AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rajya Sabha Election 2022: ಡಿಕೆ ಶಿವಕುಮಾರ್​ಗೆ ಮತ ತೋರಿಸಿದ ಹೆಚ್​ಡಿ ರೇವಣ್ಣ! ಚುನಾವಣಾಧಿಕಾರಿಗೆ ದೂರು ನೀಡಿದ ಬಿಜೆಪಿ, ಕಾಂಗ್ರೆಸ್

ಮತದಾನ ಮಾಡಿ ತಮ್ಮ ಮತವನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ತೋರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ರೇವಣ್ಣರವರ ಮತವನ್ನು ಅಸಿಂಧು ಮಾಡುವಂತೆ ಬಿಜೆಪಿ ಚುನಾವಣಾಧಿಕಾರಿಗೆ ದೂರು ನೀಡಿದೆ.

Rajya Sabha Election 2022: ಡಿಕೆ ಶಿವಕುಮಾರ್​ಗೆ ಮತ ತೋರಿಸಿದ ಹೆಚ್​ಡಿ ರೇವಣ್ಣ! ಚುನಾವಣಾಧಿಕಾರಿಗೆ ದೂರು ನೀಡಿದ ಬಿಜೆಪಿ, ಕಾಂಗ್ರೆಸ್
ಹೆಚ್.ಡಿ ರೇವಣ್ಣ
TV9 Web
| Updated By: sandhya thejappa|

Updated on:Jun 10, 2022 | 11:55 AM

Share

ಬೆಂಗಳೂರು: ಇಂದು ರಾಜ್ಯಸಭಾ (Rajya Sabha Election) 4 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. 4 ಸ್ಥಾನಗಳಿಗೆ ಮೂರು ಪಕ್ಷದ ಒಟ್ಟು 6 ಅಭ್ಯರ್ಥಿಗಳು ಕಣಕ್ಕೆ ಇಳಿದಿದ್ದಾರೆ. ಈಗಾಗಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಶಾಸಕರು ಬಂದು ಮತದಾನ ಮಾಡುತ್ತಿದ್ದಾರೆ. ಈ ವೇಳೆ ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣ (HD Revanna) ಮತದಾನ ಮಾಡಿ ತಮ್ಮ ಮತವನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ತೋರಿಸಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, ರೇವಣ್ಣರವರ ಮತವನ್ನು ಅಸಿಂಧು ಮಾಡುವಂತೆ ಬಿಜೆಪಿ, ಕಾಂಗ್ರೆಸ್ ಚುನಾವಣಾಧಿಕಾರಿಗೆ ದೂರು ನೀಡಿದೆ.

ಈ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಹೆಚ್​ಡಿ ರೇವಣ್ಣ, ನಾನು ಮತ ಹಾಕಿದ್ದನ್ನು ಯಾರಿಗೂ ತೋರಿಸಿಲ್ಲ. ನಾನು ಮತ ಹಾಕುವುದನ್ನ ಡಿಕೆಶಿಗೆ ಯಾಕೆ ತೋರಿಸಲಿ? ಉದ್ದೇಶಪೂರ್ವಕವಾಗಿ ನನ್ನನ್ನು ಟಾರ್ಗೆಟ್​ ಮಾಡಲಾಗುತ್ತಿದೆ ಎಂದರು.

ಕುಮಾರಸ್ವಾಮಿ ಹೇಳಿದ್ದೇನು? ಮಾಜಿ ಸಿಎಂ ಕುಮಾರಸ್ವಾಮಿ ಮಾತನಾಡಿ 2 ಪಕ್ಷಗಳು ಹೊಂದಾಣಿಕೆ ಮಾಡಿಕೊಂಡು ಹೀಗೆ ಮಾಡುತ್ತಿವೆ. ಸೋಲುವ ಭೀತಿಯಿಂದ ಈ ರೀತಿಯಾಗಿ ಮಾಡುತ್ತಿವೆ. ಅಲ್ಲಿ ಏನಾಗಿದೆ ಎಂದು ನನಗೆ ಗೊತ್ತಿಲ್ಲ. ರಾಜ್ಯದಲ್ಲಿ ಅಶಾಂತಿ ವಾತಾವರಣ ಸೃಷ್ಟಿಸಲು ಪ್ರಯತ್ನಿಸುತ್ತಿವೆ ಎಂದು ಹೇಳಿದರು.

