ಕಾಂಗ್ರೆಸ್ ಸೇರ್ಪಡೆಯಾದ ಬಿಜೆಪಿ ಮಾಜಿ ಶಾಸಕ: ಕೇಸರಿ ಪಡೆಯ ಒಂದು ತಂಡ ಸಿನಿಮೀಯಲ್ಲಿ ರೀತಿಯಲ್ಲಿ ಮಾತುಕತೆ: ಡಿಕೆಶಿ ಬಾಂಬ್

ಬಿಜೆಪಿಯ ಪ್ರಮುಖ ನಾಯಕರು ಒಬ್ಬರಿಂದೊಬ್ಬರು ಕಾಂಗ್ರೆಸ್​ ಸೇರುತ್ತಿದ್ದಾರೆ. ಇದೀಗ ಮಾಜಿ ಶಾಸಕ ರಾಮಪ್ಪ ಲಮಾಣಿ ಅಧಿಕೃತವಾಗಿ ಕೈ ಹಿಡಿದರು. ಅಲ್ಲದೇ ಬಿಜೆಪಿಯ ಒಂದು ತಂಡ ಸಿನಿಮೀಯ ರೀತಿಯಲ್ಲಿ ಮಾತುಕತೆ ನಡೆಸಿದೆ ಎಂದು ಸ್ವತಃ ಕೆಪಿಸಿಸಿ ಅಧ್ಯಕ್ಷ ಹೊಸ ಬಾಂಬ್ ಸಿಡಿಸಿದ್ದಾರೆ. ಅಲ್ಲದೇ ಜಗದೀಶ್ ಶೆಟ್ಟರ್​ ಸಹ ಸ್ಫೋಟಕ ಹೇಳಿಕೆ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ಹಲ್​ ಚಲ್ ಎಬ್ಬಿಸಿದ್ದಾರೆ.

ಕಾಂಗ್ರೆಸ್ ಸೇರ್ಪಡೆಯಾದ ಬಿಜೆಪಿ ಮಾಜಿ ಶಾಸಕ: ಕೇಸರಿ ಪಡೆಯ ಒಂದು ತಂಡ ಸಿನಿಮೀಯಲ್ಲಿ ರೀತಿಯಲ್ಲಿ ಮಾತುಕತೆ: ಡಿಕೆಶಿ ಬಾಂಬ್
ರುದ್ರಪ್ಪ ಲಮಾಣಿ ಕಾಂಗ್ರೆಸ್ ಸೇರ್ಪಡೆ
Edited By:

Updated on: Oct 12, 2023 | 1:58 PM

ಬೆಂಗಳೂರು, (ಅಕ್ಟೋಬರ್ 12): ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಮಾಜಿ ಶಾಸಕ ರಾಮಣ್ಣ ಲಮಾಣಿ ಅವರು ಬಿಜೆಪಿ(BJP) ತೊರೆದು ಕಾಂಗ್ರೆಸ್ (Congress)ಸೇರ್ಪಡೆಯಾದರು. ಇಂದು (ಅ.12) ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಡಿಕೆ ಶಿವಕುಮಾರ್(DK Shivakumar) ಸಮ್ಮುಖದಲ್ಲಿ ಅಧಿಕೃತವಾಗಿ ಕೈ ಹಿಡಿದರು. ಈ ವೇಳೆ ಸಚಿವ ಹೆಚ್​.ಕೆ.ಪಾಟೀಲ್​​, ಶಾಸಕ ಲಕ್ಷ್ಮಣ ಸವದಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಉಪಸ್ಥಿತರಿದ್ದರು. ಇದೇ ವೇಳೆ ಮಾತನಾಡಿದ ಡಿಕೆ ಶಿವಕುಮಾರ್, ಕಾಂಗ್ರೆಸ್ ಪಕ್ಷ ಸೇರ್ಪಡೆಗೆ 42 ನಾಯಕರು ಅರ್ಜಿ ಹಾಕಿದ್ದಾರೆ. ನಂಬರ್ ಹೇಳಬಾರದು ಅಂದುಕೊಂಡಿದ್ದೆ, ಹೇಳುವ ಪರಿಸ್ಥಿತಿ ಬಂದಿದೆ ಎಂದು ಹೊಸ ಬಾಂಬ್ ಸಿಡಿಸಿದರು.

