AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯಸಭಾ ಚುನಾವಣೆ: ಮಹಾರಾಷ್ಟ್ರಕ್ಕೆ ಅಶ್ವಿನಿ ವೈಷ್ಣವ್, ಕರ್ನಾಟಕಕ್ಕೆ ಕಿಶನ್ ರೆಡ್ಡಿಯ​​ನ್ನು ಉಸ್ತುವಾರಿಯಾಗಿ ನೇಮಿಸಿದ ಬಿಜೆಪಿ

ಹರ್ಯಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಜಯ್ ಮಾಕೆನ್ ಅವರನ್ನು ಆಯ್ಕೆ ಮಾಡುವಷ್ಟು ಬಲವಿದೆ. ಕಾಂಗ್ರೆಸ್‌ನ ಮಾಜಿ ನಾಯಕ ವಿನೋದ್ ಶರ್ಮಾ ಅವರ ಪುತ್ರ ಕಾರ್ತಿಕೇಯ ಶರ್ಮಾ ಕೂಡಾ ಕಣದಲ್ಲಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಹೆಚ್ಚುವರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

ರಾಜ್ಯಸಭಾ ಚುನಾವಣೆ: ಮಹಾರಾಷ್ಟ್ರಕ್ಕೆ ಅಶ್ವಿನಿ ವೈಷ್ಣವ್, ಕರ್ನಾಟಕಕ್ಕೆ ಕಿಶನ್ ರೆಡ್ಡಿಯ​​ನ್ನು ಉಸ್ತುವಾರಿಯಾಗಿ ನೇಮಿಸಿದ ಬಿಜೆಪಿ
ಅಶ್ವಿನಿ ವೈಷ್ಣನ್- ಕಿಶನ್ ರೆಡ್ಡಿ
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on: Jun 01, 2022 | 7:09 PM

ದೆಹಲಿ: ಮುಂಬರುವ ರಾಜ್ಯಸಭಾ ಚುನಾವಣೆಗೆ (Rajya Sabha Election) ಬಿಜೆಪಿ (BJP) ಉಸ್ತುವಾರಿಗಳನ್ನು ನೇಮಿಸಿದ್ದು, ರಾಜಸ್ಥಾನಕ್ಕೆ ರಾಜ್ಯಸಭಾ ಚುನಾವಣೆ ಉಸ್ತುವಾರಿಯಾಗಿ ನರೇಂದ್ರ ಸಿಂಗ್ ತೋಮರ್, ಹರ್ಯಾಣಕ್ಕೆ ಗಜೇಂದ್ರ ಸಿಂಗ್ ಶೇಖಾವತ್, ಕರ್ನಾಟಕಕ್ಕೆ ಜಿ ಕಿಶನ್ ರೆಡ್ಡಿ (G Kishan Reddy) ಮತ್ತು ಮಹಾರಾಷ್ಟ್ರಕ್ಕೆ ಅಶ್ವಿನಿ ವೈಷ್ಣವ್ ಅವರನ್ನು ನೇಮಿಸಲಾಗಿದೆ. ರಾಜ್ಯಸಭೆಯ 57 ಸ್ಥಾನಗಳಿಗೆ ಜೂನ್ 10 ರಂದು ಮತದಾನ ನಡೆಯಲಿದೆ. ರಾಜಸ್ಥಾನದ ಸ್ಪರ್ಧೆಯು ಅತ್ಯಂತ ರೋಚಕವಾಗಿದೆ ಎಂದು ಊಹಿಸಲಾಗಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್ ಪಕ್ಷವು ಗಾಂಧಿ ನಿಷ್ಠ ರಣದೀಪ್ ಸಿಂಗ್ ಸುರ್ಜೆವಾಲಾ, ಪ್ರಮೋದ್ ತಿವಾರಿ ಮತ್ತು ಮುಕುಲ್ ವಾಸ್ನಿಕ್ ಅವರನ್ನು ಕಣಕ್ಕಿಳಿಸಿದೆ. ಇತ್ತ ಕಾಂಗ್ರೆಸ್ ಪಕ್ಷವು ಎಲ್ಲಾ ಮೂರು ಸ್ಥಾನಗಳನ್ನು ಗೆಲ್ಲುತ್ತದೆ ಎಂದು ಗೆಹ್ಲೋಟ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಜಸ್ಥಾನ ವಿಧಾನಸಭೆಯಲ್ಲಿ ಕಾಂಗ್ರೆಸ್ 108 ಶಾಸಕರನ್ನು ಹೊಂದಿದ್ದು, ಬಿಜೆಪಿ 71 ಶಾಸಕರನ್ನು ಹೊಂದಿದೆ.

ಹರ್ಯಾಣದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಅಜಯ್ ಮಾಕೆನ್ ಅವರನ್ನು ಆಯ್ಕೆ ಮಾಡುವಷ್ಟು ಬಲವಿದೆ. ಕಾಂಗ್ರೆಸ್‌ನ ಮಾಜಿ ನಾಯಕ ವಿನೋದ್ ಶರ್ಮಾ ಅವರ ಪುತ್ರ ಕಾರ್ತಿಕೇಯ ಶರ್ಮಾ ಕೂಡಾ ಕಣದಲ್ಲಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಹೆಚ್ಚುವರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಕರ್ನಾಟಕದಲ್ಲಿ ಬಿಜೆಪಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ನಟ ಜಗ್ಗೇಶ್ ಅವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್ ಜೈರಾಮ್ ರಮೇಶ್ ಮತ್ತು ಮನ್ಸೂರ್ ಅಲಿ ಖಾನ್ ಅವರನ್ನು ಕರ್ನಾಟಕದಿಂದ ಕಣಕ್ಕಿಳಿಸಿದೆ.

ಮಹಾರಾಷ್ಟ್ರದಲ್ಲಿ ಮಹಾ ವಿಕಾಸ್ ಅಘಾಡಿ (ಎಂವಿಎ) ಯ ಮೂರು ಘಟಕ ಪಕ್ಷಗಳು ಕಾಂಗ್ರೆಸ್ ಅಭ್ಯರ್ಥಿ ಇಮ್ರಾನ್ ಪ್ರತಾಪ್‌ಗಢಿ ಅವರೊಂದಿಗೆ ಅತೃಪ್ತವಾಗಿವೆ ಎಂದು ವರದಿಯಾಗಿದೆ. ಬಿಜೆಪಿ ರಾಜ್ಯಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳಾಗಿ ಪಿಯೂಷ್ ಗೋಯಲ್, ಹಿರಿಯ ನಾಯಕರಾದ ಅನಿಲ್ ಬೋಂಡೆ ಮತ್ತು ಧನಂಜಯ್ ಮಹಾದಿಕ್ ಅವರನ್ನು ಕಣಕ್ಕಿಳಿಸಿದೆ.

ದೇಶದ ಇತರ ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿಇಲ್ಲಿ ಕ್ಲಿಕ್ ಮಾಡಿ

ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್