂ ಬಹಳ ಜನ ಬೇಸತ್ತಿದ್ದಾರೆ ಎನ್ನುವ  ಜಮೀರ್ ಅಹಮ್ಮದ್ ಹೇಳಿಕೆ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಹಾಗಾದ್ರೆ ಜಮೀರ್ ಕೊಟ್ಟ ಸುಳಿವಿನಂತೆ ರಮೇಶ್ ಜಾರಕಿಹೊಳಿ ಬಿಜೆಪಿ ತೊರೆಯುತ್ತಾರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ.

ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಪಹಲ್ಗಾಮ್​ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ಪ್ರತಿಭಟನೆ ಹಿನ್ನೆಲೆ ಎಸ್ಪಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ
ನಂಜನಗೂಡು ದೇವಾಲಯದಲ್ಲಿ ಒಂದೇ ತಿಂಗಳಲ್ಲಿ 2.59 ಕೋಟಿ ರೂ. ಸಂಗ್ರಹ