ಕಾಂಗ್ರೆಸ್ ಸೇರ್ಪಡೆಯಾದ ಬಿಜೆಪಿ ಮಾಜಿ ಶಾಸಕ: ಕೇಸರಿ ಪಡೆಯ ಒಂದು ತಂಡ ಸಿನಿಮೀಯಲ್ಲಿ ರೀತಿಯಲ್ಲಿ ಮಾತುಕತೆ: ಡಿಕೆಶಿ ಬಾಂಬ್

ಬಿಜೆಪಿಯ ಪ್ರಮುಖ ನಾಯಕರು ಒಬ್ಬರಿಂದೊಬ್ಬರು ಕಾಂಗ್ರೆಸ್​ ಸೇರುತ್ತಿದ್ದಾರೆ. ಇದೀಗ ಮಾಜಿ ಶಾಸಕ ರಾಮಪ್ಪ ಲಮಾಣಿ ಅಧಿಕೃತವಾಗಿ ಕೈ ಹಿಡಿದರು. ಅಲ್ಲದೇ ಬಿಜೆಪಿಯ ಒಂದು ತಂಡ ಸಿನಿಮೀಯ ರೀತಿಯಲ್ಲಿ ಮಾತುಕತೆ ನಡೆಸಿದೆ ಎಂದು ಸ್ವತಃ ಕೆಪಿಸಿಸಿ ಅಧ್ಯಕ್ಷ ಹೊಸ ಬಾಂಬ್ ಸಿಡಿಸಿದ್ದಾರೆ. ಅಲ್ಲದೇ ಜಗದೀಶ್ ಶೆಟ್ಟರ್​ ಸಹ ಸ್ಫೋಟಕ ಹೇಳಿಕೆ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ಹಲ್​ ಚಲ್ ಎಬ್ಬಿಸಿದ್ದಾರೆ.

ಕಾಂಗ್ರೆಸ್ ಸೇರ್ಪಡೆಯಾದ ಬಿಜೆಪಿ ಮಾಜಿ ಶಾಸಕ: ಕೇಸರಿ ಪಡೆಯ ಒಂದು ತಂಡ ಸಿನಿಮೀಯಲ್ಲಿ ರೀತಿಯಲ್ಲಿ ಮಾತುಕತೆ: ಡಿಕೆಶಿ ಬಾಂಬ್
ರುದ್ರಪ್ಪ ಲಮಾಣಿ ಕಾಂಗ್ರೆಸ್ ಸೇರ್ಪಡೆ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Oct 12, 2023 | 1:58 PM

ಬೆಂಗಳೂರು, (ಅಕ್ಟೋಬರ್ 12): ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಮಾಜಿ ಶಾಸಕ ರಾಮಣ್ಣ ಲಮಾಣಿ ಅವರು ಬಿಜೆಪಿ(BJP) ತೊರೆದು ಕಾಂಗ್ರೆಸ್ (Congress)ಸೇರ್ಪಡೆಯಾದರು. ಇಂದು (ಅ.12) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್(DK Shivakumar) ಸಮ್ಮುಖದಲ್ಲಿ ಅಧಿಕೃತವಾಗಿ ಕೈ ಹಿಡಿದರು. ಈ ವೇಳೆ ಸಚಿವ ಹೆಚ್​.ಕೆ.ಪಾಟೀಲ್​​, ಶಾಸಕ ಲಕ್ಷ್ಮಣ ಸವದಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಉಪಸ್ಥಿತರಿದ್ದರು. ಇದೇ ವೇಳೆ ಮಾತನಾಡಿದ ಡಿಕೆ ಶಿವಕುಮಾರ್, ಕಾಂಗ್ರೆಸ್ ಪಕ್ಷ ಸೇರ್ಪಡೆಗೆ 42 ನಾಯಕರು ಅರ್ಜಿ ಹಾಕಿದ್ದಾರೆ. ನಂಬರ್ ಹೇಳಬಾರದು ಅಂದುಕೊಂಡಿದ್ದೆ, ಹೇಳುವ ಪರಿಸ್ಥಿತಿ ಬಂದಿದೆ ಎಂದು ಹೊಸ ಬಾಂಬ್ ಸಿಡಿಸಿದರು.

ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿ ವಿರೋಧಿಸಿ 42 ನಾಯಕರು ಕಾಂಗ್ರೆಸ್​ ಪಕ್ಷಕ್ಕೆ ಸೇರುತ್ತಿದ್ದಾರೆ. ಆಪ್​ನಿಂದ ಸ್ಪರ್ಧಿಸಿದ್ದ 100ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್​ ಸೇರಿದ್ದಾರೆ. ಬಿಜೆಪಿ ಒಂದು ಟೀಂ ಸಿನಿಮಾ ರೀತಿ ನಮ್ಮ ಜತೆ ಮಾತುಕತೆ ಮಾಡುತ್ತಿದ್ದಾರೆ ಎಂದು ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹಲ್ ಚಲ್​ ಎಬ್ಬಿಸಿದರು.

ಇದನ್ನೂ ಓದಿ: ಬಿಜೆಪಿಯ ಮತ್ತೆರಡು ವಿಕೆಟ್‌ ಪತನ, ಕೇಸರಿ ಪಡೆಗೆ ಸಿಂಹಸ್ವಪ್ನವಾಗಿ ಕಾಡುತ್ತಿರುವ ಜಗದೀಶ್ ಶೆಟ್ಟರ್

ರಾಮಪ್ಪ ಲಮಾಣಿ ಮಾತು

ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಮಾತನಾಡಿದ ರಾಮಪ್ಪ ಲಮಾಣಿ, ಯಾವುದೇ ಕಂಡೀಷನ್ ಇಲ್ಲದೆ ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ. ಜಗದೀಶ್ ಶೆಟ್ಟರ್ ಸಾಕಷ್ಟು ಮಾಜಿ ಶಾಸಕರಿಗೆ ಗಾಳ ಹಾಕಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಸಾಕಷ್ಟು ಮಂದಿಗೆ ಗಾಳ ಹಾಕಿದ್ದು, ರಾಜ್ಯದಲ್ಲಿ ಬಿಜೆಪಿ ಧೂಳಿಪಟ ಆಗಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಬಲಪಡಿಸಲು ನಾನು ಕೆಲಸ ಮಾಡುತ್ತೇನೆ ಎಂದರು.

