ಬಿಜೆಪಿ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ, ಸಿಎಂ ಬೊಮ್ಮಾಯಿ ರಾಜೀನಾಮೆ ನೀಡಲಿ: ಸುರ್ಜೇವಾಲ ಆಗ್ರಹ

ಬಿಜೆಪಿ ಶಾಸಕ ಪುತ್ರನ ಮನೆ, ಕಚೇರಿಯಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗಿದೆ. ಸಿಎಂ ಬೊಮ್ಮಾಯಿ ಸರ್ಕಾರ ಭ್ರಷ್ಟಾಚಾರದಲ್ಲೇ ಮುಳುಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್​ದೀಪ್​ ಸಿಂಗ್​ ಸುರ್ಜೇವಾಲ ಹೇಳಿದರು.

ಬಿಜೆಪಿ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ಮುಳುಗಿದೆ, ಸಿಎಂ ಬೊಮ್ಮಾಯಿ ರಾಜೀನಾಮೆ ನೀಡಲಿ: ಸುರ್ಜೇವಾಲ ಆಗ್ರಹ
ಸಿಎಂ ಬೊಮ್ಮಾಯಿ, ಸುರ್ಜೇವಾಲ

Updated on: Mar 03, 2023 | 2:54 PM

ಉಡುಪಿ: ಬಿಜೆಪಿ ಶಾಸಕ ಪುತ್ರನ ಮನೆ, ಕಚೇರಿಯಲ್ಲಿ ಕೋಟಿ ಕೋಟಿ ಹಣ ಪತ್ತೆಯಾಗಿದೆ. ಸಿಎಂ ಬೊಮ್ಮಾಯಿ ಸರ್ಕಾರ ಭ್ರಷ್ಟಾಚಾರದಲ್ಲೇ ಮುಳುಗಿದೆ. ನೈತಿಕ ಹೊಣೆ ಹೊತ್ತು ಸಿಎಂ ಬೊಮ್ಮಾಯಿ ರಾಜೀನಾಮೆ ನೀಡಬೇಕು ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣ್​ದೀಪ್​ ಸಿಂಗ್​ ಸುರ್ಜೇವಾಲ (randeep singh surjewala) ಆಗ್ರಹಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, 40 ಲಕ್ಷ ರೂ. ಪಡೆಯುವಾಗ ಬಿಜೆಪಿ ಶಾಸಕರ ಪುತ್ರ ಸಿಕ್ಕಿಬಿದ್ದಿದ್ದಾನೆ. 24 ಗಂಟೆಯೊಳಗೆ ಮನೆಯಲ್ಲಿ 6 ಕೋಟಿ ರೂಪಾಯಿ ಪತ್ತೆಯಾಗಿದೆ. ಮೈಸೂರು ಸ್ಯಾಂಡಲ್ ಸುವಾಸನೆಯನ್ನು ಭ್ರಷ್ಟ ಮಾಡಿಬಿಟ್ಟಿದ್ದಾರೆ. ಈ ಎಲ್ಲಾ ಭ್ರಷ್ಟಾಚಾರದ ಹಣ ಎಲ್ಲಿಗೆ ಹೋಗಿದೆ. ಕರ್ನಾಟಕದಲ್ಲಿ ಲೂಟಿ ಹೊಡೆದಿರುವ ಹಣಕ್ಕೆ ಯಾರು ಜವಾಬ್ದಾರಿ? ಲೂಟಿ ಹೊಡೆದ ಹಣದಲ್ಲಿ ಸಿಎಂ, ಸಚಿವರಿಗೆ ಎಷ್ಟು ಪಾಲು ಇದೆ? ಕೈಗಾರಿಕಾ ಸಚಿವ ಮುರುಗೇಶ್​ ನಿರಾಣಿ ತಲೆದಂಡ ಆಗಿಲ್ಲ ಯಾಕೆ? ಬಿಜೆಪಿ ಶಾಸಕ ವಿರೂಪಾಕ್ಷಪ್ಪ ತಲೆಮರೆಸಿಕೊಳ್ಳಲು ಬಿಟ್ಟಿದ್ಯಾಕೆ? ಈ ಭ್ರಷ್ಟಾಚಾರದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪಾತ್ರ ಏನು? ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮೌನವಾಗಿರುವು ಯಾಕೆ ಎಂದು ಸಾಲು ಸಾಲು ಪ್ರಶ್ನೆ ಮಾಡಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಈ ಬಗ್ಗೆ ಮಾತನಾಡುತ್ತಿಲ್ಲ ಯಾಕೆ? ಬಿಜೆಪಿ ಅಧ್ಯಕ್ಷ ನಡ್ದಾ, ಕೇಂದ್ರ ಸಚಿವ ಅಮಿತ್ ಶಾ ಅವರೇ ಎಲ್ಲಿದ್ದೀರಿ? ಇಡಿ, ಸಿಬಿಐ ಅಧಿಕಾರಿಗಳು ಯಾವಾಗ ಕರ್ನಾಟಕಕ್ಕೆ ಬರುತ್ತಾರಾ? ಶಾಸಕರು, ಸಚಿವರು, ಸಿಎಂ ನಿವಾಸ ಮೇಲೆ ಯಾವಾಗ ದಾಳಿ ಮಾಡ್ತೀರಿ? ಕರ್ನಾಟಕ ಜನರ ಪರವಾಗಿ ಈ ಪ್ರಶ್ನೆಗಳನ್ನು ಕೇಳುತ್ತಿದ್ದೇನೆ ಎಂದು ಹೇಳಿದರು.

