AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದಲ್ಲಿ10 ಲಕ್ಷ ಯುವಕರಿಗೆ ಉದ್ಯೋಗ; ತೇಜಸ್ವಿ ಯಾದವ್ ನೀಡಿದ ಭರವಸೆ ಬಗ್ಗೆ ನಿತೀಶ್ ಹೇಳಿದ್ದೇನು?

ಉಪ ಮುಖ್ಯಮಂತ್ರಿ ನೀಡಿದ ಭರವಸೆ ಬಗ್ಗೆ ಬಿಹಾರ ಸಿಎಂ, ಜೆಡಿಯು ನಾಯಕ ನಿತೀಶ್ ಕುಮಾರ್ ಅವರಲ್ಲಿ ಕೇಳಿದಾಗ, ಅದು ನಿಜ, ನಾವು ಎಲ್ಲ ರೀತಿಯಲ್ಲಿಯೂ ಪ್ರಯತ್ನ ಮಾಡುತ್ತೇವೆ.

ಬಿಹಾರದಲ್ಲಿ10 ಲಕ್ಷ ಯುವಕರಿಗೆ ಉದ್ಯೋಗ; ತೇಜಸ್ವಿ ಯಾದವ್ ನೀಡಿದ ಭರವಸೆ ಬಗ್ಗೆ ನಿತೀಶ್ ಹೇಳಿದ್ದೇನು?
ನಿತೀಶ್ ಕುಮಾರ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Aug 12, 2022 | 3:10 PM

Share

ಬಿಹಾರದಲ್ಲಿ(Bihar) ಉದ್ಯೋಗ ಸೃಷ್ಟಿ ಕಡೆಗೆ ಗಮನ ಹರಿಸುವ ಮೂಲಕ ಚುನಾವಣಾ ಭರವಸೆಗಳನ್ನು ಈಡೇರಿಸುತ್ತೇವೆ ಎಂದು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ (Tejashwi Yadav) ಹೇಳಿಕೆಯನ್ನು ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar)ಸಮರ್ಥಿಸಿಕೊಂಡಿದ್ದಾರೆ. 2020 ಬಿಹಾರ ಚುನಾವಣೆಯಲ್ಲಿ ಆರ್​ಜೆಡಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ತೇಜಸ್ವಿ, ತಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಯುವಕರಿಗೆ 10 ಲಕ್ಷ ಉದ್ಯೋಗ ನೀಡುವುದಾಗಿ ಭರವಸೆ ನೀಡಿದ್ದರು. ನಿತೀಶ್ ಕುಮಾರ್ ಅವರ ಮಹಾಘಟ್ ಬಂಧನ್ ಅಥವಾ ಮಹಾಮೈತ್ರಿ ಸರ್ಕಾರದಲ್ಲಿ ತೇಜಸ್ವಿ ಯಾದವ್ ಉಪಮುಖ್ಯಮಂತ್ರಿಯಾಗಿ ಸಚಿವ ಸಂಪುಟ ಸೇರಿದ್ದಾರೆ. ಆದಾಗ್ಯೂ, ಈಗ ನೀವು ಅಂದು ಕೊಟ್ಟಿದ್ದ ಭರವಸೆಯನ್ನು ಈಡೇರಿಸುತ್ತೀರಾ ಎಂದು ಕೇಳಿದಾಗ, ನಾನು ಈ ಬಗ್ಗೆ ಬಿಹಾರ ಸಿಎಂ ಜತೆ ಚರ್ಚಿಸಿದ್ದೇನೆ. ವಿಧಾನಸಭೆಯಲ್ಲಿ ಬಹುಮತ ಸಾಬೀತಾದ ಕೂಡಲೇ ಈ ಬಗ್ಗೆ ಕಾರ್ಯ ಪ್ರವೃತ್ತರಾಗುತ್ತೇವೆ ಎಂದಿದ್ದಾರೆ. ಉಪ ಮುಖ್ಯಮಂತ್ರಿ ನೀಡಿದ ಭರವಸೆ ಬಗ್ಗೆ ಬಿಹಾರ ಸಿಎಂ, ಜೆಡಿಯು ನಾಯಕ ನಿತೀಶ್ ಕುಮಾರ್ ಅವರಲ್ಲಿ ಕೇಳಿದಾಗ, ಅದು ನಿಜ, ನಾವು ಎಲ್ಲ ರೀತಿಯಲ್ಲಿಯೂ ಪ್ರಯತ್ನ ಮಾಡುತ್ತೇವೆ. ಅವರು ಹೇಳಿದ್ದು ಸರಿ. ಅದಕ್ಕಾಗಿ ಎಲ್ಲ ಪ್ರಯತ್ನಗಳನ್ನು ಮಾಡಲಾಗುವುದು ಎಂದಿದ್ದಾರೆ.

