AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಫೋಟವಾಗುತ್ತಾ ಬಿಜೆಪಿ ಭಿನ್ನಮತ? ವಿಜಯೇಂದ್ರ ಆಯ್ಕೆ ಬಗ್ಗೆ ವಿ ಸೋಮಣ್ಣ ಮಾರ್ಮಿಕ ಮಾತು ಹೀಗಿದೆ ನೋಡಿ

ತಮ್ಮದೇ ಪಕ್ಷದ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ವಿ ಸೋಮಣ್ಣ , ಪಕ್ಷಕ್ಕೆ ನನ್ನದೂ ದುಡಿಮೆ,‌ ಶ್ರಮ ಇದೆ. ನನಗೆ ಡಬಲ್ ಗೇಮ್ ಮಾಡೋದು ಗೊತ್ತಿಲ್ಲ. ಅಭಿಪ್ರಾಯವನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದು ಹೇಳಿದ್ದಾರೆ.

ಸ್ಫೋಟವಾಗುತ್ತಾ ಬಿಜೆಪಿ ಭಿನ್ನಮತ? ವಿಜಯೇಂದ್ರ ಆಯ್ಕೆ ಬಗ್ಗೆ ವಿ ಸೋಮಣ್ಣ ಮಾರ್ಮಿಕ ಮಾತು ಹೀಗಿದೆ ನೋಡಿ
ವಿ ಸೋಮಣ್ಣ
ಕಿರಣ್​ ಹನಿಯಡ್ಕ
| Updated By: Ganapathi Sharma|

Updated on: Nov 16, 2023 | 3:33 PM

Share

ಬೆಂಗಳೂರು, ನವೆಂಬರ್ 16: ಬಿಜೆಪಿ ಕರ್ನಾಟಕ ಘಟಕದ ಅಧ್ಯಕ್ಷರಾಗಿ ಬಿವೈ ವಿಜಯೇಂದ್ರ (BY Vijayendra) ಅವರ ನೇಮಕ ಮಾಡಿರುವ ವಿಚಾರವಾಗಿ ಹಿರಿಯ ನಾಯಕ, ಮಾಜಿ ಸಚಿವ ವಿ ಸೋಮಣ್ಣ (V Somanna) ಕೊನೆಗೂ ಮೌನಮುರಿದಿದ್ದಾರೆ. ‘ಟಿವಿ9’ಗೆ ಹೇಳಿಕೆ ನೀಡಿರುವ ಅವರು, ವಿಜಯೇಂದ್ರ ಬಗ್ಗೆ ಮಾತನಾಡಲು ಇನ್ನೂ ಕಾಲ ಬಂದಿಲ್ಲ. ವಿಜಯೇಂದ್ರ ವಿಚಾರಕ್ಕೆ ಕಾಲವೇ‌ ಉತ್ತರ ಕೊಡಲಿದೆ ಎಂದು ಹೇಳಿದ್ದಾರೆ.

ಸಿದ್ಧಗಂಗಾ ಮಠದಲ್ಲಿ ಆಯೋಜಿಸಲಾಗುತ್ತಿರುವ ಕಾರ್ಯಕ್ರಮ ಪವಿತ್ರವಾದದ್ದು. ಶಕ್ತಿ ಪ್ರದರ್ಶನಕ್ಕಾಗಿ ಆ ಕಾರ್ಯಕ್ರಮ ನಡೆಸುತ್ತಿಲ್ಲ. ಪೂರ್ವ ನಿರ್ಧರಿತ ಕಾರ್ಯಕ್ರಮ. ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸುವ ಬಗ್ಗೆ ಯೋಚಿಸಿಲ್ಲ ಎಂದು ಸೋಮಣ್ಣ ಹೇಳಿದ್ದಾರೆ.

