AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

’ವಾಮಮಾರ್ಗದ ಮೂಲಕ ಅಧಿಕಾರ ಹಿಡಿಯಲು ಸಾಧ್ಯವಾದ ಅಂಶಗಳು’: ಕಾಂಗ್ರೆಸ್​ ವಿರುದ್ಧ ಬಿಜೆಪಿ ಕಿಡಿ

ಕಾಂಗ್ರೆಸ್-ಬಿಜೆಪಿ ನಡುವೆ ಸದ್ಯ ಟ್ವೀಟ್ ಸಮರ ಶುರುವಾಗಿದೆ. ಎರಡೂ ಪಕ್ಷಗಳು ಕಳೆದ ಕೆಲ ದಿನಗಳಿಂದ ಸರಣಿ ಟ್ವೀಟ್ ಮೂಲಕ ಪರಸ್ಪರ ಕಾಲೆಳೆದುಕೊಳ್ಳುತ್ತಿವೆ. ಇದೀಗ ಕಾಂಗ್ರೆಸ್​ ವಿರುದ್ಧ ಮತ್ತೆ ಬಿಜೆಪಿ ಕಿಡಿಕಾರಿದ್ದು, ರಾಜ್ಯದಲ್ಲಿ ಎಟಿಎಂ ಸರ್ಕಾರ ವಾಮಮಾರ್ಗದ ಮೂಲಕ ಅಧಿಕಾರ ಹಿಡಿಯಲು ಸಾಧ್ಯವಾದ ಅಂಶಗಳನ್ನು ಟ್ವೀಟ್ ಮಾಡಿದೆ.

’ವಾಮಮಾರ್ಗದ ಮೂಲಕ ಅಧಿಕಾರ ಹಿಡಿಯಲು ಸಾಧ್ಯವಾದ ಅಂಶಗಳು’: ಕಾಂಗ್ರೆಸ್​ ವಿರುದ್ಧ ಬಿಜೆಪಿ ಕಿಡಿ
ಪ್ರಾತಿನಿಧಿಕ ಚಿತ್ರ
ಗಂಗಾಧರ​ ಬ. ಸಾಬೋಜಿ
|

Updated on: Oct 23, 2023 | 6:18 PM

Share

ಬೆಂಗಳೂರು, ಅಕ್ಟೋಬರ್​​​ 23: ಕಾಂಗ್ರೆಸ್-ಬಿಜೆಪಿ ನಡುವೆ ಸದ್ಯ ಟ್ವೀಟ್ ಸಮರ ಶುರುವಾಗಿದೆ. ಎರಡೂ ಪಕ್ಷಗಳು ಕಳೆದ ಕೆಲ ದಿನಗಳಿಂದ ಸರಣಿ ಟ್ವೀಟ್ ಮೂಲಕ ಪರಸ್ಪರ ಕಾಲೆಳೆದುಕೊಳ್ಳುತ್ತಿವೆ. ಸರ್ಕಾರದ ವಿರುದ್ಧ ಬಿಜೆಪಿ ಕಮಿಷನ್ ಆರೋಪ ಮಾಡುತ್ತಿದ್ದರೆ, ಅತ್ತ ನಾಯಕತ್ವ ಪ್ರಶ್ನಿಸಿ ಕಾಂಗ್ರೆಸ್ (Congress)​ ವ್ಯಂಗ್ಯವಾಡುತ್ತಿದೆ. ಇದೀಗ ಬಿಜೆಪಿ ರಾಜ್ಯ ಕಾಂಗ್ರೆಸ್​​ ವಿರುದ್ಧ ಕಿಡಿಕಾರಿದ್ದು, ರಾಜ್ಯದಲ್ಲಿ ಎಟಿಎಂ ಸರ್ಕಾರ ವಾಮಮಾರ್ಗದ ಮೂಲಕ ಅಧಿಕಾರ ಹಿಡಿಯಲು ಸಾಧ್ಯವಾದ ಅಂಶಗಳನ್ನು ತಿಳಿಸಿದೆ.

