AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಹಾಗೂ ‌ಪ್ರತಾಪ್ ಸಿಂಹರದ್ದು ಒಡೆದು ಆಳುವ ಸಂಸ್ಕೃತಿ: ಸಂಸದ ಡಿಕೆ ಸುರೇಶ್​ ವಾಗ್ದಾಳಿ

ಬಿಜೆಪಿ ಹಾಗೂ ‌ಪ್ರತಾಪ್ ಸಿಂಹ (Pratap Simha) ರದ್ದು ಒಡೆದು ಆಳುವ ಸಂಸ್ಕೃತಿ ಎಂದು ಕಾಂಗ್ರೆಸ್​​​ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ಮಾಡಿದರು.

ಗಂಗಾಧರ​ ಬ. ಸಾಬೋಜಿ
|

Updated on: Jun 04, 2023 | 3:37 PM

Share

ರಾಮನಗರ: ಬಿಜೆಪಿ ಹಾಗೂ ‌ಪ್ರತಾಪ್ ಸಿಂಹ (Pratap Simha) ರದ್ದು ಒಡೆದು ಆಳುವ ಸಂಸ್ಕೃತಿ ಎಂದು ಕಾಂಗ್ರೆಸ್​​​ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ಮಾಡಿದರು. ಜಿಲ್ಲೆಯ ಕನಕಪುರ ತಾಲೂಕಿನ ಕಬ್ಬಾಳು ಗ್ರಾಮದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ (Guarantee Scheme) ಬಗ್ಗೆ ಪ್ರತಾಪ್​ ಸಿಂಹ ಟೀಕೆ ವಿಚಾರಕ್ಕೆ ತಿರುಗೇಟು ನೀಡಿದರು. ಕಾಂಗ್ರೆಸ್​ನಲ್ಲಿ ಒಡೆದು ಆಳುವ ಸಂಸ್ಕೃತಿ ಇಲ್ಲ. ಒಡೆದು ಆಳುವ ಸಂಸ್ಕೃತಿ ಇಟ್ಟುಕೊಂಡು ಮನೆಹಾಳು ಮಾಡುತ್ತಾರೆ ಎಂದು ಕಿಡಿಕಾರಿದರು.

ಸಂಸದ ಪ್ರತಾಪ್​ ಸಿಂಹ ಮುಸ್ಲಿಮರನ್ನು ವಿರೋಧ ಮಾಡುತ್ತಿದ್ದರು. ಈಗ ಯಾಕೆ ಮುಸ್ಲಿಮರ ಮೇಲೆ ಪ್ರೀತಿ. ಅವರು ತತ್ವ ಸಿದ್ಧಾಂತ ‌ಇಟ್ಟುಕೊಂಡಿದ್ದಾರೆ ಅದರಿಂದ ಆಚೆ ಬರುವುದು ಬೇಡ. ಕಾಂಗ್ರೆಸ್ ಪಕ್ಷ​ ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುತ್ತೆ. ನಾವು ಏನು ಗ್ಯಾರಂಟಿ ಕೊಟ್ಟಿದ್ದೆವೇ ಅದನ್ನ ಅನುಷ್ಠಾನ ಮಾಡುತ್ತೇವೆ. ರಾಜ್ಯದಲ್ಲಿ ಎಲ್ಲರನ್ನು ಒಟ್ಟಿಗೆ ಕರೆದುಕೊಂಡು ಹೋಗುವ ಕೆಲಸ ಕಾಂಗ್ರೆಸ್​ ಮಾಡುತ್ತಿದೆ ಎಂದರು.

ಇದನ್ನೂ ಓದಿ: ಮುಸ್ಲಿಮರ ಮನೆಯಲ್ಲಿ 2-3 ಪತ್ನಿಯರು ಇರುತ್ತಾರೆ, ಯಾರು ಯಜಮಾನಿ ಆಗುತ್ತಾರೆ; ಪ್ರತಾಪ್ ಸಿಂಹ ವ್ಯಂಗ್ಯ

ಗೋ ಹತ್ಯೆ ನಿಷೇದ ಕಾಯ್ದೆ ಬಗ್ಗೆ ಮಾಹಿತಿ ಇಲ್ಲ 

ಗೋ ಹತ್ಯೆ ನಿಷೇದ ಕಾಯ್ದೆ ರದ್ದು ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಸರ್ಕಾರ ಏನು ತೀರ್ಮಾನ ಮಾಡುತ್ತೇ ನೋಡೋಣ. ರೈತರಿಗೆ ಅನುಪಯುಕ್ತವಾದ ಜಾನುವಾರುಗಳನ್ನ ಇಂದಿನಿಂದಲೂ ಬೇರೆ ಬೇರೆದಕ್ಕೆ ಬಳಸುತ್ತಿದ್ದಾರೆ. ಈ ಬಗ್ಗೆ ವ್ಯಾಪಾಕ ಚರ್ಚೆ ಆಗಬೇಕು. ರೈತರ ದೃಷ್ಟಿಯಿಂದ ಮತ್ತು ಸಂಸ್ಕೃತಿ‌ ದೃಷ್ಟಿಯಿಂದ ಏನು ಮಾಡಬೇಕು ಎಂದು ಚರ್ಚೆ ಮಾಡಬೇಕಾಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದ ದೌರ್ಜನ್ಯದಿಂದ ಬಿಜೆಪಿ ಕಾರ್ಯಕರ್ತರ ರಕ್ಷಣೆಗಾಗಿ ವಕೀಲರ ತಂಡ ಸಜ್ಜು: ತೇಜಸ್ವಿ ಸೂರ್ಯ

ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರತಾಪ್ ಸಿಂಹ ವ್ಯಂಗ್ಯ  

ಕಾಂಗ್ರೆಸ್ ಸರ್ಕಾರ ಗ್ಯಾರಂಟಿ ಜಾರಿ ಮಾಡಿದ ವಿಚಾರವಾಗಿ ನಿನ್ನೆ ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ಪ್ರತಾಪ್ ಸಿಂಹ ಮುಸ್ಲಿಮರ ಮನೆಯಲ್ಲಿ 2-3 ಪತ್ನಿಯರು ಇರುತ್ತಾರೆ. ಆ ಪೈಕಿ ಯಾರು ಯಜಮಾನಿಯಾಗುತ್ತಾರೆ? ಯಾರಿಗೆ 2,000 ರೂ. ನೀಡಲಾಗುತ್ತದೆ ಎಂದು ಪ್ರಶ್ನಿಸುವ ಮೂಲಕ ವ್ಯಂಗ್ಯವಾಡಿದ್ದರು.

ಮೈಸೂರಿನಲ್ಲಿ ಮಾತನಾಡಿದ ಅವರು, ಚುನಾವಣೆಗೆ ಮೊದಲು ಕಾಂಗ್ರೆಸ್‌ನವರು ಎದೆ ಬಡಿದುಕೊಂಡು ಊರು ಊರಿಗೆ ಹೋಗಿ ತಮಟೆ ಬಾರಿಸಿದ್ದರು. ವಿದ್ಯುತ್ ಎಲ್ಲರಿಗೂ ಉಚಿತ ಅಂದಿದ್ದರು. ಕೆಎಸ್​​​ಆರ್​​ಟಿಸಿ ಅಧಿಕಾರಿಗಳಿಗೆ ಇನ್ನೂ ಮಾಹಿತಿ ಕೊಟ್ಟಿಲ್ಲ ಎಂದು ಟೀಕಿಸಿದ್ದರು.

ಮತ್ತಷ್ಟು ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!