AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big News: ಜಾರ್ಖಂಡ್ ಬಿಕ್ಕಟ್ಟಿನ ನಡುವೆ ಇಂದು ವಿಶ್ವಾಸಮತ ಯಾಚನೆ; ಸಿಎಂ ಹೇಮಂತ್ ಸೊರೇನ್ ಭವಿಷ್ಯ ನಿರ್ಧಾರ

Hemant Soren: ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಶಾಸಕರಾಗಿ ಅನರ್ಹಗೊಳಿಸುವ ಸಾಧ್ಯತೆಯ ನಡುವೆ ಜಾರ್ಖಂಡ್‌ನ ಸುಮಾರು 30 ಶಾಸಕರು ಇಂದು ವಿಶ್ವಾಸ ಮತಕ್ಕೆ ಹಾಜರಾಗಲು ರಾಂಚಿಗೆ ಆಗಮಿಸಿದ್ದಾರೆ.

Big News: ಜಾರ್ಖಂಡ್ ಬಿಕ್ಕಟ್ಟಿನ ನಡುವೆ ಇಂದು ವಿಶ್ವಾಸಮತ ಯಾಚನೆ; ಸಿಎಂ ಹೇಮಂತ್ ಸೊರೇನ್ ಭವಿಷ್ಯ ನಿರ್ಧಾರ
ಹೇಮಂತ್ ಸೊರೇನ್
TV9 Web
| Edited By: |

Updated on:Sep 05, 2022 | 10:02 AM

Share

ರಾಂಚಿ: ಅಕ್ರಮ ಗಣಿಗಾರಿಕೆ ಗುತ್ತಿಗೆ ವಿವಾದದ ಭ್ರಷ್ಟಾಚಾರದ ಆರೋಪದಲ್ಲಿ ಸಿಲುಕಿರುವ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ (Hemant Soren) ಇಂದು ರಾಜ್ಯ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ವಿಶ್ವಾಸ ಮತ ಯಾಚಿಸಲಿದ್ದಾರೆ. ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ (JMM) ನೇತೃತ್ವದ ಒಕ್ಕೂಟವು ಸರ್ಕಾರವನ್ನು ಬೀಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂಬ ಆರೋಪ ಮಾಡುತ್ತಲೇ ಇದೆ. ವಿಶ್ವಾಸಮತ ಯಾಚನೆಯ (Trust Vote) ಹಿನ್ನೆಲೆಯಲ್ಲಿ 5 ದಿನಗಳ ಹಿಂದೆ ನೆರೆಯ ಛತ್ತೀಸ್‌ಗಢದಲ್ಲಿ ಆಶ್ರಯ ಪಡೆದಿದ್ದ ಆಡಳಿತಾರೂಢ ಜಾರ್ಖಂಡ್ ಮುಕ್ತಿ ಮೋರ್ಚಾ ನೇತೃತ್ವದ ಯುಪಿಎ ಮೈತ್ರಿಕೂಟದ 30 ಶಾಸಕರು ನಿನ್ನೆ ಸಂಜೆ ರಾಂಚಿಗೆ ಮರಳಿದ್ದಾರೆ.

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರನ್ನು ಶಾಸಕರಾಗಿ ಅನರ್ಹಗೊಳಿಸುವ ಸಾಧ್ಯತೆಯ ರಾಜಕೀಯ ಅನಿಶ್ಚಿತತೆಯ ನಡುವೆ ಜಾರ್ಖಂಡ್‌ನ ಸುಮಾರು 30 ಶಾಸಕರು ಮತ್ತು ಯುಪಿಎ ಸರ್ಕಾರದ ಸಚಿವರು ಇಂದು ವಿಶ್ವಾಸ ಮತಕ್ಕೆ ಹಾಜರಾಗಲು ರಾಂಚಿಗೆ ಆಗಮಿಸಿದ್ದಾರೆ. ನಿನ್ನೆ ಸರ್ಕಿಟ್ ಹೌಸ್‌ನಲ್ಲಿ ಶಾಸಕರೊಂದಿಗೆ ಸಿಎಂ ಹೇಮಂತ್ ಸೊರೇನ್ ಸಭೆ ನಡೆಸಿದ್ದಾರೆ. ಕಾಂಗ್ರೆಸ್ ಆಡಳಿತವಿರುವ ಛತ್ತೀಸ್‌ಗಢದಿಂದ ವಿಶೇಷ ವಿಮಾನದಲ್ಲಿ ಆಡಳಿತಾರೂಢ ಸಮ್ಮಿಶ್ರ ಶಾಸಕರು ನಿನ್ನೆ ರಾಜ್ಯ ರಾಜಧಾನಿ ರಾಂಚಿಗೆ ಹಿಂತಿರುಗಿದ್ದಾರೆ. ಆಪರೇಷನ್ ಕಮಲದ ಪ್ರಯತ್ನಗಳನ್ನು ತಡೆಯಲು ಅವರನ್ನು ಅತಿಥಿಗೃಹದಲ್ಲಿ ಇರಿಸಲಾಗಿತ್ತು.