ಆದಾಗ್ಯೂ ತಮ್ಮದೇ ಪಕ್ಷದ ನಾಯಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಪಕ್ಷಕ್ಕೆ ನನ್ನದೂ ದುಡಿಮೆ,‌ ಶ್ರಮ ಇದೆ. ನನಗೆ ಡಬಲ್ ಗೇಮ್ ಮಾಡೋದು ಗೊತ್ತಿಲ್ಲ. ಅಭಿಪ್ರಾಯವನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ. ಒಬ್ಬ ಕೆಲಸ ಮಾಡುವವನಿಗೆ, ಪಾಪ್ಯುಲರ್ ಆದವರಿಗೆ ಮುಜುಗರದ ಸಂಗತಿಗಳು ಎದುರಾಗುತ್ತವೆ. ನಾನು ಯಾವುದೇ ಲೋಕಸಭಾ ಟಿಕೆಟ್ ಆಕಾಂಕ್ಷಿ ಅಲ್ಲ ಎಂದು ಅವರು ಹೇಳಿದ್ದಾರೆ.

ಡಿಸಿಎಂ ಡಿಕೆ ಶಿವಕುಮಾರ್ ಚರ್ಚೆ ನಡೆಸಿರುವ ವಿಚಾರದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಅದೆಲ್ಲಾ ನಡೆಯುತ್ತಿರುತ್ತೆ. ಆದರೆ ಕಾಂಗ್ರೆಸ್ ಸೇರುವ ಅವಶ್ಯಕತೆ ನನಗೆ ಈಗಿಲ್ಲ ಎಂದು ಹೇಳಿದ್ದಾರೆ.

ಡಿಸೆಂಬರ್‌ನಲ್ಲಿ ತುಮಕೂರಿನಲ್ಲಿ ಸೋಮಣ್ಣ ಶಕ್ತಿ ಪ್ರದರ್ಶನ

ಡಿಸೆಂಬರ್ 6ರಂದು ಮಾಜಿ ಸಚಿವ ಸೋಮಣ್ಣ ನೇತೃತ್ವದಲ್ಲಿ ಸಿದ್ದಗಂಗಾ ಮಠದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿದೆ. ಸ್ವಾಮೀಜಿಗಳ ಅತಿಥಿಗೃಹ ಉದ್ಘಾಟನಾ ನೆಪದಲ್ಲಿ ಸೋಮಣ್ಣ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಸಚಿವರಾದ ಪರಮೇಶ್ವರ್‌, ಕೆಎನ್​ ರಾಜಣ್ಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಲಿಂಗಾಯತ ಸಮುದಾಯದ ಪ್ರಮುಖ ಮುಖಂಡರಿಗೂ ಆಹ್ವಾನ ನೀಡಲಾಗಿದೆ.

ಇದನ್ನೂ ಓದಿ: ಹಿರಿಯ ನಾಯಕರಿಗೆ ಅಸಮಾಧಾನವಿಲ್ಲ, ಎಲ್ಲರನ್ನೂ ಭೇಟಿಯಾಗಿ ಆಶೀರ್ವಾದ ಪಡೆಯುವೆ: ಬಿವೈ ವಿಜಯೇಂದ್ರ, ನಿಯೋಜಿತ ಬಿಜೆಪಿ ರಾಜ್ಯಾಧ್ಯಕ್ಷ

ಈ ಮಧ್ಯೆ, ತುಮಕೂರು ಲೋಕಸಭಾ ಕ್ಷೇತ್ರದಿಂದ ಸೋಮಣ್ಣ ಅಭ್ಯರ್ಥಿಯಾಗಬಹುದೆಂಬ ವದಂತಿಗಳ ನಡುವೆ ತುಮಕೂರಿನಲ್ಲಿಯೇ ಕಾರ್ಯಕ್ರಮ ಆಯೋಜನೆಯಾಗುತ್ತಿದೆ.

ರಾಜಕೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ರಸ್ತೆಯಲ್ಲಿರೋದು ಒಂದೇ ಒಂದು ಕಾರು, ಟ್ರಾಫಿಕ್ ಇಲ್ಲ, ಸ್ಟಿಲ್ ವೈಟಿಂಗ್
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
ಅಂತಿಮ ಪರೀಕ್ಷೆ ವೇಳೆ ಬ್ರೌನ್ ವಿವಿಯಲ್ಲಿ ಗುಂಡಿನ ದಾಳಿ, ಇಬ್ಬರು ಸಾವು
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!
2026ಕ್ಕೆ ಈ ರಾಶಿಗಳಿಗೆ ಅದೃಷ್ಟವೋ ಅದೃಷ್ಟ!