ಹೊಸ ಬಾಂಬ್ ಸಿಡಿಸಿದ ಶೆಟ್ಟರ್

ಇನ್ನು ಇದೇ ವೇಳೆ ಮಾಜಿ ಸಿಎಂ, ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿ, ಕಾಂಗ್ರೆಸ್ ಸೇರ್ಪಡೆಯಾಗಿ ಎಂದು ಯಾರಿಗೂ ಒತ್ತಡ ಹಾಕುತ್ತಿಲ್ಲ. ಸ್ವಂತವಾಗಿ ವಾಲೆಂಟರಿಯಾಗಿ ಬಿಜೆಪಿ ನಾಯಕರು ನಮ್ಮನ್ನು ಸಂಪರ್ಕ ಮಾಡುತ್ತಿದ್ದಾರೆ. ಯಾರಿಗೂ ಯಾರೂ ಒತ್ತಡ ಹಾಕುತ್ತಿಲ್ಲ. ರಾಜ್ಯದಲ್ಲಿ ದೇಶದಲ್ಲಿ ರಾಜಕೀಯ ಧ್ರುವೀಕರಣ ಶುರುವಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ರಾಜಕೀಯ ಧ್ರುವೀಕರಣ ಆಗಲಿದೆ ಎಂದು ಹೇಳಿದರು.

ಆಪರೇಷನ್ ಹಸ್ತದಲ್ಲಿ ಜಗದೀಶ್ ಶೆಟ್ಟರ್ ಪಾತ್ರವೂ ಸಹ ಮಹತ್ವದಾಗಿದೆ. ರಾಮಪ್ಪ ಲಮಾಣಿ ಹಾಗೂ ಎಂಪಿ ಕುಮಾರಸ್ವಾಮಿ ಕಾಂಗ್ರೆಸ್​ಗೆ ಕರೆತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇವರು ಮಾತ್ರಲ್ಲದೇ ಲಿಂಗಾಯತ ಸಮುದಾಯದ ಪ್ರಮುಖ ನಾಯಕರು, ಬಿಜೆಪಿಯ ಮಾಜಿ ಶಾಸಕರಿಗೂ ಗಾಳ ಹಾಕಿದ್ದಾರೆ ಎಂದು ತಿಳಿದುಬಂದಿದೆ.​

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
‘ಈ ಸ್ಥಿತಿ ಬಂದಿದ್ದಕ್ಕೆ ​ ಜೈಲಿನಲ್ಲಿ ದರ್ಶನ್ ಸಾಕಷ್ಟು ನೋವಿನಲ್ಲಿದ್ದಾರೆ’
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಆಷಾಢ ಮಾಸದ ವಿಶೇಷ ರಾಶಿ ಭವಿಷ್ಯ 2024: ಯಾವ ರಾಶಿಗೆ ಏನು ಫಲ? ಇಲ್ಲಿದೆ ವಿವರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಈ ರಾಶಿಯವರು ಮೇಲಿದ ಬಿದ್ದು ಕಾಲು ನೋವು ಮಾಡಿಕೊಳ್ಳುವ ಸಂಭವವಿದೆ, ಎಚ್ಚರ
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಮಕ್ಕಳಿಗೆ ದೃಷ್ಠಿ ಬೊಟ್ಟುಇಡುವುದರ ಅರ್ಥವೇನು ಗೊತ್ತಾ?
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಹೊಸ ಫೋಲ್ಡ್​ ಫೋನ್ ಪ್ರಿ ಬುಕಿಂಗ್ ಆರಂಭಿಸಿದ ಸ್ಯಾಮ್​ಸಂಗ್
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಕಾಶಪ್ಪನವರ್ ಸಿಎಂ ಆಗಬೇಕೆಂದ ನಂದವಾಡಗಿ ವೀರಶೈವ ಲಿಂಗಾಯತ ಮಠದ ಸ್ವಾಮೀಜಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಹಾವೇರಿ ಉಪ ಚುನಾವಣೆಗಾಗಿ ಈಗಿಂದಲೇ ಕೆಲಸ ಶುರುಮಾಡಿದ್ದೇವೆ:ಸತೀಶ್ ಜಾರಕಿಹೊಳಿ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ಈ ನಟಿಯರು ಇಷ್ಟು ದಿನ ಯಾಕೆ ಸುಮ್ಮನಿದ್ರು? ರೇಣುಕಾ ಸ್ವಾಮಿ ತಂದೆ ಪ್ರಶ್ನೆ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ದರ್ಶನ್ ₹22 ಕೋಟಿ ಸಂಭಾವನೆ ಪಡೆಯೋದು ಕೇಳಿ ಶಾಕ್ ಆಯ್ತು: ಸರಿಗಮ ವಿಜಿ
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು
ಕುಡುಕ ಆಟೋರಿಕ್ಷಾ ಸೆಲ್ಫೀ ತೆಗೆಸಿಕೊಂಡ ಬಳಿಕ ಈಶ್ವರಪ್ಪ ಕುಡಿತ ಬಿಡು ಅಂದರು