ಇದನ್ನೂ ಓದಿ: Breaking News: ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್​ ಅನರ್ಹತೆಗೆ ಚುನಾವಣಾ ಆಯೋಗ ಶಿಫಾರಸು

ಗಣಿಗಾರಿಕೆಗೆ ಗುತ್ತಿಗೆ ನೀಡುವ ಮೂಲಕ ಚುನಾವಣಾ ನಿಯಮಗಳನ್ನು ಉಲ್ಲಂಘಿಸಿದ ಆರೋಪದ ಮೇಲೆ ಹೇಮಂತ್ ಸೊರೇನ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಪ್ರತಿಪಕ್ಷ ಬಿಜೆಪಿ ಹೇಳಿದೆ. ಪಕ್ಷವು ಹೊಸ ಚುನಾವಣೆಗೆ ಕರೆ ನೀಡಿದ್ದು, ಮುಖ್ಯಮಂತ್ರಿ ಹೇಮಂತ್ ಸೊರೇನ್ ನೈತಿಕತೆಯ ಆಧಾರದ ಮೇಲೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದೆ.

ಮಹಾರಾಷ್ಟ್ರ, ಮಧ್ಯಪ್ರದೇಶ ಮತ್ತು ಕರ್ನಾಟಕದಂತಹ ರಾಜ್ಯಗಳ ಮಾದರಿಯನ್ನು ಅನುಸರಿಸಿ ಬಿಜೆಪಿಯು ಬಿಕ್ಕಟ್ಟಿನ ಲಾಭವನ್ನು ಪಡೆಯಲು ಮತ್ತು ಚುನಾಯಿತ ಸರ್ಕಾರವನ್ನು ಉರುಳಿಸಲು ಆಡಳಿತಾರೂಢ ಸಮ್ಮಿಶ್ರ ಶಾಸಕರನ್ನು ಸೆಳೆಯಲು ಪ್ರಯತ್ನಿಸುತ್ತಿದೆ ಎಂದು ಹೇಮಂತ್ ಸೊರೇನ್ ಮತ್ತು ಅವರ ಪಕ್ಷದ ಜೆಎಂಎಂ ಆರೋಪಿಸಿದ್ದಾರೆ.

ಇದನ್ನೂ ಓದಿ: Jharkhand Crisis: ಸಿಎಂ ಹೇಮಂತ್ ಸೊರೇನ್​ಗೆ ಅನರ್ಹತೆ ಭೀತಿ; ಜಾರ್ಖಂಡ್​ ಶಾಸಕರು ರೆಸಾರ್ಟ್​​ಗೆ ಶಿಫ್ಟ್​?

81 ಸದಸ್ಯರಿರುವ ವಿಧಾನಸಭೆಯಲ್ಲಿ ಆಡಳಿತಾರೂಢ ಸಮ್ಮಿಶ್ರ 49 ಶಾಸಕರನ್ನು ಹೊಂದಿದ್ದು, ಅತಿ ದೊಡ್ಡ ಪಕ್ಷವಾದ ಜೆಎಂಎಂ 30 ಶಾಸಕರನ್ನು ಹೊಂದಿದೆ. ಕಾಂಗ್ರೆಸ್ 18 ಮತ್ತು ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಒಬ್ಬರನ್ನು ಹೊಂದಿದೆ. ಪ್ರಮುಖ ಪ್ರತಿಪಕ್ಷವಾಗಿರುವ ಬಿಜೆಪಿ 26 ಶಾಸಕರನ್ನು ಹೊಂದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:58 am, Mon, 5 September 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