AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದತ್ತ ಚಿತ್ತ ಹರಿಸಿದ ಬಿಜೆಪಿ ಹೈಕಮಾಂಡ್​, ಓಬಿಸಿ ನಾಯಕರ ಜತೆ ಚರ್ಚೆ ನಡೆಸಿದ್ದೇನು?

ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ ಸೈಲೆಂಟ್ ಆಗಿದ್ದ ಬಿಜೆಪಿ ಹೈಕಮಾಂಡ್ , ಇದೀಗ ಮುಂಬರುವ ಲೋಕಸಭಾ ಚುನಾವಣೆಗೆ ತಯಾರಿ ನಡೆಸಿದೆ. ಇದಕ್ಕೆ ಪೂರಕವೆಂಬಂತೆ ಕರ್ನಾಟಕದ ಓಬಿಸಿ ನಾಯಕರನ್ನು ದೆಹಲಿಗೆ ಕರೆಸಿಕೊಂಡು ಮಹತ್ವದ ಮಾತುಕತೆ ನಡೆಸಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಹಾಗಾದ್ರೆ, ಸಭೆಯಲ್ಲಿ ಏನೆಲ್ಲಾ ಚರ್ಚೆಯಾಗಿದೆ ಎನ್ನುವ ವಿವರ ಇಲ್ಲಿದೆ.

ಕರ್ನಾಟಕದತ್ತ ಚಿತ್ತ ಹರಿಸಿದ ಬಿಜೆಪಿ ಹೈಕಮಾಂಡ್​, ಓಬಿಸಿ ನಾಯಕರ ಜತೆ ಚರ್ಚೆ ನಡೆಸಿದ್ದೇನು?
ಬಿಜೆಪಿ
TV9 Web
| Edited By: |

Updated on: Nov 03, 2023 | 8:01 AM

Share

ನವದೆಹಲಿ, (ನವೆಂಬರ್ 03): ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ (Karnataka Assembly Elections 2023) ಹೀನಾಯ ಸೋಲಿನ ಬಳಿಕ ಸೈಲೆಂಟ್ ಆಗಿದ್ದ ಬಿಜೆಪಿ ಹೈಕಮಾಂಡ್ (BJP High command) 5 ತಿಂಗಳ ನಂತರ ರಾಜ್ಯದತ್ತ ಚಿತ್ತ ಹರಿಸಿದೆ. ವಿಪಕ್ಷ ನಾಯಕನ ಆಯ್ಕೆ‌, ನೂತನ ರಾಜ್ಯಾಧ್ಯಕ್ಷರ ನೇಮಕ ವಿಳಂಬವಾಗುತ್ತಿದೆ ಎಂಬ ಆರೋಪದ ನಡುವೆ ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆಗಳು ನಡೆದಿವೆ. ನಿನ್ನೆ(ನವೆಂಬರ್ 02) ರಾಜ್ಯ ಬಿಜೆಪಿ ಒಬಿಸಿ ನಾಯಕರೊಂದಿಗೆ ಬಿಜೆಪಿ ಹೈಕಮಾಂಡ್ ನಾಯಕರು ದೆಹಲಿಯಲ್ಲಿ ಮಹತ್ವದ ಚರ್ಚೆ ನಡೆಸಿದ್ದಾರೆ. ಹೈಕಮಾಂಡ್ ಬುಲಾವ್ ಮೇರೆಗೆ ದೆಹಲಿಗೆ ತೆರಳಿದ್ದ ಕೆ.ಎಸ್.ಈಶ್ವರಪ್ಪ, ಕೋಟ ಶ್ರೀನಿವಾಸ್ ಪೂಜಾರಿ, ಸಂಸದ ಪಿ.ಸಿ.ಮೋಹನ್ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನು ಭೇಟಿಯಾಗಿ ಸುಮಾರು ಒಂದೂವರೆ ಗಂಟೆ ಕಾಲ ಸಮಾಲೋಚನೆ ನಡೆಸಿದ್ದಾರೆ.

