AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಜತೆ ಮುನಿಸು: ಜೆಡಿಯು ಶಾಸಕರಿಗೆ ನಿತೀಶ್ ಕುಮಾರ್ ಬುಲಾವ್, ಮುಂದಿನ ನಡೆ ಬಗ್ಗೆ ನಾಳೆ ನಿರ್ಧಾರ

ಬಿಹಾರದ ಆಡಳಿತಾರೂಢ  ಎನ್‌ಡಿಎ ಸರ್ಕಾರದೊಳಗೆ ಹೆಚ್ಚುತ್ತಿರುವ ಭಿನ್ನಾಭಿಪ್ರಾಯಗಳ ಬಗ್ಗೆ ಕೆಲವು ಪ್ರಮುಖ ಪಕ್ಷಗಳು ತಮ್ಮ ಶಾಸಕರ ಸಭೆಗಳನ್ನು ಕರೆದಿರುವ ಹಿನ್ನೆಲೆಯಲ್ಲಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್...

ಬಿಜೆಪಿ ಜತೆ ಮುನಿಸು: ಜೆಡಿಯು ಶಾಸಕರಿಗೆ  ನಿತೀಶ್ ಕುಮಾರ್ ಬುಲಾವ್, ಮುಂದಿನ ನಡೆ ಬಗ್ಗೆ ನಾಳೆ ನಿರ್ಧಾರ
ನಿತೀಶ್ ಕುಮಾರ್
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Aug 08, 2022 | 6:35 PM

ಬಿಜೆಪಿ ಜತೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar )ಮುನಿಸಿಕೊಂಡಿದ್ದಾರೆ ಎಂಬ ಊಹಾಪೋಹಗಳ ನಡುವೆಯೇ ನಿತೀಶ್, ಜೆಡಿಯು (JDU) ಪಕ್ಷದ ಎಲ್ಲ ಶಾಸಕರನ್ನು ಕರೆದಿದ್ದು ಇಂದು (ಸೋಮವಾರ)ಸಂಜೆಯೊಳಗೆ ಪಟನಾದಲ್ಲಿರಬೇಕು ಎಂದು ಹೇಳಿದ್ದಾರೆ. ಭಾನುವಾರ ಪ್ರಧಾನಿ ನರೇಂದ್ರ ಮೋದಿಯವರ (Narendra Modi) ನೇತೃತ್ವದಲ್ಲಿನಡೆದ ನೀತಿ ಆಯೋಗ ಆಡಳಿತ ಮಂಡಳಿಯ ಸಭೆಯಲ್ಲಿ ನಿತೀಶ್ ಕುಮಾರ್ ಗೈರಾಗಿದ್ದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ. ಏತನ್ಮಧ್ಯೆ ರಾಷ್ಟ್ರೀಯ ಜನತಾ ದಳ ಮಂಗಳವಾರ ತನ್ನ ಶಾಸಕರ ಸಭೆ ಕರೆದಿದೆ. ಇದಕ್ಕಿಂತ ಮುನ್ನ ಮಾತನಾಡಿದ ಜೆಡಿಯು ರಾಷ್ಟ್ರಾಧ್ಯಕ್ಷ ರಾಜೀವ್ ರಂಜನ್ ಅಲಿಯಾಸ್ ಲಾಲನ್ ಸಿಂಗ್, ಇತ್ತೀಚೆಗೆ ನಿತೀಶ್ ಕುಮಾರ್ ವಿರುದ್ಧ ಎರಡು ಪಿತೂರಿಗಳು ನಡೆದಿವೆ. ಅದರಲ್ಲಿ ಒಂದು 2020ರ ಚಿರಾಗ್ ಮಾಡೆಲ್, ಇದು ನಮ್ಮ ವಿಧಾನಸಭೆ ಸೀಟನ್ನು 43ಕ್ಕೆ ತರುವುದಕ್ಕೆ ಕಾರಣವಾಯಿತು. ಇನ್ನೊಂದು ಈಗ ಸುದ್ದಿಯಲ್ಲಿದ್ದು ಅದನ್ನು ಮೊಳಕೆಯಲ್ಲೇ ಚಿವುಟಲಾಗಿದೆ ಎಂದಿದ್ದಾರೆ. ಶನಿವಾರ ಆರ್​​ಸಿಪಿ ಸಿಂಗ್ ಜೆಡಿಯು ತೊರೆದಿದ್ದಾರೆ. ಜೆಡಿಯು ಮತ್ತು ಬಿಜೆಪಿ ಮುಂದಿನ ಚುನಾವಣೆಯಲ್ಲಿ ಜತೆಯಾಗಿ ಸ್ಪರ್ಧಿಸುತ್ತಿವೆಯೇ ಎಂದು ಕೇಳಿದಾಗ ನಾಳೆ ಏನಾಗುತ್ತದೆ ಎಂಬುದು ಯಾರಿಗೆ ಗೊತ್ತು? ನಾಳೆ ಏನು ಬೇಕಾದರೂ ಆಗಬಹುದು. 2024ರ ಲೋಕಸಭಾ ಚುನಾವಣೆ ಬಗ್ಗೆ ಮಾತು ಯಾಕೆ? 2029ರ ಬಗ್ಗೆ ಕೇಳಿ ಎಂದಿದ್ದಾರೆ.

