AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Nitish Kumar ಬಿಹಾರ ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸಿದ ನಿತೀಶ್ ಕುಮಾರ್, ಬಿಜೆಪಿಯಿಂದ ಕಲಾಪ ಬಹಿಷ್ಕಾರ

ಜೆಡಿಯು ಮುಖ್ಯಸ್ಥ ನಿತೀಶ್ ವಿಧಾನಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದಂತೆ ಬಿಜೆಪಿ ಕಲಾಪ ಬಹಿಷ್ಕರಿಸಿ ಸದನದಿಂದ ಹೊರನಡೆದಿದೆ. ನಿತೀಶ್ ಕುಮಾರ್ ಪರ 160 ದನಿಮತಗಳು ಸಿಕ್ಕಿವೆ.

Nitish Kumar ಬಿಹಾರ ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸಿದ ನಿತೀಶ್ ಕುಮಾರ್,  ಬಿಜೆಪಿಯಿಂದ ಕಲಾಪ ಬಹಿಷ್ಕಾರ
ನಿತೀಶ್ ಕುಮಾರ್
TV9 Web
| Edited By: |

Updated on:Aug 24, 2022 | 6:35 PM

Share

ಬಿಹಾರ ವಿಧಾನಸಭೆಯಲ್ಲಿ (Bihar Assembly) ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ನೇತೃತ್ವದ ಮಹಾಘಟಬಂಧನ್ ಸರ್ಕಾರ ಬುಧವಾರ ಬಹುಮತ ಸಾಬೀತು ಪಡಿಸಿದೆ. ಜೆಡಿಯು ಮುಖ್ಯಸ್ಥ ನಿತೀಶ್ ವಿಧಾನಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದಂತೆ ಬಿಜೆಪಿ ಕಲಾಪ ಬಹಿಷ್ಕರಿಸಿ ಸದನದಿಂದ ಹೊರನಡೆದಿದೆ. ನಿತೀಶ್ ಕುಮಾರ್ ಪರ 160 ದನಿಮತಗಳು ಸಿಕ್ಕಿವೆ. ವಿಧಾನಸಭಾ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಗಿತ್ತು, ಈ ಕಲಾಪವನ್ನು ಡೆಪ್ಯುಟಿ ಸ್ಪೀಕರ್ ಮಹೇಶ್ವರ್ ಹಜಾರಿ ಅಧ್ಯಕ್ಷತೆ ವಹಿಸಿದ್ದರು. ನಿತೀಶ್ ಕುಮಾರ್ ಭಾಷಣ ನಂತರ ಆರ್ ಜೆಡಿ ನಾಯಕ ಮತ್ತು ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಸದನವನ್ನುದ್ದೇಶಿಸಿ ಮಾತನಾಡಿದ್ದಾರೆ. ಬಹುಮತ ಸಾಬೀತು ಪಡಿಸುವ ಮುನ್ನ ಬಿಜೆಪಿಯ ವಿಜಯ್ ಕುಮಾರ್ ಸಿನ್ಹಾ ಅವರು ವಿಧಾನಸಭೆಯ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ನಿತೀಶ್ ಕುಮಾರ್ ನೇತೃತ್ವದ ಮಹಾಮೈತ್ರಿ ಸರ್ಕಾರ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ ಮಾಡಿದ ಹಿನ್ನೆಲೆಯಲ್ಲಿ ವಿಜಯ್ ಕುಮಾರ್ ಸಿನ್ಹಾ ತಮ್ಮ ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಬೇಕಾಯಿತು.  ರಾಜೀನಾಮೆ ನೀಡಿದ ಸಿನ್ಹಾ “ಬಹುಮತಕ್ಕೆ ತಲೆಬಾಗಿದ್ದೇನೆ” ಎಂದು ಹೇಳಿದ್ದಾರೆ.

ವಿಧಾನಸಭೆಯಲ್ಲಿ ಮಾತನಾಡಿದ ವಿಜಯ್ ಕುಮಾರ್ ಸಿನ್ಹಾ, ನರೇಂದ್ರ ನಾರಾಯಣನ್ ಯಾದವ್ ಅವರು ಸ್ಪೀಕರ್ ಸ್ಥಾನವನ್ನು ವಹಿಸಿಕೊಳ್ಳಲಿದ್ದಾರೆ ಎಂದು ಹೇಳಿದರು. ಸ್ಪೀಕರ್ ಪೀಠದ ಮೇಲೆ ಅನುಮಾನಗಳನ್ನು ಮೂಡಿಸುವ ಮೂಲಕ ನೀವು ಯಾವ ಸಂದೇಶವನ್ನು ನೀಡಲು ಬಯಸುತ್ತೀರಿ? ಜನರೇ ತೀರ್ಮಾನ ಮಾಡುತ್ತಾರೆ ಎಂದು ಅವರು ಹೇಳಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಸಲಹೆಯ ಮೇರೆಗೆ ಬಿಹಾರ ವಿಧಾನಸಭೆಯ ಸೆಕ್ರೆಟರಿಯೇಟ್ ಮಂಗಳವಾರ ಸಂಜೆ ಸಿನ್ಹಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು 2 ದಿನಗಳ ವಿಶೇಷ ಅಧಿವೇಶನದ ವೇಳಾಪಟ್ಟಿಯನ್ನು ಬದಲಾಯಿಸಿತ್ತು. ಇದಕ್ಕೂ ಮುನ್ನ ಸಿನ್ಹಾ ರಾಜೀನಾಮೆ ನೀಡಲು ನಿರಾಕರಿಸಿದ್ದರು. ಬಳಿಕ ರಾಜೀನಾಮೆಯನ್ನು ಪ್ರಕಟಿಸಿದ ಸ್ಪೀಕರ್ ವಿಜಯ್ ಕುಮಾರ್ ಸಿನ್ಹಾ ವಿಧಾನಸಭೆ ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು.

Published On - 6:09 pm, Wed, 24 August 22

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್