AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಹ್ಲಾದ್ ಜೋಶಿಗೆ ರಾಜಸ್ಥಾನದ ಜವಾಬ್ದಾರಿ; ತೆಲಂಗಾಣ, ಮಧ್ಯ ಪ್ರದೇಶ, ಛತ್ತೀಸ್‌ಗಢದ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ

ಕೇಂದ್ರದ ಮಾಜಿ ಸಚಿವ ಹಾಗೂ ಪಕ್ಷದ ಹಿರಿಯ ನಾಯಕ ಪ್ರಕಾಶ್ ಜಾವಡೇಕರ್ ಅವರನ್ನು ತೆಲಂಗಾಣದ ಉಸ್ತುವಾರಿಯಾಗಿ ಆಯ್ಕೆ ಮಾಡಲಾಗಿದೆ. ರಾಜ್ಯದ ಉಸ್ತುವಾರಿಯಾಗಿದ್ದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುನಿಲ್ ಬನ್ಸಾಲ್ ಈಗ ಜಾವಡೇಕರ್‌ಗೆ ಸಹಕಾರ ನೀಡಲಿದ್ದಾರೆ.

ಪ್ರಹ್ಲಾದ್ ಜೋಶಿಗೆ ರಾಜಸ್ಥಾನದ ಜವಾಬ್ದಾರಿ; ತೆಲಂಗಾಣ, ಮಧ್ಯ ಪ್ರದೇಶ, ಛತ್ತೀಸ್‌ಗಢದ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದ ಬಿಜೆಪಿ
ಜೆಪಿ ನಡ್ಡಾ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Jul 07, 2023 | 8:47 PM

Share

ಬಿಜೆಪಿ (BJP) ಶುಕ್ರವಾರ ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಢ ಮತ್ತು ರಾಜಸ್ಥಾನ ರಾಜ್ಯಗಳಿಗೆ ಚುನಾವಣಾ ಉಸ್ತುವಾರಿಗಳನ್ನು (Election in-charges) ನೇಮಿಸಿದೆ. ಕೇಂದ್ರ ಸಚಿವ ಭೂಪೇಂದ್ರ ಯಾದವ್ ಅವರಿಗೆ ಮಧ್ಯಪ್ರದೇಶದ (Madhya Pradesh) ಉಸ್ತುವಾರಿ ನೀಡಲಾಗಿದೆ. ಅವರು ಈ ಹಿಂದೆ ಬಿಹಾರ ಮತ್ತು ಗುಜರಾತ್‌ನಲ್ಲಿ ನಡೆದ ಚುನಾವಣೆಗಳ ಮೇಲ್ವಿಚಾರಣೆ ನಡೆಸಿದ್ದರು. ಅವರಿಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ನೆರವು ನೀಡಲಿದ್ದಾರೆ.  ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ನಂತರ ಬಿಜೆಪಿ ಮಧ್ಯಪ್ರದೇಶದಲ್ಲಿ ಅಧಿಕಾರವನ್ನು ಉಳಿಸಿಕೊಳ್ಳಲು ಶತಾಯಗತಾಯ ಪ್ರಯತ್ನಿಸುತ್ತಿದೆ.

ರಾಜಸ್ಥಾನದಲ್ಲಿ ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಪೈಪೋಟಿ ನಿರೀಕ್ಷಿಸಲಾಗಿದೆ. ಇಲ್ಲಿ ಚುನಾವಣಾ ಉಸ್ತುವಾರಿಯಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮತ್ತು ಇಬ್ಬರು ಸಹ-ಇನ್ ಚಾರ್ಜ್‌ಗಳಾಗಿ ನಿತಿನ್ ಪಟೇಲ್ ಮತ್ತು ಕುಲದೀಪ್ ಬಿಷ್ಣೋಯ್ ಅವರನ್ನು ನೇಮಕ ಮಾಡಲಾಗಿದೆ.

ಕೇಂದ್ರದ ಮಾಜಿ ಸಚಿವ ಹಾಗೂ ಪಕ್ಷದ ಹಿರಿಯ ನಾಯಕ ಪ್ರಕಾಶ್ ಜಾವಡೇಕರ್ ಅವರನ್ನು ತೆಲಂಗಾಣದ ಉಸ್ತುವಾರಿಯಾಗಿ ಆಯ್ಕೆ ಮಾಡಲಾಗಿದೆ. ರಾಜ್ಯದ ಉಸ್ತುವಾರಿಯಾಗಿದ್ದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸುನಿಲ್ ಬನ್ಸಾಲ್ ಈಗ ಜಾವಡೇಕರ್‌ಗೆ ಸಹಕಾರ ನೀಡಲಿದ್ದಾರೆ.

ಇದನ್ನೂ ಓದಿ: Uttar Pradesh: ಗೋರಖ್‌ಪುರದಲ್ಲಿ 2ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ ಮೋದಿ

ಛತ್ತೀಸ್‌ಗಢದಲ್ಲಿ ಪಕ್ಷದ ಹಿರಿಯ ನಾಯಕ ಓಂ ಮಾಥುರ್ ಅವರು ಪಕ್ಷದ ಚುನಾವಣಾ ಉಸ್ತುವಾರಿಯಾಗಲಿದ್ದು, ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ಸಹಕಾರ ನೀಡಲಿದ್ದಾರೆ.

ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:07 pm, Fri, 7 July 23

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