AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajya Sabha Election 2022: ಡಿಕೆ ಶಿವಕುಮಾರ್​ಗೆ ಮತ ತೋರಿಸಿದ ಹೆಚ್​ಡಿ ರೇವಣ್ಣ! ಚುನಾವಣಾಧಿಕಾರಿಗೆ ದೂರು ನೀಡಿದ ಬಿಜೆಪಿ, ಕಾಂಗ್ರೆಸ್

ಮತದಾನ ಮಾಡಿ ತಮ್ಮ ಮತವನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ತೋರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ರೇವಣ್ಣರವರ ಮತವನ್ನು ಅಸಿಂಧು ಮಾಡುವಂತೆ ಬಿಜೆಪಿ ಚುನಾವಣಾಧಿಕಾರಿಗೆ ದೂರು ನೀಡಿದೆ.

Rajya Sabha Election 2022: ಡಿಕೆ ಶಿವಕುಮಾರ್​ಗೆ ಮತ ತೋರಿಸಿದ ಹೆಚ್​ಡಿ ರೇವಣ್ಣ! ಚುನಾವಣಾಧಿಕಾರಿಗೆ ದೂರು ನೀಡಿದ ಬಿಜೆಪಿ, ಕಾಂಗ್ರೆಸ್
ಹೆಚ್.ಡಿ ರೇವಣ್ಣ
TV9 Web
| Edited By: |

Updated on:Jun 10, 2022 | 11:55 AM

Share

ಬೆಂಗಳೂರು: ಇಂದು ರಾಜ್ಯಸಭಾ (Rajya Sabha Election) 4 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. 4 ಸ್ಥಾನಗಳಿಗೆ ಮೂರು ಪಕ್ಷದ ಒಟ್ಟು 6 ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದಾರೆ. ಈಗಾಗಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಶಾಸಕರು ಬಂದು ಮತದಾನ ಮಾಡುತ್ತಿದ್ದಾರೆ. ಈ ವೇಳೆ ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣ (HD Revanna) ಮತದಾನ ಮಾಡಿ ತಮ್ಮ ಮತವನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ತೋರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ರೇವಣ್ಣರವರ ಮತವನ್ನು ಅಸಿಂಧು ಮಾಡುವಂತೆ ಬಿಜೆಪಿ, ಕಾಂಗ್ರೆಸ್ ಚುನಾವಣಾಧಿಕಾರಿಗೆ ದೂರು ನೀಡಿದೆ.

ಈ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಹೆಚ್​ಡಿ ರೇವಣ್ಣ, ನಾನು ಮತ ಹಾಕಿದ್ದನ್ನು ಯಾರಿಗೂ ತೋರಿಸಿಲ್ಲ. ನಾನು ಮತ ಹಾಕುವುದನ್ನ ಡಿಕೆಶಿಗೆ ಯಾಕೆ ತೋರಿಸಲಿ? ಉದ್ದೇಶಪೂರ್ವಕವಾಗಿ ನನ್ನನ್ನು ಟಾರ್ಗೆಟ್​ ಮಾಡಲಾಗುತ್ತಿದೆ ಎಂದರು.

ಕುಮಾರಸ್ವಾಮಿ ಹೇಳಿದ್ದೇನು? ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡಿ 2 ಪಕ್ಷಗಳು ಹೊಂದಾಣಿಕೆ ಮಾಡಿಕೊಂಡು ಹೀಗೆ ಮಾಡುತ್ತಿವೆ. ಸೋಲುವ ಭೀತಿಯಿಂದ ಈ ರೀತಿಯಾಗಿ ಮಾಡುತ್ತಿವೆ. ಅಲ್ಲಿ ಏನಾಗಿದೆ ಎಂದು ನನಗೆ ಗೊತ್ತಿಲ್ಲ. ರಾಜ್ಯದಲ್ಲಿ ಅಶಾಂತಿ ವಾತಾವರಣ ಸೃಷ್ಟಿಸಲು ಪ್ರಯತ್ನಿಸುತ್ತಿವೆ ಎಂದು ಹೇಳಿದರು.

