AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಜನಾದ್ರಿ ಹೆಸರಿನಲ್ಲಿ ರಾಜಕೀಯ: ಬಿಜೆಪಿ ವಿರುದ್ಧ ಶಾಸಕ ಜನಾರ್ದನ ರೆಡ್ಡಿ ಅಸಮಾಧಾನ

ಬಿಜೆಪಿಯವರಿಗೆ ಅಂಜನಾದ್ರಿ ಬೆಟ್ಟ ಅಭಿವೃದ್ಧಿ ಮಾಡೋಕ್ಕಾಗಿಲ್ಲ. ಆದರೆ ಅಂಜನಾದ್ರಿ ಹೆಸರಿನಲ್ಲಿ ರಾಜಕೀಯ ಮಾಡಿದರು. ಕೇವಲ ಬಾಯಿ ಮಾತಿಗೆ ಹಿಂದುತ್ವ ಅಂದರೆ ಸಾಲದು. ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯದಲ್ಲಿ ನೀವು ಏನ್ ಮಾಡಿದ್ದೀರಿ ಎಂದು ಕೆಆರ್​​ಪಿಪಿ ಶಾಸಕ ಜನಾರ್ದನ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಂಜನಾದ್ರಿ ಹೆಸರಿನಲ್ಲಿ ರಾಜಕೀಯ: ಬಿಜೆಪಿ ವಿರುದ್ಧ ಶಾಸಕ ಜನಾರ್ದನ ರೆಡ್ಡಿ ಅಸಮಾಧಾನ
ಕೆಆರ್​​ಪಿಪಿ ಶಾಸಕ ಜನಾರ್ದನ ರೆಡ್ಡಿ
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Jul 27, 2023 | 4:06 PM

Share

ಕೊಪ್ಪಳ, ಜುಲೈ 27: ಬಿಜೆಪಿಯವರಿಗೆ ಅಂಜನಾದ್ರಿ ಬೆಟ್ಟ (Anjanadri Hill) ಅಭಿವೃದ್ಧಿ ಮಾಡೋಕ್ಕಾಗಿಲ್ಲ. ಆದರೆ ಅಂಜನಾದ್ರಿ ಹೆಸರಿನಲ್ಲಿ ರಾಜಕೀಯ ಮಾಡಿದರು. ಬಿಜೆಪಿಯವರು ಪ್ರತಿ ವಿಚಾರದಲ್ಲೂ ರಾಜಕೀಯ ಮಾಡುತ್ತಿದ್ದಾರೆ ಎಂದು ಕೆಆರ್​​ಪಿಪಿ ಶಾಸಕ ಜನಾರ್ದನ ರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇವಲ ಬಾಯಿ ಮಾತಿಗೆ ಹಿಂದುತ್ವ ಅಂದರೆ ಸಾಲದು. ಕಳೆದ ನಾಲ್ಕು ವರ್ಷಗಳಲ್ಲಿ ರಾಜ್ಯದಲ್ಲಿ ನೀವು ಏನ್ ಮಾಡಿದ್ದೀರಿ ಎಂದು ಪ್ರಶ್ನಿಸಿದರು.

ಸಿಎಂ ಸಿದ್ಧರಾಮಯ್ಯ ಭೇಟಿಯಾಗಿ ಅಭಿವೃದ್ಧಿ ಮಾಡುವಂತೆ ಮನವಿ ಮಾಡಿದ್ದೇನೆ. ಅಭಿವೃದ್ಧಿ ಮಾಡುವುದಕ್ಕೆ ನಿಮಗೆ ಅವಕಾಶವಿದೆ ಅಂತಾ ಹೇಳಿದ್ದೇನೆ. ಈಗಾಗಲೇ 120 ಕೋಟಿ ಅನುದಾನ ಮೀಸಲಿದೆ ಎಂದರು.

ಇದನ್ನೂ ಓದಿ: ಗಂಗಾವತಿ ಕ್ಷೇತ್ರದ ಪ್ರತಿ ಗ್ರಾಪಂಗೆ ಒಂದು ಕೋಟಿ ರೂಪಾಯಿ ಅನುದಾನ; ಗಾಲಿ ಜನಾರ್ದನ ರೆಡ್ಡಿ ಭರವಸೆ