ಈ ಕುರಿತಾಗಿ ಟ್ವೀಟ್​ ಮಾಡಿರುವ ರಾಜ್ಯ ಬಿಜೆಪಿ, ರಾಜ್ಯದಲ್ಲಿ ಎಟಿಎಂ ಸರ್ಕಾರ ವಾಮಮಾರ್ಗದ ಮೂಲಕ ಅಧಿಕಾರ ಹಿಡಿಯಲು ಸಾಧ್ಯವಾದ ಅಂಶಗಳು:

  • ನಕಲಿ ಮತದಾರರ ಪಟ್ಟಿ (ಭೈರತಿ ಸುರೇಶ್ ಆಪ್ತ ಸೆರೆ)
  • ಸುಳ್ಳು ಗ್ಯಾರಂಟಿಗಳ ಪುಕಾರು (ಜನತೆ ಕೈ ಸೇರಿಲ್ಲ ಹಣ)
  • ಕುಕ್ಕರ್‌ ಇಸ್ತ್ರಿ ಪೆಟ್ಟಿಗೆ, ಹಣ ಹಂಚಿಕೆ (ವರುಣಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ)
  • ಕಿವಿ ಮೇಲೆ ಕಲರ್‌ ಕಲರ್‌ ಹೂ (ವಿದ್ಯುತ್‌, ಕಾವೇರಿ, ರೈತರು)
  • ನಿರಂತರ ಸುಳ್ಳು ಸುದ್ದಿಗಳ ಹರಡುವಿಕೆ (ಜಾತಿ, ಭ್ರಷ್ಟಾಚಾರ, ತುಷ್ಟೀಕರಣ)

ಇದನ್ನೂ ಓದಿ: ಬಿಜೆಪಿ ಪಕ್ಷದಲ್ಲಿ ಯಾರೇ ರಾಜ್ಯಾಧ್ಯಕ್ಷರಾದ್ರೂ ಸಂತಸ: ಡಿಸಿಎಂ ಡಿಕೆ ಶಿವಕುಮಾರ್

ನಾವು ಕಾಂಗ್ರೆಸ್‌ಗೆ ಮತ ಹಾಕಿಲ್ಲ, ಆದರೂ ಹೇಗೆ ಕಾಂಗ್ರೆಸ್​ ಅಧಿಕಾರಕ್ಕೆ ಬಂತು ಎನ್ನುವ ಜನರ ಪ್ರಶ್ನೆಗೆ ಸಿದ್ದರಾಮ್ಯಯ್ಯ ಅವರ ಆಪ್ತ ಭೈರತಿ ಸುರೇಶ್‌ ಅವರ ನಕಲಿ ಮತದಾರರ ಪಟ್ಟಿಯೇ ಉತ್ತರ ಎಂದು ವಾಗ್ದಾಳಿ ಮಾಡಿದೆ.

ಬಿಜೆಪಿ ಟ್ವೀಟ್​ 

ಸಿಎಂ ಸಿದ್ದರಾಮಯ್ಯ ಅವರೇ, ನಿಮ್ಮ ಪಕ್ಷದ 135 ಶಾಸಕರ ಪೈಕಿ, ಹೊಸದಾಗಿ ಗೆದ್ದಿರುವ 70 ಶಾಸಕರು ಡಿಸಿಎಂ ಡಿಕೆ ಶಿವಕುಮಾರ್​ ಬೆಂಬಲಿಗರಂತೆ, ಇದನ್ನು ಹೇಳಿದ್ದು ನಾವಲ್ಲ, ನಿಮ್ಮದೇ ಪಕ್ಷದ ಶಾಸಕ ಚನ್ನಗಿರಿಯ ಶಿವಗಂಗಾ ಬಸವರಾಜು! 135 ರಲ್ಲಿ 70 ಜನ ಅವರ ಬೆಂಬಲಿಗರಾದರೆ, ನಿಮ್ಮ ಬೆಂಬಲಿಗರ ಸಂಖ್ಯೆ ಎಷ್ಟು ಎಂದು ಪ್ರಶ್ನಿಸಿತ್ತು.

ಇದನ್ನೂ ಓದಿ: ಹೆಚ್​ಡಿ ಕುಮಾರಸ್ವಾಮಿಯೇ ಕೃತಕ ಎಂದು ಟೀಕಿಸಿದ ಸಿಎಂ ಸಿದ್ದರಾಮಯ್ಯ: ಕಾರಣವೇನು?

ಇದನ್ನೆಲ್ಲಾ ಗಮನಿಸಿದರೆ, ನೀವು ಶಾಸಕರ ಆಯ್ಕೆಯಿಂದಾದ ಸಿಎಂ ಅಲ್ಲ, ಬದಲಿಗೆ ಹೈಕಮಾಂಡ್‌ಗೆ ಬ್ಲಾಕ್‌ ಮೇಲ್‌ ಮಾಡಿ ಅಥವಾ ಬ್ಲ್ಯಾಂಕ್ ಚೆಕ್‌ ನೀಡಿ ಸಿಎಂ ಆದವರು ಎಂಬುದಂತು ಸ್ಪಷ್ಟ ಎಂದು ಬಿಜೆಪಿ ಕಿಡಿಕಾರಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