ಜೆಡಿಎಸ್​ ಹಾಗೂ ಬಿಜೆಪಿ ಮೈತ್ರಿ ವಿರೋಧಿಸಿ 42 ನಾಯಕರು ಕಾಂಗ್ರೆಸ್​ ಪಕ್ಷಕ್ಕೆ ಸೇರುತ್ತಿದ್ದಾರೆ. ಆಪ್​ನಿಂದ ಸ್ಪರ್ಧಿಸಿದ್ದ 100ಕ್ಕೂ ಹೆಚ್ಚು ಮಂದಿ ಕಾಂಗ್ರೆಸ್​ ಸೇರಿದ್ದಾರೆ. ಬಿಜೆಪಿ ಒಂದು ಟೀಂ ಸಿನಿಮಾ ರೀತಿ ನಮ್ಮ ಜತೆ ಮಾತುಕತೆ ಮಾಡುತ್ತಿದ್ದಾರೆ ಎಂದು ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಹಲ್ ಚಲ್​ ಎಬ್ಬಿಸಿದರು.

ಇದನ್ನೂ ಓದಿ: ಬಿಜೆಪಿಯ ಮತ್ತೆರಡು ವಿಕೆಟ್‌ ಪತನ, ಕೇಸರಿ ಪಡೆಗೆ ಸಿಂಹಸ್ವಪ್ನವಾಗಿ ಕಾಡುತ್ತಿರುವ ಜಗದೀಶ್ ಶೆಟ್ಟರ್

ರಾಮಪ್ಪ ಲಮಾಣಿ ಮಾತು

ಕಾಂಗ್ರೆಸ್ ಸೇರ್ಪಡೆಯಾದ ಬಳಿಕ ಮಾತನಾಡಿದ ರಾಮಪ್ಪ ಲಮಾಣಿ, ಯಾವುದೇ ಕಂಡೀಷನ್ ಇಲ್ಲದೆ ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ. ಜಗದೀಶ್ ಶೆಟ್ಟರ್ ಸಾಕಷ್ಟು ಮಾಜಿ ಶಾಸಕರಿಗೆ ಗಾಳ ಹಾಕಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಸಾಕಷ್ಟು ಮಂದಿಗೆ ಗಾಳ ಹಾಕಿದ್ದು, ರಾಜ್ಯದಲ್ಲಿ ಬಿಜೆಪಿ ಧೂಳಿಪಟ ಆಗಲಿದೆ. ರಾಜ್ಯದಲ್ಲಿ ಕಾಂಗ್ರೆಸ್ ಬಲಪಡಿಸಲು ನಾನು ಕೆಲಸ ಮಾಡುತ್ತೇನೆ ಎಂದರು.

ಹೊಸ ಬಾಂಬ್ ಸಿಡಿಸಿದ ಶೆಟ್ಟರ್

ಇನ್ನು ಇದೇ ವೇಳೆ ಮಾಜಿ ಸಿಎಂ, ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿ, ಕಾಂಗ್ರೆಸ್ ಸೇರ್ಪಡೆಯಾಗಿ ಎಂದು ಯಾರಿಗೂ ಒತ್ತಡ ಹಾಕುತ್ತಿಲ್ಲ. ಸ್ವಂತವಾಗಿ ವಾಲೆಂಟರಿಯಾಗಿ ಬಿಜೆಪಿ ನಾಯಕರು ನಮ್ಮನ್ನು ಸಂಪರ್ಕ ಮಾಡುತ್ತಿದ್ದಾರೆ. ಯಾರಿಗೂ ಯಾರೂ ಒತ್ತಡ ಹಾಕುತ್ತಿಲ್ಲ. ರಾಜ್ಯದಲ್ಲಿ ದೇಶದಲ್ಲಿ ರಾಜಕೀಯ ಧ್ರುವೀಕರಣ ಶುರುವಾಗಿದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ರಾಜಕೀಯ ಧ್ರುವೀಕರಣ ಆಗಲಿದೆ ಎಂದು ಹೇಳಿದರು.

ಆಪರೇಷನ್ ಹಸ್ತದಲ್ಲಿ ಜಗದೀಶ್ ಶೆಟ್ಟರ್ ಪಾತ್ರವೂ ಸಹ ಮಹತ್ವದಾಗಿದೆ. ರಾಮಪ್ಪ ಲಮಾಣಿ ಹಾಗೂ ಎಂಪಿ ಕುಮಾರಸ್ವಾಮಿ ಕಾಂಗ್ರೆಸ್​ಗೆ ಕರೆತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಇವರು ಮಾತ್ರಲ್ಲದೇ ಲಿಂಗಾಯತ ಸಮುದಾಯದ ಪ್ರಮುಖ ನಾಯಕರು, ಬಿಜೆಪಿಯ ಮಾಜಿ ಶಾಸಕರಿಗೂ ಗಾಳ ಹಾಕಿದ್ದಾರೆ ಎಂದು ತಿಳಿದುಬಂದಿದೆ.​

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us