AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಬೇಡಿಕೆ ತಿಳಿಸಿ; ಚುನಾವಣಾ ಪ್ರಣಾಳಿಕೆಗೆ ಸಾರ್ವಜನಿಕರ ಅಭಿಪ್ರಾಯ ಕೋರಿದ ಬಿಜೆಪಿ

ಸಲಹೆಗಳನ್ನು ಭರ್ತಿ ಮಾಡಲು ಗೂಗಲ್​ ಲಿಂಕ್ ಅನ್ನೂ ಹಂಚಿಕೊಂಡಿದ್ದು, ಸಮೃದ್ಧ ಕರ್ನಾಟಕಕ್ಕಾಗಿ ಒಂದಾಗೋಣ ಎಂದು ಕರೆ ನೀಡಿದ್ದಾರೆ.

ನಿಮ್ಮ ಬೇಡಿಕೆ ತಿಳಿಸಿ; ಚುನಾವಣಾ ಪ್ರಣಾಳಿಕೆಗೆ ಸಾರ್ವಜನಿಕರ ಅಭಿಪ್ರಾಯ ಕೋರಿದ ಬಿಜೆಪಿ
ಬಿಜೆಪಿ
Ganapathi Sharma
|

Updated on: Mar 03, 2023 | 7:41 PM

Share

ಬೆಂಗಳೂರು: ಚುನಾವಣಾ ಪ್ರಣಾಳಿಕೆ ಸಿದ್ಧತೆ ಕಾರ್ಯವನ್ನು ಚುರುಕುಗೊಳಿಸಿರುವ ಬಿಜೆಪಿ (BJP) ಇದೀಗ ಸಾರ್ವಜನಿಕರ ಅಭಿಪ್ರಾಯ ಕೋರಿದೆ. ಜತೆಗೆ ಪ್ರಣಾಳಿಕೆಗೆ ಸಲಹೆಗಳನ್ನು ಸ್ವೀಕರಿಸುವುದಕ್ಕಾಗಿ ಶನಿವಾರ ಬೆಂಗಳೂರಿನಲ್ಲಿ ಸಭೆಯನ್ನೂ ಆಯೋಜಿಸಿದೆ. ಸಮೃದ್ಧ ಕರ್ನಾಟಕ ನಿರ್ಮಾಣಕ್ಕಾಗಿ ಶಿಕ್ಷಣ ಮತ್ತು ಕೌಶಲ ಕ್ಷೇತ್ರದವರು ನಿಮ್ಮ ಅಮೂಲ್ಯ ಸಲಹೆಗಳನ್ನು ಹಂಚಿಕೊಳ್ಳಬೇಕು ಎಂದು ಉನ್ನತ ಶಿಕ್ಷಣ ಸಚಿವ ಸಿಎನ್​ ಅಶ್ವತ್ಥನಾರಾಯಣ (CN Ashwath Narayan) ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಜತೆಗೆ, ಸಲಹೆಗಳನ್ನು ಭರ್ತಿ ಮಾಡಲು ಗೂಗಲ್​ ಲಿಂಕ್ ಅನ್ನೂ ಹಂಚಿಕೊಂಡಿದ್ದು, ಸಮೃದ್ಧ ಕರ್ನಾಟಕಕ್ಕಾಗಿ ಒಂದಾಗೋಣ ಎಂದು ಕರೆ ನೀಡಿದ್ದಾರೆ.

ಪ್ರಣಾಳಿಕೆ ಸಿದ್ಧತೆಗಾಗಿ ಸಮಾಲೋಚನೆ ನಡೆಸಲು ರಾಜಭವನ ರಸ್ತೆಯ ‘ದಿ ಕ್ಯಾಪಿಟಲ್ ಹೋಟೆಲ್​’ನಲ್ಲಿ ಬಿಜೆಪಿ ಶನಿವಾರ ಸಂಜೆ 5.30ಕ್ಕೆ ಸಭೆ ಆಯೋಜಿಸಿದೆ. ಬಿಜೆಪಿಯ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಚಿವರಾದ ಕೆ. ಸುಧಾಕರ್, ಅಶ್ವತ್ಥನಾರಾಯಣ, ಬಿಸಿ ನಾಗೇಶ್ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಕ್ಷೇತ್ರಗಳ ಪರಿಣತರೂ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: Amit Shah: ನಿಮ್ಮ ಮತ ಪಿಎಫ್​ಐ ನಿಷೇಧಿಸಿದ ಬಿಜೆಪಿಗೋ, ಭಯೋತ್ಪಾದನೆ ಬೆಂಬಲಿಸುವ ಕಾಂಗ್ರೆಸ್​ಗೋ; ಅಮಿತ್ ಶಾ

ರಾಜ್ಯದಲ್ಲಿ ಭರ್ಜರಿಯಾಗಿ ಚುನಾವಣಾ ಪ್ರಚಾರ ಆರಂಭಿಸಿರುವ ಬಿಜೆಪಿ ಇದೀಗ ಪ್ರಣಾಳಿಕೆ ತಯಾರಿ ಪ್ರಕ್ರಿಯೆಯಲ್ಲಿಯೂ ಆಯಾ ಕ್ಷೇತ್ರಗಳ ತಜ್ಞರು, ಸಾರ್ವಜನಿಕರನ್ನು ಸೇರಿಸಿಕೊಳ್ಳುವ ಮೂಲಕ ಜನರನ್ನು ಸೆಳೆಯಲು ಯತ್ನಿಸುತ್ತಿದೆ.

ಈ ಮಧ್ಯೆ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸಹ ಪದೇ ಪದೇ ರಾಜ್ಯಕ್ಕೆ ಭೇಟಿ ನೀಡಿ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