ನಡ್ಡಾ ಜೊತೆಗೆ ನಡೆದ ಸಭೆಯಲ್ಲಿ ಪ್ರಮುಖವಾಗಿ ಕಾಂಗ್ರೆಸ್ ಪಕ್ಷದ ಜಾತಿ ಗಣತಿ ಅಸ್ತ್ರದ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ. ಇದೆ ತಿಂಗಳು ಸಿದ್ದವಾಗಲಿರುವ ಜಾತಿಗಣತಿ ವರದಿಯ ಸಾಧಕ ಬಾಧಕಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ. ಜಾತಿ ಗಣತಿ ಪ್ರಕಟಕ್ಕೆ ಮುಂದುವರೆದ ಜಾತಿಗಳು ವಿರೋಧ ವ್ಯಕ್ತಪಡಿಸುತ್ತಿವೆ. ಆದ್ರೆ, ಜಾತಿಗಣತಿಯಿಂದ ಒಬಿಸಿ ಸಮುದಾಯಕ್ಕೆ ಲಾಭ ಆಗುವುದರಿಂದ ರಾಜ್ಯದಲ್ಲಿ ಬಿಜೆಪಿ ನಿಲುವು ಏನಾಗಿರಬೇಕು ಎಂಬ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಡಿಕೆ ಶಿವಕುಮಾರ್​ ಉಪಟಳಕ್ಕೆ ಕಡಿವಾಣ ಹಾಕಲು ಡಿನ್ನರ್ ಮೀಟಿಂಗ್: ಬಿಎಸ್​ ಯಡಿಯೂರಪ್ಪ

ಕಳೆದ ವಾರ ಮಾಜಿ ಸಿಎಂ ಡಿ.ವಿ. ಸದಾನಂದ ಗೌಡರನ್ನು ದೆಹಲಿಗೆ ಕರೆಸಿಕೊಂಡಿದ್ದ ಬಿಜೆಪಿ ಹೈಕಮಾಂಡ್, ಕೊನೆಯ ಕ್ಷಣದಲ್ಲಿ ಭೇಟಿ ಮಾಡದೆ ವಾಪಸ್ ಕಳುಹಿಸಿತ್ತು. ಈ ಬಾರಿ ಪಕ್ಷದ ಓಬಿಸಿ ಸಂಘಟನೆ ಬಗ್ಗೆ ಮಾತುಕತೆಗಾಗಿ ಮೂವರನ್ನು ಕರೆಸಿಕೊಂಡು ರಾಜ್ಯ ರಾಜಕಾರಣದ ಬಗ್ಗೆ ಮಹತ್ವದ ಚರ್ಚೆಗಳು ಮಾಡಿದೆ. ಅಲ್ಲದೇ ನಾಯಕರಿಂದ ರಾಜ್ಯದ ರಾಜಕೀಯ ವಿದ್ಯಾಮಾನ ಹಾಗೂ ಪಕ್ಷದಲ್ಲಿನ ಬೆಳವಣಿಗೆಗಳ ಬಗ್ಗೆ ಮಾಹಿತಿ ಪಡೆದುಕೊಂಡಿದೆ ಎನ್ನಲಾಗಿದೆ. ಇನ್ನು ಇದೇ ವೇಳೆ ಮುಂದೆ ಲೋಕಸಭಾ ಚುನಾವಣೆ ಬರುತ್ತಿರುವುದರಿಂದ ಓಬಿಸಿ ನಾಯಕರಿಗೆ ಕೆಲ ಸಲಹೆ ಸೂಚನೆಗಳನ್ನು ನೀಡಿದ್ದಾರೆ ಎನ್ನಲಾಗಿದೆ.

ಒಟ್ಟಿನಲ್ಲಿ ಜಾತಿಗಣತಿ ವರದಿ ಬಿಡುಗಡೆ ಮೂಲಕ ಒಬಿಸಿ ಸಮುದಾಯವನ್ನು ತನ್ನತ್ತ ಸೆಳೆಯಲು ಕಾಂಗ್ರೆಸ್ ಪ್ಲ್ಯಾನ್ ಮಾಡಿದ್ರೆ, ಇತ್ತ ಕಾಂತರಾಜು ವರದಿಗೆ ಮುಂದುವರಿದ ಜಾತಿಗಳಿಂದ ವಿರೋಧ ವ್ಯಕ್ತವಾಗಿದೆ. ಅಂತಿಮವಾಗಿ ಸರ್ಕಾರದ ನಿಲುವು ಏನಿರುತ್ತೆ ಎನ್ನುವುದೇ ಕುತೂಹಲ.

ಇನ್ನಷ್ಟು ರಾಜಕೀಯ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ಸವದತ್ತಿ ಯಲ್ಲಮ್ಮನ ಜಾತ್ರೆಗೆ ಜನಸ್ತೋಮ!
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