AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಬೇಡಿಕೆ ತಿಳಿಸಿ; ಚುನಾವಣಾ ಪ್ರಣಾಳಿಕೆಗೆ ಸಾರ್ವಜನಿಕರ ಅಭಿಪ್ರಾಯ ಕೋರಿದ ಬಿಜೆಪಿ

ಸಲಹೆಗಳನ್ನು ಭರ್ತಿ ಮಾಡಲು ಗೂಗಲ್​ ಲಿಂಕ್ ಅನ್ನೂ ಹಂಚಿಕೊಂಡಿದ್ದು, ಸಮೃದ್ಧ ಕರ್ನಾಟಕಕ್ಕಾಗಿ ಒಂದಾಗೋಣ ಎಂದು ಕರೆ ನೀಡಿದ್ದಾರೆ.

ನಿಮ್ಮ ಬೇಡಿಕೆ ತಿಳಿಸಿ; ಚುನಾವಣಾ ಪ್ರಣಾಳಿಕೆಗೆ ಸಾರ್ವಜನಿಕರ ಅಭಿಪ್ರಾಯ ಕೋರಿದ ಬಿಜೆಪಿ
ಬಿಜೆಪಿ
ಗಣಪತಿ ಶರ್ಮಾ
|

Updated on: Mar 03, 2023 | 7:41 PM

Share

ಬೆಂಗಳೂರು: ಚುನಾವಣಾ ಪ್ರಣಾಳಿಕೆ ಸಿದ್ಧತೆ ಕಾರ್ಯವನ್ನು ಚುರುಕುಗೊಳಿಸಿರುವ ಬಿಜೆಪಿ (BJP) ಇದೀಗ ಸಾರ್ವಜನಿಕರ ಅಭಿಪ್ರಾಯ ಕೋರಿದೆ. ಜತೆಗೆ ಪ್ರಣಾಳಿಕೆಗೆ ಸಲಹೆಗಳನ್ನು ಸ್ವೀಕರಿಸುವುದಕ್ಕಾಗಿ ಶನಿವಾರ ಬೆಂಗಳೂರಿನಲ್ಲಿ ಸಭೆಯನ್ನೂ ಆಯೋಜಿಸಿದೆ. ಸಮೃದ್ಧ ಕರ್ನಾಟಕ ನಿರ್ಮಾಣಕ್ಕಾಗಿ ಶಿಕ್ಷಣ ಮತ್ತು ಕೌಶಲ ಕ್ಷೇತ್ರದವರು ನಿಮ್ಮ ಅಮೂಲ್ಯ ಸಲಹೆಗಳನ್ನು ಹಂಚಿಕೊಳ್ಳಬೇಕು ಎಂದು ಉನ್ನತ ಶಿಕ್ಷಣ ಸಚಿವ ಸಿಎನ್​ ಅಶ್ವತ್ಥನಾರಾಯಣ (CN Ashwath Narayan) ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಜತೆಗೆ, ಸಲಹೆಗಳನ್ನು ಭರ್ತಿ ಮಾಡಲು ಗೂಗಲ್​ ಲಿಂಕ್ ಅನ್ನೂ ಹಂಚಿಕೊಂಡಿದ್ದು, ಸಮೃದ್ಧ ಕರ್ನಾಟಕಕ್ಕಾಗಿ ಒಂದಾಗೋಣ ಎಂದು ಕರೆ ನೀಡಿದ್ದಾರೆ.

ಪ್ರಣಾಳಿಕೆ ಸಿದ್ಧತೆಗಾಗಿ ಸಮಾಲೋಚನೆ ನಡೆಸಲು ರಾಜಭವನ ರಸ್ತೆಯ ‘ದಿ ಕ್ಯಾಪಿಟಲ್ ಹೋಟೆಲ್​’ನಲ್ಲಿ ಬಿಜೆಪಿ ಶನಿವಾರ ಸಂಜೆ 5.30ಕ್ಕೆ ಸಭೆ ಆಯೋಜಿಸಿದೆ. ಬಿಜೆಪಿಯ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಚಿವರಾದ ಕೆ. ಸುಧಾಕರ್, ಅಶ್ವತ್ಥನಾರಾಯಣ, ಬಿಸಿ ನಾಗೇಶ್ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಕ್ಷೇತ್ರಗಳ ಪರಿಣತರೂ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: Amit Shah: ನಿಮ್ಮ ಮತ ಪಿಎಫ್​ಐ ನಿಷೇಧಿಸಿದ ಬಿಜೆಪಿಗೋ, ಭಯೋತ್ಪಾದನೆ ಬೆಂಬಲಿಸುವ ಕಾಂಗ್ರೆಸ್​ಗೋ; ಅಮಿತ್ ಶಾ

ರಾಜ್ಯದಲ್ಲಿ ಭರ್ಜರಿಯಾಗಿ ಚುನಾವಣಾ ಪ್ರಚಾರ ಆರಂಭಿಸಿರುವ ಬಿಜೆಪಿ ಇದೀಗ ಪ್ರಣಾಳಿಕೆ ತಯಾರಿ ಪ್ರಕ್ರಿಯೆಯಲ್ಲಿಯೂ ಆಯಾ ಕ್ಷೇತ್ರಗಳ ತಜ್ಞರು, ಸಾರ್ವಜನಿಕರನ್ನು ಸೇರಿಸಿಕೊಳ್ಳುವ ಮೂಲಕ ಜನರನ್ನು ಸೆಳೆಯಲು ಯತ್ನಿಸುತ್ತಿದೆ.

ಈ ಮಧ್ಯೆ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸಹ ಪದೇ ಪದೇ ರಾಜ್ಯಕ್ಕೆ ಭೇಟಿ ನೀಡಿ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ
ಗಂಡನ ಜೊತೆಗಿದ್ದರೂ ಬರ್ತೀಯಾ ಎಂದು ಕೇಳ್ತಾರೆ