AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಕೆಟ್​ ಕೈತಪ್ಪಿದ ಬೆನ್ನಲ್ಲೇ ನಳಿನ್ ಕುಮಾರ್ ಕಟೀಲ್​ಗೆ ಮಹತ್ವದ ಜವಾಬ್ದಾರಿ ನೀಡಿದ ಹೈಕಮಾಂಡ್

ದಕ್ಷಿಣ ಕನ್ನಡದ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರಿಗೆ ಈ ಬಾರಿ ಲೋಕಸಭಾ ಬಿಜೆಪಿ ಟಿಕೆಟ್​ ಕೈತಪ್ಪಿದೆ. ಕಟೀಲ್ ಅವರ ಬದಲಿಗೆ ಕ್ಯಾಪ್ಟನ್​ ಬೃಜೇಶ್ ಚೌಟ ಎನ್ನುವರಿಗೆ ದಕ್ಷಿಣ ಕನ್ನಡ ಲೋಕಸಭಾ ಟಿಕೆಟ್ ನೀಡಲಾಗಿದೆ. ಇದರಿಂದ ಬೇಸರದಲ್ಲಿರುವ ನಳಿನ್ ಕುಮಾರ್ ಕಟೀಲ್​ಗೆ ಹೈಕಮಾಂಡ್ ಮಹತ್ವದ ಜವಾಬ್ದಾರಿಯನ್ನು ನೀಡಿದೆ.

ಟಿಕೆಟ್​ ಕೈತಪ್ಪಿದ ಬೆನ್ನಲ್ಲೇ ನಳಿನ್ ಕುಮಾರ್ ಕಟೀಲ್​ಗೆ ಮಹತ್ವದ ಜವಾಬ್ದಾರಿ ನೀಡಿದ ಹೈಕಮಾಂಡ್
ನಿರ್ಮಲ್‌ ಕುಮಾರ್ ‌ಸುರಾನಾ, ನಳಿನ್ ಕುಮಾರ್ ಕಟೀಲ್​
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Mar 27, 2024 | 10:07 PM

ಬೆಂಗಳೂರು, (ಮಾರ್ಚ್​ 27): ಈ ಬಾರಿ ದಕ್ಷಿಣ ಕನ್ನಡ ಲೋಕಸಭಾ (Dakshina Kannada Loksabha) ಟಿಕೆಟ್​​ ಕೈತಪ್ಪಿದ್ದರಿಂದ ಬೇಸರದಲ್ಲಿರುವ ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್​ಗೆ (Nalin Kumar Kateel )ಹೈಕಮಾಂಡ್ ಮಹತ್ವದ ಜವಾಬ್ದಾರಿ ನೀಡಿದೆ. ಹೌದು.. ನಳಿನ್ ಕುಮಾರ್ ಕಟೀಲ್ ಅವರನ್ನು ಕೇರಳ (Kerala) ಲೋಕಸಭಾ ಚುನಾವಣೆಯ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಇದರ ಜೊತೆ ತೆಲಂಗಾಣ ಮತ್ತು ಮಹಾರಾಷ್ಟ್ರ ಲೋಕಸಭಾ ಚುನಾವಣೆಯ ಉಸ್ತುವಾರಿಯನ್ನು ಕರ್ನಾಟಕದ ಬಿಜೆಪಿ ನಾಯಕರುಗಳಿಗೆ ನೀಡಲಾಗಿದೆ.

