AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ…ಮೋದಿ ಎಂದು ಕೂಗುವ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ ಎಂದ ತಂಗಡಗಿ ವಿರುದ್ಧ ಚುನಾವಣೆ ಆಯೋಗಕ್ಕೆ ದೂರು

ಮೋದಿ...ಮೋದಿ ಎಂದು ಕೂಗಿದರೆ ಕಪಾಳಕ್ಕೆ ಹೊಡೆಯಿರಿ ಎಂದಿದ್ದ ಸಚಿವ ಶಿವರಾಜ್ ತಂಗಡಗಿ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ಇದೀಗ ಬಿಜೆಪಿ, ತಂಗಡಗಿ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಮೋದಿ...ಮೋದಿ ಎಂದು ಕೂಗುವ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ ಎಂದ ತಂಗಡಗಿ ವಿರುದ್ಧ ಚುನಾವಣೆ ಆಯೋಗಕ್ಕೆ ದೂರು
ಶಿವರಾಜ್ ತಂಗಡಗಿ
TV9 Web
| Edited By: |

Updated on: Mar 25, 2024 | 10:30 PM

Share

ಬೆಂಗಳೂರು, (ಮಾರ್ಚ್ 25): “ಯುವಕರು ಮೋದಿ.. ಮೋದಿ.. ಎಂದರೆ ಕಪಾಳಕ್ಕೆ ಹೊಡಿಯಬೇಕು” ಎನ್ನುವ ಸಚಿವ ಶಿವರಾಜ್ ತಂಗಡಗಿ (Shivaraj tangadagi)ಹೇಳಿಕೆ ವಿರುದ್ಧ ಬಿಜೆಪಿ ಕೆಂಡಾಮಂಡಲವಾಗಿದ್ದು, ನಾವು ಮೋದಿ ಮೋದಿ ಎನ್ನುತ್ತೇವೆ ನಮಗೆ ಹೊಡೆಯಿರಿ ಬನ್ನಿ ಎಂದು ಅಭಿಯಾನ ಮಾದರಿಯಲ್ಲಿ ಪೋಸ್ಟರ್​ ಅನ್ನು ಸಾಮಾಜಿ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಇದರ ಮಧ್ಯೆ ಇದೀಗ ರಾಜ್ಯ ಬಿಜೆಪಿ ತಂಗಡಗಿ ವಿರುದ್ಧ ಕ್ರಮಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್, ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್, ರಾಜ್ಯ ವಕ್ತಾರ ಹೆಚ್. ವೆಂಕಟೇಶ್ ದೊಡ್ಡೇರಿ, ಕಾನೂನು ಪ್ರಕೋಷ್ಟದ ರಾಜ್ಯ ಸಂಚಾಲಕ ವಸಂತ್ ಕುಮಾರ್ ಒಳಗೊಂಡ ಬಿಜೆಪಿ ನಿಯೋಗ ಇಂದು(ಮಾರ್ಚ್ 25) ಚುನಾವಣೆ ಆಯೋಗಕ್ಕೆ ದೂರು ನೀಡಿದರು.

ಇದನ್ನೂ ಓದಿ: ನಾವೂ ಮೋದಿ ಮೋದಿ ಎನ್ನುತ್ತೇವೆ… ಬನ್ನಿ ನಮ್ಮ ಕಪಾಳಕ್ಕೆ ಹೊಡೆಯಿರಿ: ತಂಗಡಗಿಗೆ ಕಾರ್ಯಕರ್ತರ ಸವಾಲ್

ನಮ್ಮ ಪಕ್ಷದ ಮತದಾರರ ವಿರುದ್ಧ ಪ್ರಚೋದನಾತ್ಮಕವಾಗಿ ಮಾತನಾಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರನ್ನು ಎತ್ತಿಕಟ್ಟಿ, ದ್ವೇಷ ಭಾವನೆ ಮೂಡುವಂತೆ ಮಾಡಿ ಮತದಾರರ ಮೇಲೆ ಹಲ್ಲೆ ಮಾಡುವಂತೆ ಪ್ರಚೋದಿಸಿದ್ದಾರೆ. ಇಂಥ ಹೇಳಿಕೆಯಿಂದ ಮತದಾರರು ಮತದಾನದಿಂದ ದೂರ ಉಳಿಯುವ ಸಾಧ್ಯತೆ ಇದೆ. ಇದು ಚುನಾವಣಾ ನೀತಿ ಸಂಹಿತೆ ಉಲ್ಲಂಘನೆಯಾಗಿರುವುದು ಸ್ಪಷ್ಟವಾಗಿದೆ. ಹೀಗಾಗಿ ಸಚಿವ ಶಿವರಾಜ್ ತಂಗಡಗಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ರಾಜ್ಯ ಬಿಜೆಪಿ ನಿಯೋಗ ಮನವಿ ಮಾಡಿದೆ.

ಇದನ್ನೂ ಓದಿ:  ಮೋದಿ ಮೋದಿ ಘೋಷಣೆ ಕೂಗುವ ಯುವಕರು, ವಿದ್ಯಾರ್ಥಿಗಳ ಕಪಾಳಕ್ಕೆ ಹೊಡೆಯಬೇಕು: ಸಚಿವ ಶಿವರಾಜ ತಂಗಡಗಿ

ಶಿವರಾಜ್ ತಂಗಡಗಿ ಹೇಳಿದ್ದೇನು?

ಕೊಪ್ಪಳ ಜಿಲ್ಲೆಯ  ಕಾರಟಗಿಯಲ್ಲಿ ಏರ್ಪಡಿಸಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಶಿವರಾಜ್‌ ತಂಗಡಗಿ, ಯುವಕರಿಗೆ ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇನೆ ಎಂದಿದ್ದರು. ಹಾಗೆ ನೋಡಿದರೆ 10 ವರ್ಷದಲ್ಲಿ 20 ಕೋಟಿ ಉದ್ಯೋಗ ನೀಡಬೇಕಿತ್ತು. ನೀಡಿದ್ದಾರಾ? ಇನ್ನೂ ಯುವಕರು, ವಿದ್ಯಾರ್ಥಿಗಳು ಮೋದಿ ಮೋದಿ ಎನ್ನುತ್ತಾರೆ. ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದ್ದಾರೆ. ಇನ್ನೂ 5-10 ವರ್ಷ ಸುಳ್ಳು ಹೇಳುತ್ತಾರೆ. ಈ ಸುಳ್ಳು ಕೇಳಿಕೊಂಡು ಹೋಗಬೇಕಾ? ಎಂದು ಪ್ರಶ್ನೆ ಮಾಡಿದ್ದರು.

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್