ಯಾದವ್ ಅವರಿಗೆ ಹೆಚ್ಚಿನ ಭದ್ರತೆ ನೀಡಿದ್ದಕ್ಕೆ ಆಕ್ಷೇಪವಿದೆ ಎಂಬ ಆರೋಪ ನಿರಾಕರಿಸಿದ ಕುಮಾರ್ ಇದೆಲ್ಲ ಅಸಂಬದ್ಧ ಎಂದಿದ್ದಾರೆ. ಭದ್ರತಾ ಸಮಿತಿಯ ಶಿಫಾರಸು ಮೇರೆ ತೇಜಸ್ವಿ ಅವರಿಗೆ ಝಡ್ ಪ್ಲಸ್ ಭದ್ರತೆ ನೀಡಲಾಗಿದೆ.

ಯಾಕೆ ಅದಕ್ಕೆ ಆಕ್ಷೇಪ ವ್ಯಕ್ತಪಡಿಸಬೇಕು? ಅವರು ಉಪ ಮುಖ್ಯಮಂತ್ರಿ. ಅವರಿಗೆ ಭದ್ರತೆ ಬೇಕು. ಆರೋಪಗಳೆಲ್ಲ ಅಸಂಬದ್ಧ ಎಂದಿದ್ದಾರೆ ನಿತೀಶ್. 2024ರ ಚುನಾವಣೆಯಲ್ಲಿ ನೀವು ಪ್ರಧಾನಿ ಅಭ್ಯರ್ಥಿಯೇ ಎಂದು ಕೇಳಿದಾಗ ಅಂಥಾ ಯಾವುದೇ ಉದ್ದೇಶವಿಲ್ಲ. ನಾನು ಎಲ್ಲ ವಿರೋಧ ಪಕ್ಷಗಳನ್ನು ಒಂದೇ ವೇದಿಕೆಗೆ ತರಲು ಪ್ರಯತ್ನಿಸುವೆ ಎಂದು ಹೇಳಿದ್ದಾರೆ.

ನಾನು ಕೈ ಮುಗಿದು ಹೇಳುತ್ತಿದ್ದೇನೆ, ನನಗೆ ಅಂಥಾ ಯೋಚನೆಗಳೇನೂ ಇಲ್ಲ. ನಾನು ಎಲ್ಲರಿಗಾಗಿ ಕೆಲಸ ಮಾಡಬೇಕು. ಎಲ್ಲ ವಿರೋಧಪಕ್ಷಗಳು ಒಟ್ಟಾಗಿ ಕೆಲಸ ಮಾಡುವುದಕ್ಕೆ ನಾನು ಪ್ರಯತ್ನಿಸುತ್ತೇನೆ. ಹೀಗಾದರೆ ಒಳ್ಳೆಯದು ಎಂದು ಹೇಳಿದ್ದಾರೆ. ನಾವು ಎಲ್ಲರನ್ನೂ ಒಗ್ಗೂಡಿಸಲು ಬಯಸುತ್ತೇವೆ. ನಾನು ಪಾಸಿಟಿವ್ ಕೆಲಸ ಮಾಡುತ್ತಿದ್ದೇನೆ. ನನಗೆ ಹಲವಾರು ಫೋನ್ ಕರೆಗಳು ಬಂದಿತ್ತು. ನಾನು ಎಲ್ಲವನ್ನೂ ಮಾಡುವೆ, ಅದಕ್ಕಿಂತ ಮೊದಲು ನಾನಿಲ್ಲಿನ ಕೆಲಸ ಮಾಡುವೆ ಎಂದಿದ್ದಾರೆ.

ಇದನ್ನೂ ಓದಿ: ಭಾರತೀಯ ಗ್ರಾಹಕರಿಗೆ 5ಜಿ ವಲಯದಲ್ಲಿ ಕ್ರಾಂತಿಕಾರಕ ಸೇವೆ ಒದಗಿಸುವ ನಿಟ್ಟಿನಲ್ಲಿ 19,867.8 ಮೆಗಾಹರ್ಟ್ಸ್‌ ಸ್ಪೆಕ್ಟ್ರಮ್‌ ಖರೀದಿಸಿದ ಏರ್‌ಟೆಲ್‌

Follow Us
TV9 Web
TV9 Web

TV9 Kannada

Read More
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