2024 ರ ಲೋಕಸಭೆ ಮತ್ತು 2025 ರ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಮತ್ತು ಜೆಡಿಯು ಒಟ್ಟಾಗಿ ಸ್ಪರ್ಧಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಪಟನಾದಲ್ಲಿ ನಡೆದ ಪಕ್ಷದ ಸಭೆಯಲ್ಲಿ ಹೇಳಿದ್ದರು. ಇದಾಗಿ ಒಂದು ವಾರದ ನಂತರ ಸಿಂಗ್ ಈ ರೀತಿ ಹೇಳಿದ್ದಾರೆ.

ಬಿಹಾರದ ಆಡಳಿತಾರೂಢ  ಎನ್‌ಡಿಎ ಸರ್ಕಾರದೊಳಗೆ ಹೆಚ್ಚುತ್ತಿರುವ ಭಿನ್ನಾಭಿಪ್ರಾಯಗಳ ಬಗ್ಗೆ ಕೆಲವು ಪ್ರಮುಖ ಪಕ್ಷಗಳು ತಮ್ಮ ಶಾಸಕರ ಸಭೆಗಳನ್ನು ಕರೆದಿರುವ ಹಿನ್ನೆಲೆಯಲ್ಲಿ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ತಮ್ಮ ಉಪ ಮತ್ತು ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ತಾರ್ಕಿಶೋರ್ ಪ್ರಸಾದ್ ಅವರನ್ನು ಭೇಟಿಯಾಗಿದ್ದಾರೆ.

ಪ್ರಸ್ತುತ ರಾಜಕೀಯ ಬೆಳವಣಿಗೆ ಬಗ್ಗೆ ಮಾಧ್ಯಮ ವರದಿ ಬಗ್ಗೆ ಪ್ರತಿಕ್ರಿಯಿಸಿದ ನಿತೀಶ್, ತುಂಬಾ ಗಂಭೀರವಾದ ವಿಷಯವೇನೂ ಅಲ್ಲ ಎಂದು ಹೇಳಿರುವುದಾಗಿ ಎನ್​​ಡಿಟಿವಿ ವರದಿ ಮಾಡಿದೆ. ಆದಾಗ್ಯೂ, ಈ ಬಗ್ಗೆ ಬಿಜೆಪಿ ನಾಯಕರು ಯಾವುದೇ ಹೇಳಿಕೆ ನೀಡಲು ಹೋಗಬೇಡಿ,  ನಿತೀಶ್  ಕುಮಾರ್ ನಾಳೆ  ನಿರ್ಧಾರ ಪ್ರಕಟಿಸುವವರೆಗೆ ಏನೂ ಹೇಳಬೇಡಿ ಎಂದು  ಆದೇಶಿಸಿದ್ದಾರೆ.

ಬಿಜೆಪಿ ಮತ್ತು ನಿತೀಶ್ ಕುಮಾರ್ ಅವರ ಜನತಾ ದಳ (ಯುನೈಟೆಡ್), ಅಥವಾ ಜೆಡಿ (ಯು) ನಡುವೆ ಭಿನ್ನಾಭಿಪ್ರಾಯವಿದೆ ಎಂಬುದು ಈಗ ಚರ್ಚಿತ ವಿಷಯ. ನೀತಿ ಆಯೋಗದ ಸಭೆಗೆ ನಿತೀಶ್ ಭಾಗಿಯಾಗಿಲ್ಲ ಆದರೆ ಪಟನಾದಲ್ಲಿರುವ ಕೆಲವು ಸಮಾರಂಭಗಳಲ್ಲಿ ಅವರು ಭಾಗಿಯಾಗದ್ದರು. ಇದಕ್ಕಿಂತ ಮುಂಚೆ ಪ್ರಧಾನಿ ಮೋದಿ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಬೀಳ್ಕೊಡುಗೆಗಾಗಿ ಕರೆದಿದ್ದ ಭೋಜನಕೂಟದಲ್ಲೂ ನಿತೀಶ್ ಭಾಗಿಯಾಗಿರಲಿಲ್ಲ.

Published On - 6:30 pm, Mon, 8 August 22

ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಅಧಿಕಾರಿಗಳ ನಿರ್ಲಕ್ಷ್ಯ, ಉಡಾಫೆ ಗೊತ್ತಾಗುತ್ತಿದೆ;ಸರ್ಕಾರವೇನು ಮಾಡುತ್ತಿದೆ?
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