ಅಧಿಕಾರಕ್ಕಾಗಿ ಗ್ಯಾರಂಟಿ ಘೋಷಿಸಿ ಈಗ ಪ್ರಧಾನಿ ಮೋದಿ ಕಡೆ ಬೊಟ್ಟು ತೋರಿಸುತ್ತೀರಾ?: ಸಿದ್ದರಾಮಯ್ಯಗೆ ಯಡಿಯೂರಪ್ಪ ಪ್ರಶ್ನೆ

ಕಾಂಗ್ರೆಸ್​ನವರು ಘೋಷಿಸಿರುವ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬೇಕು. ಇಲ್ಲದಿದ್ದರೆ ಕಾಂಗ್ರೆಸ್​ನವರು ಅಧಿಕಾರ ಬಿಟ್ಟು ತೊಲಗಬೇಕು ಎಂದು ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರು ನಗರದ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದರು.

ಅಧಿಕಾರಕ್ಕಾಗಿ ಗ್ಯಾರಂಟಿ ಘೋಷಿಸಿ ಈಗ ಪ್ರಧಾನಿ ಮೋದಿ ಕಡೆ ಬೊಟ್ಟು ತೋರಿಸುತ್ತೀರಾ?: ಸಿದ್ದರಾಮಯ್ಯಗೆ ಯಡಿಯೂರಪ್ಪ ಪ್ರಶ್ನೆ
ಬಿಎಸ್ ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ
Rakesh Nayak Manchi

Updated on: Jun 24, 2023 | 8:09 PM

ಬೆಂಗಳೂರು: ಅಧಿಕಾರಕ್ಕಾಗಿ ಗ್ಯಾರಂಟಿ ಘೋಷಿಸಿ ಈಗ ಪ್ರಧಾನಿ ನರೇಂದ್ರ ಮೋದಿ (Narendra Modi) ಕಡೆ ಬೊಟ್ಟು ತೋರಿಸುತ್ತೀರಾ ಎಂದು ಮಾಜಿ ಸಿಎಂ ಯಡಿಯೂರಪ್ಪ (BS Yediyurappa) ಅವರು ಸಿಎಂ ಸಿದ್ದರಾಮಯ್ಯ (Siddaramaiah) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ನಗರದ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್​ನವರು ಘೋಷಿಸಿರುವ ಗ್ಯಾರಂಟಿ ಜಾರಿ ಮಾಡಬೇಕು. ಇಲ್ಲದಿದ್ದರೆ ಕಾಂಗ್ರೆಸ್​ನವರು ಅಧಿಕಾರ ಬಿಟ್ಟು ತೊಲಗಬೇಕು ಎಂದು ವಾಗ್ದಾಳಿ ನಡೆಸಿದರು.

ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡದ ಕಾಂಗ್ರೆಸ್ ವಿರುದ್ಧ ಅಧಿವೇಶನ ಆರಂಭದ ದಿನದಿಂದ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಬೇಕು. ನಮ್ಮ ಶಾಸಕರು ಅಧಿವೇಶನ ನಡೆಸಲು ಬಿಡದೆ ಹೋರಾಡಬೇಕು. ಉಪವಾಸ ಸತ್ಯಾಗ್ರಹ ಬೇಡ, ಊಟ ಮಾಡಿ ಪ್ರತಿಭಟನೆ ಮಾಡೋಣ. ಈ ಸರ್ಕಾರದ ಮೂಗು ಹಿಂಡುವ ಕೆಲಸ ನಾವು ಮಾಡೋಣ ಎಂದು ಹೇಳಿದ ಯಡಿಯೂರಪ್ಪ, ಕೇಂದ್ರ ಸರ್ಕಾರ ನೀಡುವ 5 ಕೆಜಿ ಅಕ್ಕಿ ಜೊತೆ 10 ಕೆಜಿ ಅಕ್ಕಿ ಸೇರಿಸಿ ಒಟ್ಟು 15 ಕೆಜಿ ಅಕ್ಕಿ ಕೊಡಬೇಕು ಎಂದು ಕಾಂಗ್ರೆಸ್ ಸರ್ಕಾರವನ್ನು ಒತ್ತಾಯಿಸಿದರು.

ಇದನ್ನೂ ಓದಿ: ಪೂರ್ಣಾವಧಿ ಸಿಎಂ ಸ್ಥಾನದ ಭರವಸೆ ನಂತರ ಗ್ಯಾರಂಟಿ ಜಾಮೀನಿಗೆ ಸಹಿ ಹಾಕಿದ ಸಿದ್ದರಾಮಯ್ಯ: ಮುನಿರತ್ನ

ಕಾಂಗ್ರೆಸ್​ನವರಿಗೆ ರಾಜಕೀಯ ದೊಂಬರಾಟ ಮಾಡಲು ಬಿಡುವುದಿಲ್ಲ. ಬಿಬಿಎಂಪಿ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬರಬೇಕು. ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸೀಟು ಗೆಲ್ಲಬೇಕು. ಸಾಧನೆ ಮಾತಾಡಬೇಕು, ಮಾತಾಡುವುದೇ ಸಾಧನೆ ಆಗಬಾರದು ಎಂದು ಯಡಿಯೂರಪ್ಪ ಹೇಳಿದರು.

ಸಿದ್ದರಾಮಯ್ಯ ಪಂಚೆ ಕಳಚಿಕೊಂಡು ಓಡಬೇಕಾಗುತ್ತದೆ: ಕಾರಜೋಳ

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಅವರು ನೀತಿಗೆಟ್ಟ ರಾಜಕಾರಣ ಮಾಡುತ್ತಿದ್ದಾರೆ ಎಂದು ಸಮಾವೇಶದಲ್ಲಿ ಆರೋಪಿಸಿದ ಮಾಜಿ ಸಚಿವ ಗೋವಿಂದ ಎಂ ಕಾರಜೋಳ, ಸಿದ್ದರಾಮಯ್ಯ ಅವರು ಪಂಚೆ ಮೇಲೇರಿಸಿಕೊಂಡು ಗ್ಯಾರಂಟಿ ಘೋಷಿಸಿದ್ದರು. ಆದರೆ ಈಗ ಆಟೋ ಚಾಲಕರು, ಖಾಸಗಿ ಬಸ್​ ಮಾಲೀಕರು ಬೀದಿಗೆ ಬಿದ್ದಿದ್ದಾರೆ. ಇವರು ಬಡಿಗೆ ಎತ್ತಿಕೊಳ್ಳಲಿದ್ದಾರೆ. ಗೃಹಲಕ್ಷ್ಮೀ ಗ್ಯಾರಂಟಿ ಜಾರಿ ಮಾಡದಿದ್ದರೆ ಸ್ತ್ರೀಯರು ಪೊರಕೆ ಎತ್ತಿಕೊಂಡು ಬರುತ್ತಾರೆ. ಆಗ ಸಿದ್ದರಾಮಯ್ಯ ಅವರು ಪಂಚೆ ಕಳಚಿಕೊಂಡು ಓಡಬೇಕಾಗುತ್ತದೆ ಎಂದರು.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

Follow Us