AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಮ್ಮ ಬೇಡಿಕೆ ತಿಳಿಸಿ; ಚುನಾವಣಾ ಪ್ರಣಾಳಿಕೆಗೆ ಸಾರ್ವಜನಿಕರ ಅಭಿಪ್ರಾಯ ಕೋರಿದ ಬಿಜೆಪಿ

ಸಲಹೆಗಳನ್ನು ಭರ್ತಿ ಮಾಡಲು ಗೂಗಲ್​ ಲಿಂಕ್ ಅನ್ನೂ ಹಂಚಿಕೊಂಡಿದ್ದು, ಸಮೃದ್ಧ ಕರ್ನಾಟಕಕ್ಕಾಗಿ ಒಂದಾಗೋಣ ಎಂದು ಕರೆ ನೀಡಿದ್ದಾರೆ.

ನಿಮ್ಮ ಬೇಡಿಕೆ ತಿಳಿಸಿ; ಚುನಾವಣಾ ಪ್ರಣಾಳಿಕೆಗೆ ಸಾರ್ವಜನಿಕರ ಅಭಿಪ್ರಾಯ ಕೋರಿದ ಬಿಜೆಪಿ
ಬಿಜೆಪಿ
Ganapathi Sharma
|

Updated on: Mar 03, 2023 | 7:41 PM

Share

ಬೆಂಗಳೂರು: ಚುನಾವಣಾ ಪ್ರಣಾಳಿಕೆ ಸಿದ್ಧತೆ ಕಾರ್ಯವನ್ನು ಚುರುಕುಗೊಳಿಸಿರುವ ಬಿಜೆಪಿ (BJP) ಇದೀಗ ಸಾರ್ವಜನಿಕರ ಅಭಿಪ್ರಾಯ ಕೋರಿದೆ. ಜತೆಗೆ ಪ್ರಣಾಳಿಕೆಗೆ ಸಲಹೆಗಳನ್ನು ಸ್ವೀಕರಿಸುವುದಕ್ಕಾಗಿ ಶನಿವಾರ ಬೆಂಗಳೂರಿನಲ್ಲಿ ಸಭೆಯನ್ನೂ ಆಯೋಜಿಸಿದೆ. ಸಮೃದ್ಧ ಕರ್ನಾಟಕ ನಿರ್ಮಾಣಕ್ಕಾಗಿ ಶಿಕ್ಷಣ ಮತ್ತು ಕೌಶಲ ಕ್ಷೇತ್ರದವರು ನಿಮ್ಮ ಅಮೂಲ್ಯ ಸಲಹೆಗಳನ್ನು ಹಂಚಿಕೊಳ್ಳಬೇಕು ಎಂದು ಉನ್ನತ ಶಿಕ್ಷಣ ಸಚಿವ ಸಿಎನ್​ ಅಶ್ವತ್ಥನಾರಾಯಣ (CN Ashwath Narayan) ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ. ಜತೆಗೆ, ಸಲಹೆಗಳನ್ನು ಭರ್ತಿ ಮಾಡಲು ಗೂಗಲ್​ ಲಿಂಕ್ ಅನ್ನೂ ಹಂಚಿಕೊಂಡಿದ್ದು, ಸಮೃದ್ಧ ಕರ್ನಾಟಕಕ್ಕಾಗಿ ಒಂದಾಗೋಣ ಎಂದು ಕರೆ ನೀಡಿದ್ದಾರೆ.

ಪ್ರಣಾಳಿಕೆ ಸಿದ್ಧತೆಗಾಗಿ ಸಮಾಲೋಚನೆ ನಡೆಸಲು ರಾಜಭವನ ರಸ್ತೆಯ ‘ದಿ ಕ್ಯಾಪಿಟಲ್ ಹೋಟೆಲ್​’ನಲ್ಲಿ ಬಿಜೆಪಿ ಶನಿವಾರ ಸಂಜೆ 5.30ಕ್ಕೆ ಸಭೆ ಆಯೋಜಿಸಿದೆ. ಬಿಜೆಪಿಯ ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಸಚಿವರಾದ ಕೆ. ಸುಧಾಕರ್, ಅಶ್ವತ್ಥನಾರಾಯಣ, ಬಿಸಿ ನಾಗೇಶ್ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಕ್ಷೇತ್ರಗಳ ಪರಿಣತರೂ ಭಾಗವಹಿಸಲಿದ್ದಾರೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: Amit Shah: ನಿಮ್ಮ ಮತ ಪಿಎಫ್​ಐ ನಿಷೇಧಿಸಿದ ಬಿಜೆಪಿಗೋ, ಭಯೋತ್ಪಾದನೆ ಬೆಂಬಲಿಸುವ ಕಾಂಗ್ರೆಸ್​ಗೋ; ಅಮಿತ್ ಶಾ

ರಾಜ್ಯದಲ್ಲಿ ಭರ್ಜರಿಯಾಗಿ ಚುನಾವಣಾ ಪ್ರಚಾರ ಆರಂಭಿಸಿರುವ ಬಿಜೆಪಿ ಇದೀಗ ಪ್ರಣಾಳಿಕೆ ತಯಾರಿ ಪ್ರಕ್ರಿಯೆಯಲ್ಲಿಯೂ ಆಯಾ ಕ್ಷೇತ್ರಗಳ ತಜ್ಞರು, ಸಾರ್ವಜನಿಕರನ್ನು ಸೇರಿಸಿಕೊಳ್ಳುವ ಮೂಲಕ ಜನರನ್ನು ಸೆಳೆಯಲು ಯತ್ನಿಸುತ್ತಿದೆ.

ಈ ಮಧ್ಯೆ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸಹ ಪದೇ ಪದೇ ರಾಜ್ಯಕ್ಕೆ ಭೇಟಿ ನೀಡಿ ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?