AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Congress: ಮಾಡಾಳ್ ಬಂಧನ ಬಿಜೆಪಿ ಸರ್ಕಾರದ ಭ್ರಷ್ಟಾಚಾರಕ್ಕೆ ಸಿಕ್ಕಿರುವ ಆಸ್ಕರ್ ಅವಾರ್ಡ್​ನಂತೆ; ಕಾಂಗ್ರೆಸ್

ಕಡುಭ್ರಷ್ಟ ಬಿಜೆಪಿಗೆ ಮತ ಕೇಳಲು ಜನರ ಮುಂದೆ ಹೋಗಲು ಯಾವುದೇ ನೈತಿಕ ಹಕ್ಕೂ ಇಲ್ಲ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.

Karnataka Congress: ಮಾಡಾಳ್ ಬಂಧನ ಬಿಜೆಪಿ ಸರ್ಕಾರದ ಭ್ರಷ್ಟಾಚಾರಕ್ಕೆ ಸಿಕ್ಕಿರುವ ಆಸ್ಕರ್ ಅವಾರ್ಡ್​ನಂತೆ; ಕಾಂಗ್ರೆಸ್
ಕಾಂಗ್ರೆಸ್​ ಪಕ್ಷದ ಧ್ವಜ (ಸಾಂದರ್ಭಿಕ ಚಿತ್ರ)
ಗಣಪತಿ ಶರ್ಮಾ
|

Updated on: Mar 27, 2023 | 10:28 PM

Share

ಮುಖ್ಯಾಂಶಗಳು

  • ಮಾಡಾಳ್ ವಿರೂಪಾಕ್ಷಪ್ಪ ಅವರನ್ನು ಲೋಕಾಯುಕ್ತ ಬಂಧಿಸಿದ ಬೆನ್ನಲ್ಲೇ ಆ ವಿಚಾರವಾಗಿ ಬಿಜೆಪಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿ.
  • ವೀರೂಪಾಕ್ಷಪ್ಪರ ಬಂಧನ ಬಿಜೆಪಿ ಸರ್ಕಾರದ ಭ್ರಷ್ಟಾಚಾರಕ್ಕೆ ಸಿಕ್ಕಿರುವ ಆಸ್ಕರ್ ಅವಾರ್ಡಿನಂತೆ ಎಂದ ಕಾಂಗ್ರೆಸ್.
  • ಬಿಜೆಪಿಯ ಭ್ರಷ್ಟಾಚಾರದ ಪಾಪದ ಕೊಡ ತುಂಬಿರುವುದಕ್ಕೆ ಮಾಡಾಳ್ ಬಂಧನ ಸಾಕ್ಷಿ ಎಂದ ಕಾಂಗ್ರೆಸ್.

ಬೆಂಗಳೂರು: ಲಂಚ ಪ್ರಕರಣದಲ್ಲಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (Madal Virupakshappa Arrest) ಅವರನ್ನು ಲೋಕಾಯುಕ್ತ ಬಂಧಿಸಿದ ಬೆನ್ನಲ್ಲೇ ಆ ವಿಚಾರವಾಗಿ ಬಿಜೆಪಿ ವಿರುದ್ಧ ಕಾಂಗ್ರೆಸ್ (Congress) ವಾಗ್ದಾಳಿ ನಡೆಸಿದೆ. ಮಾಡಾಳ್ ವೀರೂಪಾಕ್ಷಪ್ಪರ ಬಂಧನ ಬಿಜೆಪಿ ಸರ್ಕಾರದ ಭ್ರಷ್ಟಾಚಾರಕ್ಕೆ ಸಿಕ್ಕಿರುವ ಆಸ್ಕರ್ ಅವಾರ್ಡಿನಂತೆ! 40 ಪರ್ಸೆಂಟ್ ಸರ್ಕಾರ ಭ್ರಷ್ಟರ ರಕ್ಷಣೆಯ ಪ್ರಯತ್ನದ ಹೊರತಾಗಿಯೂ ಈ ಬಂಧನವಾಗಿದ್ದು ಬಿಜೆಪಿಯ ಭ್ರಷ್ಟಾಚಾರದ ಪಾಪದ ಕೊಡ ತುಂಬಿರುವುದಕ್ಕೆ ಸಾಕ್ಷಿ. ಇಂಥಹ ಕಡುಭ್ರಷ್ಟ ಬಿಜೆಪಿಗೆ ಮತ ಕೇಳಲು ಜನರ ಮುಂದೆ ಹೋಗಲು ಯಾವುದೇ ನೈತಿಕ ಹಕ್ಕೂ ಇಲ್ಲ ಎಂದು ಕಾಂಗ್ರೆಸ್ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿದೆ.

