AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆಗೆ ಕರ್ನಾಟಕ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಪ್ರಕಟ, ಟಿಕೆಟ್ ಕೈತಪ್ಪಿದವರಿಗೆ ಸ್ಥಾನ

BJP star campaigners: ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸಿದ್ದು, ಪ್ರಚಾರ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಇದರ ಮಧ್ಯ ಬಿಜೆಪಿಯ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆಯಾಗಿದೆ. ಇನ್ನು ಈ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಟಿಕೆಟ್ ವಂಚಿತ ನಾಯಕರಿಗೆ ಸ್ಥಾನ ನೀಡುವುದು ವಿಶೇಷವಾಗಿದೆ.

ಲೋಕಸಭಾ ಚುನಾವಣೆಗೆ ಕರ್ನಾಟಕ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಪ್ರಕಟ, ಟಿಕೆಟ್ ಕೈತಪ್ಪಿದವರಿಗೆ ಸ್ಥಾನ
ಬಿಜೆಪಿ
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on: Mar 29, 2024 | 8:52 PM

ಬೆಂಗಳೂರು, (ಮಾರ್ಚ್ 29): ಕರ್ನಾಟಕದಲ್ಲಿ (Karnataka) ಲೋಕಸಭಾ ಚುನಾವಣೆ (Loksabha Elections 2024) ರಂಗೇರಿದೆ. ಜೆಡಿಎಸ್​ ಮತ್ತು ಬಿಜೆಪಿ ಮೈತ್ರಿ ಮಾಡಿಕೊಂಡಿದ್ದು, ಇಂದು ಉಭಯ ಪಕ್ಷಗಳು ಸಮನ್ವಯ ಸಭೆ ನಡೆಸಿದವು. ಇದರ ಬೆನ್ನಲ್ಲೇ ಇದೀಗ ರಾಜ್ಯ ಬಿಜೆಪಿ ಸ್ಟಾರ್ ಪ್ರಚಾರಕರ (Karnataka BJP star campaigners:) ಪಟ್ಟಿ ಬಿಡುಗಡೆ ಮಾಡಿದೆ. ನರೇಂದ್ರ ಮೋದಿ, ನಡ್ಡಾ ಸೇರಿದಂತೆ ಕೇಂದ್ರ ಸಚಿವರು, ಕರ್ನಾಟಕದ ಮೂವರು ಮಾಜಿ ಸಿಎಂಗಳು ಸ್ಟಾರ್​ ಪ್ರಚಾರಕರ ಪಟ್ಟಿಯಲ್ಲಿದ್ದಾರೆ. ಅಲ್ಲದೇ ಈ ಬಾರಿ ಲೋಕಸಭಾ ಟಿಕೆಟ್ ನೀಡದೇ ಕೊಕ್ ನೀಡಲಾಗಿರುವ ನಾಯಕರುಗಳನ್ನು ಸ್ಟಾರ್ ಪ್ರಚಾರಕರನ್ನಾಗಿ ನೇಮಿಸಲಾಗಿದೆ.

