AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಚಾರ ಭಾಷಣದಲ್ಲಿ ಹಣ ನೀಡುವ ಆಮಿಷ ಒಡ್ಡಿದ ಆರೋಪ; ಕಾಂಗ್ರೆಸ್​ನ ಯೂಸುಫ್ ಷರೀಫ್ ಬಾಬು ವಿರುದ್ಧ ದೂರು ದಾಖಲು

ಅಷ್ಟೇ ಅಲ್ಲದೆ, ಚುನಾವಣಾ ಕಣದಿಂದ ಯೂಸುಫ್ ವಜಾಗೊಳಿಸಲು ಮನವಿ ಮಾಡಲಾಗಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಲಾಗಿದೆ. SC ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ದೂರು ನೀಡಿದ್ದಾರೆ.

ಪ್ರಚಾರ ಭಾಷಣದಲ್ಲಿ ಹಣ ನೀಡುವ ಆಮಿಷ ಒಡ್ಡಿದ ಆರೋಪ; ಕಾಂಗ್ರೆಸ್​ನ ಯೂಸುಫ್ ಷರೀಫ್ ಬಾಬು ವಿರುದ್ಧ ದೂರು ದಾಖಲು
ಯೂಸುಫ್ ಷರೀಫ್ ಬಾಬು
TV9 Web
| Edited By: |

Updated on:Dec 01, 2021 | 9:19 PM

Share

ಬೆಂಗಳೂರು: ಕರ್ನಾಟಕದಲ್ಲಿ 25 ಸ್ಥಾನಗಳಿಗೆ ವಿಧಾನಪರಿಷತ್ ಚುನಾವಣೆ ಡಿಸೆಂಬರ್ 10ರಂದು ನಡೆಯಲಿದೆ. ಈ ಮಧ್ಯೆ, ಇಂದು (ಡಿಸೆಂಬರ್ 1) ಬೆಂಗಳೂರು ನಗರ ಕ್ಷೇತ್ರ ‌ಕಾಂಗ್ರೆಸ್ ಅಭ್ಯರ್ಥಿ ಯೂಸುಫ್ ಷರೀಫ್ ಬಾಬು ವಿರುದ್ಧ ದೂರು ದಾಖಲು ಮಾಡಲಾಗಿದೆ. ಚುನಾವಣಾ ಆಯೋಗಕ್ಕೆ ಬಿಜೆಪಿ ಮುಖಂಡರಿಂದ ದೂರು ಸಲ್ಲಿಸಲಾಗಿದೆ. ಪ್ರಚಾರ ಭಾಷಣದಲ್ಲಿ ಹಣ ನೀಡುವ ಆಮಿಷ ಒಡ್ಡಿದ ಆರೋಪದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದಡಿ ದೂರು ದಾಖಲಾಗಿದೆ.

ಅಷ್ಟೇ ಅಲ್ಲದೆ, ಚುನಾವಣಾ ಕಣದಿಂದ ಯೂಸುಫ್ ವಜಾಗೊಳಿಸಲು ಮನವಿ ಮಾಡಲಾಗಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ದೂರು ನೀಡಲಾಗಿದೆ. SC ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ದೂರು ನೀಡಿದ್ದಾರೆ.

ಯೂಸುಫ್ ಬಾಬು ಚುನಾವಣಾ ಕಣದಿಂದ ನಿವೃತ್ತಿಗೊಳಿಸಲಿ. ಯೂಸುಫ್ ಬಾಬು ವಿರುದ್ಧ ಆಯೋಗಕ್ಕೆ ದೂರು ನೀಡಿದ್ದೇವೆ. ಬಿಜೆಪಿ ವಿರುದ್ಧ ಆರೋಪ ಮಾಡುವುದನ್ನ ಕಾಂಗ್ರೆಸ್ ನಿಲ್ಲಿಸಲಿ. ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್​ಗೆ ಸಂವಿಧಾನದ ಬಗ್ಗೆ ಗೌರವ ಇದ್ದರೆ ಕೂಡಲೇ ಅಭ್ಯರ್ಥಿ ಯೂಸುಫ್​​ ಬಾಬು ನಿವೃತ್ತಿಗೊಳಿಸಲಿ. ಯೂಸುಫ್ ವಿರುದ್ಧ ಕಾಂಗ್ರೆಸ್ ಪಕ್ಷ ಕ್ರಮ ತೆಗೆದುಕೊಳ್ಳಲಿ. ಯೂಸುಫ್​​ ಬಾಬುವನ್ನು ಪಕ್ಷದಿಂದ ವಜಾಗೊಳಿಸಬೇಕು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಆಗ್ರಹ ವ್ಯಕ್ತಪಡಿಸಿದ್ದಾರೆ.

ನಾನು ಡಿಕೆಶಿ ಅವರ ಶಿಷ್ಯ, ಅವರಿಗಾಗಿ ಪ್ರಾಣ ಕೊಡುವವನು: ಯೂಸುಫ್ ಬಾಬು ಕೆಜಿಎಫ್ ಬಾಬು ಬಹಳ ನೊಂದುಕೊಂಡಿದ್ದಾರೆ. ಅವರ ಫ್ಯಾಮಿಲಿ ವಿಚಾರದಲ್ಲಿ ಮಂತ್ರಿಗಳು ಮಾತಾಡಿದ್ದಾರೆ. ರಾಜಕಾರಣದಲ್ಲಿ ಕುಟುಂಬಗಳನ್ನ ತರಬಾರದು‌ ಎಂದು ಬೆಂಗಳೂರಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ ನೀಡಿದ್ದಾರೆ. ಬಾಬು ಮಾನಸಿಕವಾಗಿ ನೊಂದಿದ್ದಾರೆ, ಸ್ವಲ್ಪ ನೋವಾಗಿದೆ. ಚುನಾವಣೆಯನ್ನ ಎದುರಿಸುತ್ತಾರೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ನಾನು ಡಿಕೆಶಿ ಅವರ ಶಿಷ್ಯ, ಅವರಿಗಾಗಿ ಪ್ರಾಣ ಕೊಡುವವನು. ಡಿಕೆಶಿ ನನ್ನ ನಂಬಿ ಟಿಕೆಟ್ ನೀಡಿದ್ದಾರೆ, ನಂಬಿಕೆ ಉಳಿಸುತ್ತೇನೆ. ಮತದಾರರ ಕಾಲು ಬೇಕಾದ್ರೂ ಹಿಡಿದು ಗೆಲ್ಲುವೆ ಎಂದು ಪರಿಷತ್ ಕಾಂಗ್ರೆಸ್ ಅಭ್ಯರ್ಥಿ ಯೂಸುಫ್ ಬಾಬು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ವಿರುದ್ಧ ಟೀಕೆ ಮಾಡಿದ ಮುಸ್ಲಿಂ ನಾಯಕ ಎ ಅನ್ವರ್ ರಾಜಾರನ್ನು ಪಕ್ಷದಿಂದ ಹೊರಹಾಕಿದ ಎಐಎಡಿಎಂಕೆ

ಇದನ್ನೂ ಓದಿ: ರಂಗೇರಿದೆ ವಿಜಯಪುರ- ಬಾಗಲಕೋಟೆ ಪರಿಷತ್ ಚುನಾವಣೆ ಅಖಾಡ; ಕಾಂಗ್ರೆಸ್​ಗೆ ಬಂಡಾಯದ ಬಿಸಿ, ಬಿಜೆಪಿಗೆ ಗೆಲ್ಲೋ ತವಕ

Published On - 9:17 pm, Wed, 1 December 21

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