ಇದನ್ನೂ ಓದಿ: ಶಾಸಕ ಮಾಡಾಳ್​ ಪುತ್ರ ಲಂಚ ಪಡೆಯುವಾಗ ಸಿಕ್ಕಿಬಿದ್ದಿದ್ದೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರಕ್ಕೆ ಸಾಕ್ಷಿ: ಬೊಮ್ಮಾಯಿಗೆ ತಿವಿದ ಸಿದ್ದಾರಾಮಯ್ಯ

ಶಾಸಕ ಮಾಡಾಳ್​ ವಿರೂಪಾಕ್ಷಪ್ಪ ಬಂಧಿಸಬೇಕು: ಸುರ್ಜೇವಾಲ ಆಗ್ರಹ 

ಇನ್ನು ಈ ಪ್ರಕರಣದಲ್ಲಿ ಶಾಸಕ ಮಾಡಾಳ್​ ವಿರೂಪಾಕ್ಷಪ್ಪ ಬಂಧಿಸಬೇಕು ಎಂದು ಸುರ್ಜೇವಾಲ ಆಗ್ರಹಿಸಿದ್ದಾರೆ. ಬೊಮ್ಮಾಯಿ ಮೂಗಿನ ಕೆಳಗೆ ನಡೆದ ಭ್ರಷ್ಟಾಚಾರ ಬಯಲಾಗಿದೆ. ಒಳಚರಂಡಿ ಮತ್ತು ನೀರು ಸರಬರಾಜು ಬೋರ್ಡ್ ನಲ್ಲಿ ಎಷ್ಟು ಸಾವಿರ ಕೋಟಿ ಈವರೆಗೆ ಲೂಟಿ ಮಾಡಿದ್ದೀರಿ? ಬೊಮ್ಮಾಯಿ ಸರ್ಕಾರದ ಭ್ರಷ್ಟಾಚಾರ ವಿಶ್ವವಿಖ್ಯಾತಿಯನ್ನು ಪಡೆದಿದೆ. ಭ್ರಷ್ಟಾಚಾರದ ಹಣದಲ್ಲಿ ಯಾರಿಗೆಲ್ಲ ಪಾಲು ಇದೆ ಎಂಬುದನ್ನು ಹೇಳಲಿ. ರಾಜ್ಯದ ಹೈಕೋರ್ಟ್ ಸಿಜೆ ನೇತೃತ್ವದಲ್ಲಿ ಈ ಬಗ್ಗೆ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಲೋಕಾಯುಕ್ತ ದಾಳಿಯಿಂದ ಬಿಜೆಪಿ ಭ್ರಷ್ಟಾಚಾರಕ್ಕೆ ಸಾಕ್ಷಿ ಸಿಕ್ಕಿದೆ; ಡಿಕೆ ಶಿವಕುಮಾರ್

2018ರಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಮನೆಯ ಮೇಲೆ ಐಟಿ ದಾಳಿ 

2018ರ ವಿಧಾನ ಸಭೆ ಚುನಾವಣೆ ವೇಳೆಯಲ್ಲಿಯೇ ಶಾಸಕ‌ ಮಾಡಾಳ್ ವಿರೂಪಾಕ್ಷಪ್ಪ ಮನೆಯ ಮೇಲೆ ಐಟಿ ದಾಳಿ ಆಗಿತ್ತು. ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಚನ್ನೇಶಪುರ ಗ್ರಾಮದ ಮನೆ ಸೇರಿದಂತೆ ಹಲವಾರು ಕಡೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದರು. ಈಗಲೂ ಸಹ ವಿಧಾನ ಸಭೆ ಚುನಾವಣೆ ಹತ್ತಿರ ಇರುವಾಗಲೇ ಲೋಕಾಯುಕ್ತ ದಾಳಿ ಮಾಡಿದ್ದಾರೆ. ಎರಡು ಸಲ ಶಾಸಕರಾಗಿರುವ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ಐಟಿ ಹಾಗೂ ಲೋಕಾಯುಕ್ತ ದಾಳಿ ಬಿಸಿ ತಟ್ಟಿದೆ. ಈ ಸಲ ಮಾತ್ರ ಪುತ್ರ ‌ಲಂಚ ಸ್ವೀಕರಿಸುವಾಗ ಲೋಕಾಯುಕ್ತರ ಬಲೆಗೆ ಬಿದಿದ್ದಾರೆ. ಆಪ್ತ ವಲಯದಲ್ಲಿಯೇ ಶಾಸಕ ಮಾಡಾಳ್ ಟಾರ್ಗೆಟ್ ಆಗಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಕ್ ಮಾಡಿ.

Published On - 2:54 pm, Fri, 3 March 23

Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
Follow Us