ಇದನ್ನೂ ಓದಿ
Image
ರಾಜ್ಯಸಭೆ ಚುನಾವಣೆ: ವಿಧಾನ ಸಭೆಗೆ ಹೊರಡುವ ಮೊದಲು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅನ್ಯಮನಸ್ಕನಾಗಿದ್ದರು!
Image
ಗುಡ್​ ನ್ಯೂಸ್! ಟ್ವಿಟರ್ ಪರಿಚಯಿಸಲಿದೆ ಹೊಸ ಶಾಪಿಂಗ್ ಆಪ್ಶನ್!
Image
Leopard Attack : 6 ವರ್ಷದ ಬಾಲಕಿಯನ್ನು ಕೊಂದ ಚಿರತೆ
Image
Trending: ಬೆರಳುಗಳಲ್ಲಿ 12 ಇಂಚಿನ ಉಗುರುಗಳು! ಈಕೆಯ ದೈನಂದಿನ ಚಟುವಟಿಕೆಗಳು ಹೇಗಿದೆ ಗೊತ್ತಾ?

ಅಸಿಂಧು ಆಗುವ ಸಾಧ್ಯತೆ: ಮತವನ್ನು ಯಾರಿಗೂ ತೋರಿಸುವಂತಿಲ್ಲ. ಹಾಗೇನಾದರೂ ಬೇರೆಯವರ ಮುಂದೆ ಪ್ರದರ್ಶಿಸಿದರೆ ಆ ಮತವನ್ನು ಅಸಿಂಧು ಎಂದು ಘೋಷಿಸಲಾಗುತ್ತದೆ. ಅದೇ ರೀತಿ ಹೆಚ್​ಡಿ ರೇವಣ್ಣ ತಮ್ಮ ಮತವನ್ನು ಡಿಕೆ ಶಿವಕುಮಾರ್​ ಮುಂದೆ ಪ್ರದರ್ಶಿಸಿದರೆ ಮತ ಅಸಿಂಧು ಆಗುತ್ತದೆ.

ಶ್ರೀನಿವಾಸ್ ವಿರುದ್ಧ ರೇವಣ್ಣ ಗರಂ: ಅಡ್ಡ ಮತದಾನ ಮಾಡಿರುವ ಹಿನ್ನೆಲೆ ಗುಬ್ಬಿ ಶಾಸಕ ಶ್ರೀನಿವಾಸ್ ವಿರುದ್ಧ ರೇವಣ್ಣ ಗರಂ ಆಗಿದ್ದಾರೆ. ನಾನು ಕ್ರಾಸ್ ವೋಟ್ ಮಾಡಿಲ್ಲ. ಜೆಡಿಎಸ್​ಗೆ ಮತ ಹಾಕಿದ್ದೇನೆ ಎಂದು ಶಾಸಕ ಶ್ರೀನಿವಾಸ್ ಹೇಳಿದ್ದಾರೆ.

ಮತ ಎಣಿಕೆ ವಿಳಂಬ ಸಾಧ್ಯತೆ: ಚುನಾವಣಾ ಮತ ಎಣಿಕೆ ವಿಳಂಬವಾಗುವ ಸಾಧ್ಯತೆಯಿದೆ. ಸಂಜೆ 5 ಗಂಟೆಗೆ ಮತ ಎಣಿಕೆ ಪ್ರಕ್ರಿಯೆ ನಿಗದಿಯಾಗಿತ್ತು. ಕನಿಷ್ಠ ಎರಡು ಗಂಟೆ ಕಾಲ ಮತ ಎಣಿಕೆ ವಿಳಂಬವಾಗುವ ಸಾಧ್ಯತೆಯಿದೆ. ರೇವಣ್ಣ ಮತ ವಿಚಾರಕ್ಕೆ ಸಂಬಂಧಿಸಿ ಆಯೋಗ ಅಂತಿಮ ತೀರ್ಮಾನ ಕೈಗೊಳ್ಳುವವರೆಗೂ ವಿಳಂಬವಾಗಬಹುದು.

ತಾಜಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:28 am, Fri, 10 June 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