ಬಿಜೆಪಿ ಸ್ಟಾರ್​ ಪ್ರಚಾರಕರ ಪಟ್ಟಿ ಇಂತಿದೆ

ನರೇಂದ್ರ ಮೋದಿ, ಜಗತ್ ಪ್ರಕಾಶ್ ನಡ್ಡಾ, ಅಮಿತ್ ಶಾ, ರಾಜನಾಥ್ ಸಿಂಗ್, ನಿತಿನ್ ಗಡ್ಕರಿ, ಬಿ.ಎಸ್.ಯಡಿಯೂರಪ್ಪ, ಬಿ.ವೈ.ವಿಜಯೇಂದ್ರ, ಎಸ್.ಜೈಶಂಕರ್, ನಿರ್ಮಲಾ ಸೀತಾರಾಮನ್, ಪ್ರಹ್ಲಾದ್ ಜೋಶಿ, ಸ್ಮೃತಿ ಇರಾನಿ, ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ, ಆರ್.ಅಶೋಕ್, ಕೆ.ಅಣ್ಣಾಮಲೈ, ರಾಧಾಮೋಹನ ದಾಸ್ ಅಗರ್ವಾಲ್, ಯೋಗಿ ಆದಿತ್ಯನಾಥ್, ಹಿಮಂತ್ ಬಿಸ್ವಾ ಶರ್ಮಾ, ಪ್ರಮೋದ್ ಸಾವಂತ್, ಫಡ್ನವಿಸ್, ಬಸವರಾಜ ಬೊಮ್ಮಾಯಿ, ಸುಧಾಕರ ರೆಡ್ಡಿ, ಸದಾನಂದಗೌಡ, ಜಗದೀಶ್ ಶೆಟ್ಟರ್, ನಳಿನ್ ಕುಮಾರ್ ಕಟೀಲು, ಸಿ.ಟಿ.ರವಿ, ಗೋವಿಂದ ಕಾರಜೋಳ, ಅಶ್ವತ್ಥ್ ನಾರಾಯಣ, ಬಿ.ಶ್ರೀರಾಮುಲು, ಅರವಿಂದ ಲಿಂಬಾವಳಿ, ವಿ.ಸುನೀಲ್ ಕುಮಾರ್, ಜಿ.ವಿ.ರಾಜೇಶ್, ಪಿ.ರಾಜೀವ್, ಪ್ರೀತಂಗೌಡ, ಬಸನಗೌಡ ಪಾಟೀಲ್ ಯತ್ನಾಳ್, ಭೈರತಿ ಬಸವರಾಜ್, ಪ್ರಮೋದ್ ಮಧ್ವರಾಜ್, ಪ್ರತಾಪ್ ಸಿಂಹ, ಛಲವಾದಿ ನಾರಾಯಣಸ್ವಾಮಿ, ಎನ್.ಮಹೇಶ್​ಗೆ ಸ್ಟಾರ್​ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ.

ಇದನ್ನೂ ಓದಿ: ಸಮನ್ವಯ ಸಮಿತಿ ರಚನೆಗೆ ತೀರ್ಮಾನ: ಜೆಡಿಎಸ್​-ಬಿಜೆಪಿ ಸಭೆಯಲ್ಲಿ ಕೈಗೊಂಡ ತೀರ್ಮಾನಗಳು ಇಂತಿವೆ

ಟಿಕೆಟ್ ಕೈತಪ್ಪಿದವರಿಗೆ ಮಣೆ

ಹೌದು…ಈ ಬಾರಿ ಹಲವು ಹಾಲಿ ಸಂಸದರಿಗೆ ಬಿಜೆಪಿ ಹೈಕಮಾಂಡ್ ಟಿಕೆಟ್ ನೀಡಿಲ್ಲ. ಇದರಿಂದ ಕೆಲ ಸಂಸದರು ಅಸಮಾಧಾನಗೊಂಡಿದ್ದಾರೆ. ಇನ್ನೂ ಕೆಲವರು ಟಿಕೆಟ್​ ಕೈತಪ್ಪಿದ ಬೇಸರಲ್ಲಿ ಚುನಾವಣಾ ಪ್ರಚಾರದಿಂದ ದೂರ ಉಳಿದಿದ್ದಾರೆ. ಹೀಗಾಗಿ ಅಂತವರಿಗೆ ಬಿಜೆಪಿ ಸ್ಟಾರ್ ಪ್ರಚಾರಕರನ್ನಾಗಿ ನೇಮಕ ಮಾಡಲಾಗಿದೆ. ಇದರೊಂದಿಗೆ ಅತೃಪ್ತರನ್ನು ಮನವೊಲಿಸು ಪ್ರಯತ್ನ ಮಾಡಿದೆ.

ಟಿಕೆಟ್ ವಂಚಿತ ಹಾಲಿ ಸಂಸದರ ಪೈಕಿ ಡಿ.ವಿ. ಸದಾನಂದ ಗೌಡ, ಪ್ರತಾಪ್ ಸಿಂಹ, ನಳಿನ್ ಕುಮಾರ್ ಕಟೀಲ್ ಮತ್ತು ಎ. ನಾರಾಯಣಸ್ವಾಮಿಗೆ ಅವಕಾಶ ನೀಡಲಾಗಿದೆ. ಮುಖ್ಯವಾಗಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಸ್ಟಾರ್ ಪ್ರಚಾರಕನ್ನಾಗಿ ನೇಮಕ ಮಾಡಿದ್ದು ಅಚ್ಚರಿಕೆ ಕಾರಣವಾಗಿದೆ. ಇನ್ನು ಮೈಸೂರು ಅಭ್ಯರ್ಥಿ ಯದುವೀರ ಒಡೆಯರ್, ಮಂಡ್ಯ ಸಂಸದೆ ಸುಮಲತಾ ಮತ್ತು ಉತ್ತರ ಕನ್ನಡ ಸಂಸದ ಅನಂತಕುಮಾರ್ ಹೆಗಡೆ ಹೆಸರು ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಇಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