ಇದನ್ನೂ ಓದಿ
Image
ರಾಜ್ಯಸಭೆ ಚುನಾವಣೆ: ವಿಧಾನ ಸಭೆಗೆ ಹೊರಡುವ ಮೊದಲು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅನ್ಯಮನಸ್ಕನಾಗಿದ್ದರು!
Image
ಗುಡ್​ ನ್ಯೂಸ್! ಟ್ವಿಟರ್ ಪರಿಚಯಿಸಲಿದೆ ಹೊಸ ಶಾಪಿಂಗ್ ಆಪ್ಶನ್!
Image
Leopard Attack : 6 ವರ್ಷದ ಬಾಲಕಿಯನ್ನು ಕೊಂದ ಚಿರತೆ
Image
Trending: ಬೆರಳುಗಳಲ್ಲಿ 12 ಇಂಚಿನ ಉಗುರುಗಳು! ಈಕೆಯ ದೈನಂದಿನ ಚಟುವಟಿಕೆಗಳು ಹೇಗಿದೆ ಗೊತ್ತಾ?

ಅಸಿಂಧು ಆಗುವ ಸಾಧ್ಯತೆ: ಮತವನ್ನು ಯಾರಿಗೂ ತೋರಿಸುವಂತಿಲ್ಲ. ಹಾಗೇನಾದರೂ ಬೇರೆಯವರ ಮುಂದೆ ಪ್ರದರ್ಶಿಸಿದರೆ ಆ ಮತವನ್ನು ಅಸಿಂಧು ಎಂದು ಘೋಷಿಸಲಾಗುತ್ತದೆ. ಅದೇ ರೀತಿ ಹೆಚ್​ಡಿ ರೇವಣ್ಣ ತಮ್ಮ ಮತವನ್ನು ಡಿಕೆ ಶಿವಕುಮಾರ್​ ಮುಂದೆ ಪ್ರದರ್ಶಿಸಿದರೆ ಮತ ಅಸಿಂಧು ಆಗುತ್ತದೆ.

ಶ್ರೀನಿವಾಸ್ ವಿರುದ್ಧ ರೇವಣ್ಣ ಗರಂ: ಅಡ್ಡ ಮತದಾನ ಮಾಡಿರುವ ಹಿನ್ನೆಲೆ ಗುಬ್ಬಿ ಶಾಸಕ ಶ್ರೀನಿವಾಸ್ ವಿರುದ್ಧ ರೇವಣ್ಣ ಗರಂ ಆಗಿದ್ದಾರೆ. ನಾನು ಕ್ರಾಸ್ ವೋಟ್ ಮಾಡಿಲ್ಲ. ಜೆಡಿಎಸ್​ಗೆ ಮತ ಹಾಕಿದ್ದೇನೆ ಎಂದು ಶಾಸಕ ಶ್ರೀನಿವಾಸ್ ಹೇಳಿದ್ದಾರೆ.

ಮತ ಎಣಿಕೆ ವಿಳಂಬ ಸಾಧ್ಯತೆ: ಚುನಾವಣಾ ಮತ ಎಣಿಕೆ ವಿಳಂಬವಾಗುವ ಸಾಧ್ಯತೆಯಿದೆ. ಸಂಜೆ 5 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ನಿಗದಿಯಾಗಿತ್ತು. ಕನಿಷ್ಠ ಎರಡು ಗಂಟೆ ಕಾಲ ಮತ ಎಣಿಕೆ ವಿಳಂಬವಾಗುವ ಸಾಧ್ಯತೆಯಿದೆ. ರೇವಣ್ಣ ಮತ ವಿಚಾರಕ್ಕೆ ಸಂಬಂಧಿಸಿ ಆಯೋಗ ಅಂತಿಮ ತೀರ್ಮಾನ ಕೈಗೊಳ್ಳುವವರೆಗೂ ವಿಳಂಬವಾಗಬಹುದು.

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:28 am, Fri, 10 June 22

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್