ಒಳಮೀಸಲಾತಿ ಜಾರಿಗೆ ಬಂಜಾರ ಸಮುದಾಯದಿಂದ ತೀವ್ರ ವಿರೋಧ ವ್ಯಕ್ತವಾಗಿರುವ ವಿಚಾರವಾಗಿಯೂ ಬಿಜೆಪಿ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಟೀಕಾ ಪ್ರಹಾರ ನಡೆಸಿದೆ. “ಮೋದಿ ಬಂದು ಕೈ ಬೀಸಿ ಹೋದರೆ ಕನ್ನಡಿಗರಿಗೆ ಬರೆ ಎಳೆದರೆಂದೇ ಅರ್ಥ” ಎಂದು ಮೊದಲೇ ಹೇಳಿದ್ದೆವು. ನರೇಂದ್ರ ಮೋದಿ ಅವರೇ, ತಾವು ಬಂದು “ಬಂಜಾರ ಸಮುದಾಯದ ನಿಮ್ಮ ಮಗ ದೆಹಲಿಯಲ್ಲಿ ಕುಳಿತಿದ್ದಾನೆ” ಎಂದು ಹೇಳಿ ಹೋದ ನಂತರ ಇಲ್ಲಿ ಬಂಜಾರ ಸಮುದಾಯಕ್ಕೆ ಅನ್ಯಾಯವಾಗಿದೆ, ಕಲ್ಲು ತೂರಾಟ ನಡೆದಿದೆ. ದೆಹಲಿಯಲ್ಲಿ ಕುಳಿತ ಮಗ ಬಂಜಾರರಿಗೆ ಕೈ ಕೊಟ್ಟನೇ! ಎಂದು ಮತ್ತೊಂದು ಟ್ವೀಟ್​ನಲ್ಲಿ ವ್ಯಂಗ್ಯವಾಡಿದೆ.

ಮೂಗಿಗೆ ತುಪ್ಪ ಸವರುವ ಬಿಜೆಪಿ ಸರ್ಕಾರದ ನವರಂಗಿ ಆಟಕ್ಕೆ ಜನ ಬ್ರೇಕ್ ಹಾಕುವುದು ನಿಶ್ಚಿತ. “ಇದು ಕೇವಲ ಟ್ರೇಲರ್ ಅಷ್ಟೇ, ಪಿಚ್ಚರ್ ಮುಂದಿದೆ” ಎನ್ನುತ್ತಿದೆ ಬಂಜಾರ ಸಮುದಾಯ, ಪಿಚ್ಚರ್ ನೋಡಲು ತಯಾರಿದ್ದೀರಾ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ? ಬಿಜೆಪಿ ಜನರತ್ತ ದ್ರೋಹದ ಕಲ್ಲೆಸೆದರೆ, ಜನರ ಕಡೆಯಿಂದಲೂ ಕಲ್ಲು ತೂರಿ ಬರುತ್ತವೆ ಎಂದು ಕಾಂಗ್ರೆಸ್ ಹೇಳಿದೆ.

ಇದನ್ನೂ ಓದಿ: Karnataka Assembly Election 2023: ಮುಸ್ಲಿಮರಿಗೆ ಹೊಸ ಆರಂಭವಾಗಲಿದೆಯೇ ಈ ಚುನಾವಣೆ?

ಒಳಮೀಸಲಾತಿ ಜಾರಿ ವಿರೋಧಿಸಿ ಬಂಜಾರ ಸಮುದಾಯದಿಂದ ತೀವ್ರ ಪ್ರತಿಭಟನೆ ವ್ಯಕ್ತವಾಗಿದ್ದು, ಶಿಕಾರಿಪುರ ಪಟ್ಟಣದಲ್ಲಿರುವ ಮಾಜಿ ಸಿಎಂ ಯಡಿಯೂರಪ್ಪ ಅವರ ಮೈತ್ರಿ ನಿವಾಸದ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆಯ ನಂತರ ಕಾಂಗ್ರೆಸ್ ಟ್ವೀಟ್ ಮಾಡಿದೆ.

ಬಿಜೆಪಿ ಮಾಡುವ ಅವಾಂತರಗಳಿಗೆ ಬಿಜೆಪಿಯೇ ಶಾಸ್ತಿ ಅನುಭವಿಸಲಿದೆ ಎಂಬುದು ಬಿಎಸ್​​ ಯಡಿಯೂರಪ್ಪ ಅವರ ಮನೆಯ ಕಲ್ಲೆಸೆತವೇ ನಿದರ್ಶನ. ತಳಸಮುದಾಯಗಳಿಗೆ ದ್ರೋಹವೆಸಗುತ್ತಿರುವ ಬಸವರಾಜ ಬೊಮ್ಮಾಯಿ ಅವರ ಮೂಗಿಗೆ ತುಪ್ಪ ಸವರುವ ಕುತಂತ್ರ ಜನತೆಗೆ ಅರ್ಥವಾಗಿದೆ. ಸ್ವತಃ ಬಿಜೆಪಿಯ ಸಚಿವರೇ ಮೀಸಲಾತಿ ಅವಾಂತರದ ವಿರುದ್ಧ ನಿಂತಿರುವುದು ಬಿಜೆಪಿಯ ಎಡಬಿಡಂಗಿ ನೀತಿಗೆ ಸಾಕ್ಷಿ ಎಂದು ಕಾಂಗ್ರೆಸ್ ಟೀಕಿಸಿದೆ.

ಒಳ ಮೀಸಲಾತಿ ನಿರ್ಧಾರ ವಿರೋಧಿಸಿ ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಕಾನೂನು ಸಚಿವ ಮಾಧುಸ್ವಾಮಿ ಅವರಿಗೆ ಪತ್ರ ಬರೆದಿದ್ದರು.

ರಾಜಕೀಯಕ್ಕೆ ಸಂಬಂಧಿಸಿದ ಮತ್ತಷ್ಟು ಅಪ್​ಡೇಟ್​ಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್