ಅಯೋಧ್ಯೆ, ತಿರುಪತಿ‌ ಮಾದರಿಯಲ್ಲಿ ಅಂಜನಾದ್ರಿ ಬೆಟ್ಟ ಅಭಿವೃದ್ಧಿ

ಹಲವಾರು ಉದ್ಯಮಿಗಳ ಜತೆ ಮಾತನಾಡಿ ಅಯೋಧ್ಯೆ, ತಿರುಪತಿ‌ ಮಾದರಿಯಲ್ಲಿ ಅಂಜನಾದ್ರಿ ಬೆಟ್ಟ ಅಭಿವೃದ್ಧಿ ಮಾಡುತ್ತೇನೆ. ಆಗಸ್ಟ್​ನಲ್ಲಿ ದೇಶದ ಪ್ರಮುಖ ವಾಸ್ತು ಶಿಲ್ಪಿಗಳನ್ನ ಕರೆಸಲಾಗುವುದು. ಪರಿಸರಕ್ಕೆ ಯಾವುದೇ ರೀತಿ ಹಾನಿಯಾಗದೇ ಅಭಿವೃದ್ಧಿಪಡಿಸುತ್ತೇವೆ. ಪ್ರಧಾನಿ ನರೇಂದ್ರ ಮೋದಿಯವರ ಬಳಿಯೂ ಹೋಗಿ ಅಭಿವೃದ್ಧಿಗೆ ಹಣ ತರುತ್ತೇನೆ ಎಂದು ಹೇಳಿದರು.

ಇದನ್ನೂ ಓದಿ: ಡಿಜೆ ಹಳ್ಳಿ-ಕೆಜಿ ಹಳ್ಳಿ ಗಲಭೆ ಕೇಸ್​: ಸಿಎಂ ಸಿದ್ಧರಾಮಯ್ಯ ಭೇಟಿ ಮಾಡಿ​ ಸ್ಪಷ್ಟೀಕರಣ ನೀಡಿದ ಶಾಸಕ ತನ್ವೀರ್ ಸೇಠ್​

ನಮ್ಮ ತುಂಗಭದ್ರಾ ಡ್ಯಾಂನಲ್ಲಿ ಈಗಾಗಲೆ ಸಾಕಷ್ಟು ನೀರು ಬಂದಿದೆ‌. 30 ಟಿಎಂಸಿ ನೀರು ಇದ್ದರೆ, ನೀರು ಬಿಡುವುದಕ್ಕೆ ಯಾವುದೇ ತೊಂದರೆಯಿಲ್ಲ‌. ಆದರೆ ತಂಗಡಗಿಗವರು ಮೀಟಿಂಗ್ ಮಾಡುತ್ತೇವೆ ಅಂತಾರೆ. ಬಹುಶಃ ಅವರಿಗೆ ಮಾಹಿತಿ ಕೊರತೆ ಇರಬಹುದು ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 4:06 pm, Thu, 27 July 23

Follow Us
Dattatraya Patil
Dattatraya Patil

ಮೂಲತಃ ಕಲಬುರಗಿ ಜಿಲ್ಲೆಯವರಾದ ದತ್ತಾತ್ರೇಯ ಪಾಟೀಲ್ ಸಧ್ಯ ಟಿರ್ವಿ ಕನ್ನಡ ವಾಹಿನಿಯ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಟಿರ್ವಿ ಸಂಸ್ಥೆಯಲ್ಲಿ ಕೆಲಸ‌ ಮಾಡುತ್ತಿದ್ದು ಜ,2015 ರಿಂದ 22 ರವೆಗೆ ಹುಬ್ಬಳ್ಳಿಯ ವರದಿಗಾರಾಗಿ, ಕಳೆದೊಂದು ವರ್ಷ ಕೊಪ್ಪಳ ಸಧ್ಯ ಮೂರು ತಿಂಗಳಿಮದ ಕಲಬುರಗಿ ಜಿಲ್ಲಾ ವರದಿಗಾರರಾಗಿ ಕೆಲಸ ಮಾಡುತ್ತಿದ್ದು, ಕೊರೊನಾ ಸಮಯದಲ್ಲಿ ವೈದ್ಯರ ಕಳ್ಳಾಟದ ಮಾಡಿದ ರಹಸ್ಯ ಕಾರ್ಯಚರಣೆ.ಆಪರೇಷನ್ ಕಮಲದ ಕುರಿತು ಸ್ಪೋಟಕ ಬಿಎಸ್ ವೈ ವಿಡಿಯೋ ದ ಎಕ್ಸಕ್ಲೂಸಿವ್ ವರದಿಯ ಜೊತೆಗೆ ರಾಜಕೀಯ ವರದಿಗಾರಿಕೆಯಲ್ಲಿಯೂ ಆಸಕ್ತಿ ಹೊಂದಿದ್ದು, ಬಿಡುವಿನ ಸಮಯದಲ್ಲಿ ಪುಸ್ತಕ ಓದುವುದು,ಪ್ರೇಕ್ಷಣೀಯ ಹಾಗೂ ಐತಿಹಾಸಿಕ ಸ್ಥಳಗಳ ಪ್ರವಾಸ,ಮತ್ತು ಟ್ರೆಕ್ಕಿಂಗ್ ಹವ್ಯಾಸ ರೂಢಿಸಿಕೊಂಡಿದ್ದಾರೆ.

Read More