ತೆಲಂಗಾಣ ಲೋಕಸಭಾ ಚುನಾವಣೆಯ ಬಿಜೆಪಿ ಉಸ್ತುವಾರಿಯಾಗಿ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಅವರನ್ನು ನೇಮಕ ಮಾಡಲಾಗಿದೆ. ಇನ್ನು ನಿರ್ಮಲ್‌ ಕುಮಾರ್ ‌ಸುರಾನಾ ಅವರನ್ನು ಮಹಾರಾಷ್ಟ್ರ ಬಿಜೆಪಿ ಸಹ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

ಟಿಕೆಟ್ ಕೈತಪ್ಪಿದರೂ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದಿದ್ದ ಕಟೀಲ್

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಿಂದ ನಳಿನ್ ಕುಮಾರ್ ಕಟೀಲ್ ಮೂರು ಬಾರಿ ಸಂಸದರಾಗಿದ್ದಾರೆ. ಆದ್ರೆ, ಈ ಬಾರಿ ಹೈಕಮಾಂಡ್ ಹೊಸ ಮುಖಕ್ಕೆ ಮಣೆ ಹಾಕಿದೆ. ಟಿಕೆಟ್ ಕೈತಪ್ಪಿದ್ದರು ಸಹ ನಳಿನ್ ಕಟೀಲ್ ಹೈಕಮಾಂಡ್​ ತೀರ್ಮಾನಕ್ಕೆ ಬದ್ಧ ಎಂದು ಭಾವುಕರಾಗಿ ಮಾತನಾಡಿದ್ದರು. ಅಲ್ಲದೇ ನನಗೆ ಮೂರು ಬಾರಿ ಅವಕಾಶ ನೀಡಿದ್ದಾರೆ. ಪಕ್ಷ ನಿಂತ ನೀರಾಗಬಾರದು, ಹೊಸಬರು ಬರ್ತಾ ಇರಬೇಕು. ಹೈಕಮಾಂಡ್‌ ತೀರ್ಮಾನಕ್ಕೆ ನಾನು ಬದ್ಧನಾಗಿರುತ್ತೇನೆ, ಪಕ್ಷ ಕಸ ಗುಡಿಸಿ ಎಂದರೂ ಗುಡಿಸುತ್ತೇನೆ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:56 pm, Wed, 27 March 24

ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಆದಂಪುರ ಏರ್​ಬೇಸ್​​ ಭೇಟಿ ಬಳಿಕ ಮೋದಿ ಮಾತು: ಇಲ್ಲಿದೆ ನೇರಪ್ರಸಾರ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ಇಡೀ ವಿಶ್ವವೇ ಭಾರತೀಯ ಸೈನಿಕರ ಕಾರ್ಯವನ್ನು ಕೊಂಡಾಡುತ್ತಿದೆ: ಶಾಸಕ
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಾಗರಿಕರ ಹೆಸರಿನಲ್ಲಿ ರಾಜ್ಯಾದ್ಯಂತ ತಿರಂಗಾ ಯಾತ್ರೆ: ಆರ್ ಅಶೋಕ್
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ನಮ್ಮ ಸರ್ಕಾರದ ಸಾಧನೆಗಳ ಬಗ್ಗೆ ಬಿಜೆಪಿ ಮಾತಾಡಲ್ಲ: ಶಿವಲಿಂಗೇಗೌಡ
ಶೋಪಿಯಾನ್​ನಲ್ಲಿ ಲಷ್ಕರ್​​ನ ಮೋಸ್ಟ್ ವಾಂಟೆಡ್ ಉಗ್ರ ಸೇರಿ ಮೂವರ ಎನ್​ಕೌಂಟರ್
ಶೋಪಿಯಾನ್​ನಲ್ಲಿ ಲಷ್ಕರ್​​ನ ಮೋಸ್ಟ್ ವಾಂಟೆಡ್ ಉಗ್ರ ಸೇರಿ ಮೂವರ ಎನ್​ಕೌಂಟರ್
ಎಲ್ಲ ಸಂದೇಹಗಳನ್ನು ಪ್ರಧಾನಿ ಮೋದಿ ದೂರ ಮಾಡಿದ್ದಾರೆ: ವಿಜಯೇಂದ್ರ
ಎಲ್ಲ ಸಂದೇಹಗಳನ್ನು ಪ್ರಧಾನಿ ಮೋದಿ ದೂರ ಮಾಡಿದ್ದಾರೆ: ವಿಜಯೇಂದ್ರ
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್